86ನೇ ನುಡಿ ಜಾತ್ರೆಗೆ ಏಲಕ್ಕಿ ನಗರಿ ಝಗಮಗ


Team Udayavani, Jan 5, 2023, 6:35 AM IST

tdy-24

ಹಾವೇರಿ: 86ನೇ ನುಡಿ ಜಾತ್ರೆಗೆ ಸಿದ್ಧಗೊಂಡಿರುವ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಹಳದಿ, ಕೆಂಪು ಬಾವುಟಗಳು ರಾರಾಜಿಸುತ್ತಿವೆ. ನಗರದಾದ್ಯಂತ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಿದ್ದು, ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳು ವಿವಿಧ ಬಣ್ಣಗಳ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ನಗರದ ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್‌ ಸರ್ಕಲ್‌, ಅಂಬೇಡ್ಕರ್‌ ಸರ್ಕಲ್‌, ಗಾಂ ಧಿ ಸರ್ಕಲ್‌, ಬಸವೇಶ್ವರ ಸರ್ಕಲ್‌, ಜೆ.ಎಚ್‌.ಪಟೇಲ್‌ ವೃತ್ತ, ಎಂಎಂ ಸರ್ಕಲ್‌, ಜೆಪಿ ಸರ್ಕಲ್‌, ಸಂಗೂರ ಕರಿಯಪ್ಪ ಸರ್ಕಲ್‌ ಸೇರಿದಂತೆ ಮುಂತಾದ ವೃತ್ತಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಅಲ್ಲದೇ, ಹಳದಿ, ಕೆಂಪು ಬಟ್ಟೆಗಳನ್ನು ಅಳವಡಿಸಿ ನಗರವನ್ನು ಶೃಂಗರಿಸಲಾಗಿದೆ.

ಕೆಇಬಿ ಸರ್ಕಲ್‌ನಿಂದ ಹುಬ್ಬಳ್ಳಿ ರೋಡ್‌ ಬೈಪಾಸ್‌ವರೆಗೆ ಹಳೆ ಪಿ.ಬಿ. ರಸ್ತೆ, ಎಂ.ಜಿ. ರಸ್ತೆ, ಗುತ್ತಲ ರಸ್ತೆ ಮಾರ್ಗ, ತೋಟದ ಯಲ್ಲಾಪುರ ಮಾರ್ಗ, ಹಾನಗಲ್ಲ ಬೈಪಾಸ್‌ವರೆಗೆ, ಕಾಗಿನೆಲೆ ಬೈಪಾಸ್‌, ಜಿಲ್ಲಾ ಧಿಕಾರಿಗಳ ಕಚೇರಿ ರಸ್ತೆ ಮಾರ್ಗ, ಹಳೆ ಅಂಚೆ ಕಚೇರಿ ಮಾರ್ಗ, ಎಂಪಿಎಂಸಿ ಮಾರ್ಗ ಸೇರಿದಂತೆ ನಗರದ ಪ್ರಮುಖ ರಸ್ತೆ ಮಾರ್ಗಗಳಲ್ಲಿ ವಿದ್ಯುತ್‌ ದೀಪಗಳು ಝಗಮಗಿಸುತ್ತಿವೆ.

ಹೂವಿನ ಅಲಂಕಾರ:

ನಗರದ ವೃತ್ತ, ಡಿವೈಡರ್‌, ಪ್ರವೇಶ ದ್ವಾರ ಹಾಗೂ ಬಸ್‌ ನಿಲ್ದಾಣದ ಎದುರುಗಡೆ ಇರುವ ಸ್ಥಳಗಳಲ್ಲಿ ವಿವಿಧ ಹೂವುಗಳ ಅಲಂಕಾರಕ್ಕಾಗಿ ಗುಲಾಬಿ, ಸಾಲ್ವಿಯಾ, ಪೆಟೋನಿಯಾ, ಪ್ಲಾಕ್ಸ್‌, ಗೋಲ್ಡನ್‌ ರಾಡ್‌ ಮುಂತಾದ ಹೂವುಗಳನ್ನು ಬಳಸಲಾಗುತ್ತದೆ. ಜರ್ಬೆರಾ, ಆರ್ಕಿಡ್‌, ಅಂತೋರಿಯಂ, ಬರ್ಡ್‌ ಆಫ್‌ ಪ್ಯಾರಾಡೈಸ್‌, ಗ್ಲಾಡಿಯೋಲಸ್‌, ಕಾರ್ನೆಷನ್‌, ಲಿಲ್ಲಿ ಹೂವುಗಳಿಂದ ನಗರವನ್ನು ಅಲಂಕರಿಸಲು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ.

ಒಂದು ಸಾವಿರ ಕನ್ನಡ ಬಾವುಟ:

ಒಂದು ಸಾವಿರ ಕನ್ನಡ ಧ್ವಜಗಳನ್ನು ನಗರದ ವಿವಿಧೆಡೆ ಅಳವಡಿಸಲಾಗುತ್ತಿದ್ದು, ಹಳದಿ, ಕೆಂಪು ಬಾವುಟಗಳಿಂದ ಶೃಂಗರಿಸಲಾಗುತ್ತಿದೆ. ನಗರದ ಪ್ರಮುಖ ಪ್ರವೇಶ ಮಾರ್ಗದಲ್ಲಿ ಪ್ರವೇಶ ದ್ವಾರಗಳನ್ನು ನಿರ್ಮಿಸಿದ್ದು, ನಗರದ ಬಸ್‌ ನಿಲ್ದಾಣದ ಮೇಲ್ಸೇತುವೆಗೆ ಫ್ಲೆಕ್ಸ್‌ ಬೋರ್ಡ್‌ ಅಳವಡಿಸಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಕಿದ್ದು ಗಮನ ಸೆಳೆಯುತ್ತಿದೆ.

ನಗರದ ಎಲ್ಲ ವೃತ್ತ, ವಿದ್ಯುತ್‌ ಕಂಬ, ಡಿವೈಡರ್‌ ಕಂಬಗಳಿಗೆ ವಿಶೇಷ ಹೂವಿನ ಅಲಂಕಾರ, ಕನ್ನಡ ಧ್ವಜದ ಮಾದರಿಯಲ್ಲಿ ಕೆಂಪು-ಹಳದಿ ಬಟ್ಟೆಯಿಂದ ಶೃಂಗಾರ ಹಾಗೂ ಕಾಂಪೌಂಡ್‌ಗಳ ಮೇಲೆ ವರ್ಲಿಕಲೆ ಜತೆಗೆ ಚಿತ್ರಕಲಾ ಬರಹ ಬಿಡಿಸಿರುವುದು ನಗರದ ಸೌಂದರ್ಯಕ್ಕೆ ಮೆರಗು ನೀಡುತ್ತಿದೆ.

ಅದ್ಧೂರಿ ಮೆರವಣಿಗೆ:

ಅಕ್ಷರ ಜಾತ್ರೆಗೆ ಸಾಂಸ್ಕೃತಿಕ ಮೆರಗು ಹಾಗೂ ಅದ್ಧೂರಿತನ ತರುವ ನಿಟ್ಟಿನಲ್ಲಿ ಸಮ್ಮೇಳನದ ಮೆರವಣಿಗೆಯನ್ನು ವಿಶಿಷ್ಟವಾಗಿ ನಡೆಸಲಾಗುತ್ತಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಅರಮನೆ ದರ್ಬಾರ್‌ ಮಾದರಿ ಭವ್ಯ ರಥವನ್ನು ಸಿದ್ಧಗೊಳಿಸಲಾಗಿದೆ. ಮೆರವಣಿಗೆಗಾಗಿ 15ಸಾವಿರ ಕನ್ನಡ ಧ್ವಜ, 10 ಸಾವಿರ ಶಲ್ಯ ಸಿದ್ಧಪಡಿಸಲಾಗಿದೆ. ಸ್ವಯಂಸೇವಕರಿಗೆ ಬ್ಯಾಡ್ಜ್ ಹಾಗೂ ಐಡಿ ಕಾರ್ಡ್‌ ನೀಡಲಾಗುತ್ತಿದೆ. ಮೆರವಣಿಗೆಯಲ್ಲಿ 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ನಗರದಲ್ಲಿ ಹಬ್ಬದ ವಾತಾವರಣ ನಿರ್ಮಿಸಲು ಸಿದ್ಧತೆ ನಡೆಸಿದ್ದೇವೆ ಎಂದು ಮೆರವಣಿಗೆ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಸವರಾಜ ಶಿವಣ್ಣನವರ ತಿಳಿಸಿದರು.

100 ಕಲಾ ತಂಡುಗಳು ಭಾಗಿ:

ರಾಜ್ಯದ 31 ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕರೆತರಲು 12 ಸಾರೋಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಒಂದು ಸಾರೋಟಿನಲ್ಲಿ ಮೂವರು ಅಧ್ಯಕ್ಷರು ಆಸೀನರಾಗಲಿದ್ದಾರೆ. ಚಂಡಿಮದ್ದಳೆ, ನಂದಿಕೋಲು, ಪೂಜಾ ಕುಣಿತ, ಕಂಸಾಳೆ, ಪುರವಂತಿಕೆ, ಜಗ್ಗಲಿಗೆ, ಡೊಳ್ಳು, ಝಾಂಜ್‌, ಕರಡಿಮಜಲು, ಲಂಬಾಣಿ ನೃತ್ಯ, ಮಹಿಳಾ ವೀರಗಾಸೆ, ಹಲಗೆ, ಜಗ್ಗಲಿಗೆ, ಕೋಲಾಟ ಸೇರಿದಂತೆ 100ಕ್ಕೂ ಅ ಧಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ಹಾವೇರಿ ಜಿಲ್ಲೆಯ 50 ಕಲಾ ತಂಡಗಳಿಗೆ ಆದ್ಯತೆ ನೀಡಿದ್ದರೆ, ಹೊರ ಜಿಲ್ಲೆಯ 50 ಕಲಾ ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದ ಚಂಡಿಮದ್ದಳೆ ಆಯ್ಕೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಸಾಗುವ ಕಲಾವಿದರು, ಸಾರ್ವಜನಿಕರಿಗೆ ಆರು ಸ್ಥಳಗಳಲ್ಲಿ ನೀರು, ತಂಪು ಪಾನೀಯ, ಚಾಕೋಲೇಟ್‌ ವ್ಯವಸ್ಥೆ ಮಾಡಲಾಗಿದೆ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ.

ಕನಕ ಕೋಟೆ ಮಾದರಿ ಮುಖ್ಯದ್ವಾರ: 

ನುಡಿ ಜಾತ್ರೆ ನಡೆಯುವ ವೇದಿಕೆ ಸ್ಥಳದಲ್ಲಿ ಬಾಡದ ಕನಕ ಅರಮನೆ ಮಾದರಿಯ ಕೋಟೆ ಶೈಲಿಯಲ್ಲಿ ಸಮ್ಮೇಳನದ ಪ್ರಧಾನ ವೇದಿಕೆಯ ಮುಖ್ಯದ್ವಾರವನ್ನು ನಿರ್ಮಿಸಿರುವುದು ವಿಶೇಷವಾಗಿದೆ. 20 ಅಡಿ ಅಗಲ, 15 ಅಡಿ ಎತ್ತರದ ದ್ವಾರಗಳನ್ನು ಒಳಗೊಂಡ ಕೋಟೆ ಬಾಗಿಲುಗಳನ್ನು ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌, ಥರ್ಮಾಕೋಲ್‌, ಕಬ್ಬಿಣದ ಪೈಪ್‌ ಹಾಗೂ ಪ್ಲೈವುಡ್‌ ಬಳಸಿ ನಿರ್ಮಿಸಲಾಗಿದೆ.

-ವೀರೇಶ ಮಡ್ಲೂರ

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.