ಪಂಚಭೂತಗಳಲ್ಲಿ ಲೀನರಾದ ಶತಮಾನದ ಸಂತ ಸಿದ್ದೇಶ್ವರ ಶ್ರೀ


Team Udayavani, Jan 3, 2023, 9:12 PM IST

ಪಂಚಭೂತಗಳಲ್ಲಿ ಲೀನರಾದ ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ

ವಿಜಯಪುರ: ಶತಮಾನದ ಸಂತ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಪಾರ್ಥಿವ ಶರೀರವನ್ನು ವಿಜಯಪುರದ ಜ್ಞಾನಯೋಗಾಶ್ರಮದ ಆವರಣದಲ್ಲಿ ಅಗ್ನಿಸ್ಪರ್ಶದ ಮೂಲಕ ಅಂತ್ಯಕ್ರಿಯೆ ಮಂಗಳವಾರ ರಾತ್ರಿ ಒಂಬತ್ತು ಗಂಟೆಯ ವೇಳೆಗೆ ನೆರವೇರಿಸಲಾಯಿತು.

ಜ್ಞಾನಯೋಗಾಶ್ರಮ ಮಠದ ಅಧ್ಯಕ್ಷರಾದ ಬಸವಲಿಂಗಯ್ಯ ಸ್ವಾಮೀಜಿ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಶ್ರೀಗಳ ಇಚ್ಚೆಯಂತೆ ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೆ ಅಂತ್ಯಕ್ರಿಯೆ ನೆರವೇರಿತು .

ಪಾರ್ಥಿವ ಶರೀರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಅದಕ್ಕೂ ಮೊದಲು ಸರ್ಕಾರದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಸೆಟ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ಆ ಬಳಿಕ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಿದರು.

ವಿಜಯಪುರ ನಗರದ ಸೈನಿಕ ಶಾಲೆಯಿಂದ 5 ಕಿ.ಮೀ ದೂರವಿರುವ ಜ್ಞಾನಯೋಗಾಶ್ರಮ ಮಠದ ಆವರಣದವರೆಗೆ ಶ್ರೀಗಳ ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತರಲಾಯಿತು. ಈ ವೇಳೆ ಲಕ್ಷಾಂತರ ಭಕ್ತರು ದರ್ಶನ ಪಡೆದರು.

ಇದನ್ನೂ ಓದಿ: ಸರ್ಕಸ್ ಪ್ರದರ್ಶನದ ವೇಳೆ ತರಬೇತುದಾರನ ಮೇಲೆಯೇ ದಾಳಿ ಮಾಡಿದ ಹುಲಿ… ವಿಡಿಯೋ ವೈರಲ್

ಅಂತ್ಯಕ್ರಿಯೆಗೆ ಬಾಗಲಕೋಟೆಯ ಶ್ರೀಗಂಧ, ಬಬಲೇಶ್ವರ ಭಕ್ತೆಯ ಬೆರಣಿ, ತುಪ್ಪ ಬಳಕೆ

ಸಿದ್ಧೇಶ್ವರ ಶ್ರೀಗಳ ಆಶಯದಂತೆ ಅವರ ಪಾರ್ಥಿವ ಶರೀರವನ್ನು ಹೂಳದೇ ಅಗ್ನಿಗೆ ಅರ್ಪಣೆ ಮಾಡಲಾಯಿತು. ಇದಕ್ಕಾಗಿ ಬಾಗಲಕೋಟೆಯಿಂದ ಶ್ರೀಗಂಧದ ಕಟ್ಟಿಗೆ ಹಾಗೂ ಬಬಲೇಶ್ವರದ ಭಕ್ತೆ ತಂದಿದ್ದ ದೇಶಿ ಗೋವಿನ ತುಪ್ಪ, ಬೆರಣಿ ಬಳಸಲಾಯಿತು. ಬಾಗಲಕೋಟೆಯ ಹಲ್ಯಾಳದ ಗುರುದೇವಾಶ್ರಮದ ಹರ್ಷಾನಂದ ಶ್ರೀಗಳು ತಮ್ಮ ಆಶ್ರಮದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳ ಕಟ್ಟಿಗೆಯನ್ನು ಶ್ರೀಗಳ ಅಂತ್ಯಸಂಸ್ಕಾರಕ್ಕೆ ಜ್ಞಾನಯೋಗಾಶ್ರಮಕ್ಕೆ ತಂದಿದ್ದರು. ಇನ್ನು ಶ್ರೀಗಳ ಚಿತಾಸ್ಪರ್ಶದ ಮಾಹಿತಿ ತಿಳಿಯುತ್ತಲೇ ದೇಶಿ ಗೋ ಸಂರಕ್ಷಕ ಕುಟುಂಬವಾದ ಶಿರಮಗೊಂಡ ಲಕ್ಷ್ಮೀ ಹಾಗೂ ಬಸಗೊಂಡ ದಂಪತಿ ಸ್ವತಃ ತಾವೇ ತಯಾರಿಸಿದ ಎರಡು ಚೀಲ ಬೆರಣಿ ತಂದಿದ್ದರು. ಅಲ್ಲದೇ, ಸೋಮವಾರ ಹೆಪ್ಪು ಹಾಕಿದ ಹಾಲಿನಿಂದ ಮಂಗಳವಾರ ಬೆಳಗ್ಗೆ ಲಭ್ಯವಾದ ಬೆಣ್ಣೆಯಿಂದ ದೊರೆತ 200 ಗ್ರಾಂ ತುಪ್ಪವನ್ನು ಶ್ರೀಗಳ ಅಂತಿಮ ಸಂಸ್ಕಾರಕ್ಕಾಗಿ ಅರ್ಪಿಸಿದರು.

ಗಣ್ಯರ ನುಡಿ ನಮನ
ಸ್ವಾಮಿ ವಿವೇಕಾನಂದರ ನಂತರ ದೇಶದಲ್ಲಿ ಬಹುದೊಡ್ಡ ಪ್ರೇರಕ ಶಕ್ತಿಯಾಗಿ ತಮ್ಮ ಮಾತುಗಳಿಂದ ಜನರನ್ನು ಆಕರ್ಷಿಸುವ ಶಕ್ತಿ ಸಿದ್ಧೇಶ್ವರ ಶ್ರೀಗಳಿಗೆ ಮಾತ್ರವೇ ಇತ್ತು. ಅಂಥ ಮಹಾನ್‌ ಜ್ಞಾನಿ ಸಂತನನ್ನು ಕಳೆದುಕೊಂಡು ನಾಡು ಬಡವಾಗಿದೆ. ಭಾರತದ ಧಾರ್ಮಿಕ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದ ನಿರ್ಮೋಹಿ ಶ್ರೇಷ್ಠಸಂತ. ಶಿವಾನಂದ ಪರಂಪರೆಯ ಮಲ್ಲಿಕಾರ್ಜುನ ಶ್ರೀಗಳ ಶಿಷ್ಯರಾದರೂ ಪರಂಪರೆಯನ್ನು ಮೀರಿ ಧಾರ್ಮಿಕ ನೆಲೆಯಲ್ಲೇ ಶ್ರೇಷ್ಠತೆಯಿಂದ ಸಮಾಜ ಸುಧಾರಿಸಿದರು. ಸಾವು ಮೀರಿದ, ಜಯಿಸಿದ ಸಿದ್ಧೇಶ್ವರರು. ಪ್ರಕೃತಿ ಇರುವವರೆಗೂ ಸೃಷ್ಟಿಯೊಂದಿಗೆ ಜೀವಂತವಾಗಿರುತ್ತಾರೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ನುಡಿದಂತೆ ನಡೆದ ಸರಳತೆಯ ಸಂತರಾಗಿದ್ದ ಸಿದ್ಧೇಶ್ವರ ಶ್ರೀಗಳು ಶಿವಮೊಗ್ಗಕ್ಕೆ ಬಂದಿದ್ದಾಗ ನಮ್ಮ ಮನೆಗೆ ಬಂದಿದ್ದರು. ಅದು ನನ್ನ ಜೀವನದ ಸೌಭಾಗ್ಯವಾಗಿತ್ತು. ವಿಜಯಪುರದ ಸ್ವಾಮಿ ವಿವೇಕಾನಂದರೇ ಆಗಿದ್ದ ಶ್ರೀಗಳು, ದೈಹಿಕವಾಗಿ ಅಗಲಿದ್ದರೂ ಅವರು ಆದರ್ಶದ ಜೀವನ ನಮ್ಮ ಮಧ್ಯೆ ಸದಾ ಜೀವಂತವಾಗಿರಲಿದೆ.
– ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಕೇವಲ ತಮ್ಮ ನಡೆ, ನುಡಿಗಳಿಂದಲೇ ಜಗತ್ತಿನ ಆಕರ್ಷಣೆಯಾಗಿದ್ದ ಸಿದ್ಧೇಶ್ವರರು ಕೋಟ್ಯಂತರ ಭಕ್ತರ ಹೃದಯ ಗೆದ್ದ ಬಹು ದೊಡ್ಡ ಸಂತ ಎನಿಸಿದ್ದರು. ದೇಶದ ಸಂತರಲ್ಲಿ ಶ್ರೇಷ್ಠತೆಯನ್ನು ಪಡೆದಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳದೇ ನಮ್ಮನ್ನು ಅಗಲಿರುವುದು ನೋವಿನ ಸಂಗತಿ.
– ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಶ್ರೀ ಸಿದ್ಧೇಶ್ವರಸ್ವಾಮಿಗಳು ಯಾವ ಲೌಕಿಕ ವಿಶೇಷಣಗಳಿಗೂ ನಿಲುಕುವಂಥವರಲ್ಲ. ಅವರನ್ನು ಜನತೆ ನಡೆದಾಡುವ ದೇವರು ಎಂದು ಪ್ರೀತ್ಯಾದರಗಳಿಂದ ಗೌರವಿಸುತ್ತಿದ್ದರು. ನಿಜವಾದ ಅರ್ಥದಲ್ಲಿ ಅವರೊಬ್ಬರು ಅವಧೂತರು. ವೇದಾಂತಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರಿಂದ ಅಧ್ಯಾತ್ಮದೀಕ್ಷೆ ಪಡೆದು, ಸಕಲಶಾಸ್ತ್ರ ವಿಶಾರದರಾದ ಅವರು ಪುರಾಣಕಾಲದ ಋಷಿಸದೃಶ್ಯ ವ್ಯಕ್ತಿತ್ವ ಹೊಂದಿದ್ದ ಜ್ಞಾನನಿಧಿಗಳು.
-ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಸಿದ್ದೇಶ್ವರ ಅಪ್ಪಾಜಿ ಈ ಶತಮಾನದ ವ್ಯಕ್ತಿಗಳು. ಯುಗ ಪುರುಷರು, ಅವರಿಗೆ ಯಾವುದೇ ಪಂಥಗಳು ಇರಲಿಲ್ಲ. ಯಾವುದೇ ಗ್ರಂಥಗಳಿಗೆ ಅಂಟಿಕೊಂಡಿರಲಿಲ್ಲ. ಆದರೆ ಜನರ ಹೃದಯ ಗ್ರಂಥಿಗಳಲ್ಲಿ ಸದಾ ಉಳಿದ ಸಂತ. ಅವರು ಸುಳಿದಲ್ಲೆಲ್ಲಾ ಸೂಯಿದಾನ, ಸಮಾಧಾನಗಳು. ಅವರು ನಿಂತ ನಿಲುವು ಅದು ಸತ್ಯದ ಒಲವು. ಅವರು ಮಾಯ ಮುಟ್ಟದ ಕಾಯ, ಭ್ರಮೆಯಿಲ್ಲದ ಭಾವ, ಲೋಕವನ್ನು ಪ್ರೀತಿಸಿ, ಲೋಕಾಂತವನ್ನು ಪ್ರೀತಿಸಿ ತಾವು ಏಕಾಂತವಾಗಿ ಉಳಿದವರು.
– ಗವಿಸಿದ್ದೇಶ್ವರ ಮಹಾಸ್ವಾಮೀಜಿ, ಕೊಪ್ಪಳ

ಕೃಷಿ-ಋಷಿ ಪರಂಪರೆಯನ್ನು ಸಮನ್ವಯಗೊಳಿಸಿದ ಅನಘÂì ಸಂತ. ಸಿದ್ಧೇಶ್ವರ ಶ್ರೀಗಳ ಜೀವನವೇ ಶ್ರೇಷ್ಠ ಮಾದರಿ ಮಾರ್ಗ. ಓರ್ವ ಸಂತ ಹೇಗಿರಬೇಕು ಎಂಬುದಕ್ಕೆ ಅವರೊಬ್ಬರೇ ಮಾದರಿ.
– ನಿಜಗುಣಾನಂದ ಶ್ರೀ, ಬೈಲೂರು

ದೇವರನ್ನ ಕಳೆದುಕೊಂಡಿದ್ದೇನೆ. ಜ್ಞಾನ ನೀಡುವ ಧ್ವನಿ ನಿಂತು ಹೋಗಿರುವುದು ನೋವು ತರಿಸಿದೆ. ನಾಡಿಗೆ ಕೀರ್ತಿ ತಂದಿದ್ದ ನಡೆದಾಡುವ ದೇವರೊಂದಿಗೆ ನನಗೆ 25 ವರ್ಷಗಳಿಂದ ಒಡನಾಟವಿತ್ತು. ಜ್ಞಾನಯೋಗಾಶ್ರಮದೊಂದಿಗೆ ನನಗಿದ್ದ ನಂಟು, ಶ್ರೀಗಳಿಂದ ನನಗೆ ಸಿಗುತ್ತಿದ್ದ ಮಾರ್ಗದರ್ಶನ ಅವರ್ಣನೀಯ.
– ಶ್ರೀರಾಮುಲು, ಸಾರಿಗೆ ಸಚಿವ

ಸಿದ್ಧೇಶ್ವರ ಶ್ರೀಗಳು ತಮ್ಮ ಜ್ಞಾನ ದಾಸೋಹದ ಮೂಲಕ ಅಸಂಖ್ಯ ವಿವೇಕಾನಂದರನ್ನು ರೂಪಿಸಿದ್ದರು. ಮುಂದಿನ ಪೀಳಿಗೆಗೆ ಶ್ರೀಗಳ ಆದರ್ಶಗಳನ್ನು ಕೊಂಡೊಯ್ಯಲು ಸರ್ಕಾರ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳ ಪಠ್ಯದಲ್ಲೂ ಅಳವಡಿಸಬೇಕು.
– ಪ್ರಮೋದ ಮುತಾಲಿಕ್‌, ಮುಖ್ಯಸ್ಥರು, ಶ್ರೀರಾಮ ಸೇನೆ

ಟಾಪ್ ನ್ಯೂಸ್

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

India’s first bullet train to be made in Bangalore?

Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್‌ ರೈಲು?

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.