![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 5, 2023, 3:05 PM IST
ಮಂಗಳೂರು: ”ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾಯಿ ಮರಿ ಎಂದು ಕರೆದಿಲ್ಲ. ನಾಯಿ ಮರಿ ತರ ಇರಬಾರದು ಅಂದಿದ್ದೆ, ಅದು ಅಸಂಸದೀಯ ಪದವಲ್ಲ” ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು ನಾಯಿ ಮರಿ ಅಂತ ನಾನು ಹೇಳಿಲ್ಲ.ಧೈರ್ಯ ಇರಬೇಕು.ರಾಜ್ಯದ ಹಿತ ಬಹಳ ಮುಖ್ಯ. ಕೇಂದ್ರ ಸರ್ಕಾರದಿಂದ ಅನುದಾನ ತರುವಲ್ಲಿ ಅವರು ಧೈರ್ಯ ತೋರಬೇಕು.ನಾಯಿ ಮರಿ ತರ ಇರಬಾರದು ಅಂತ ಹೇಳಿದ್ದೆ ಅಷ್ಟೇ. ಅದು ಅಸಂಸದೀಯ ಪದ ಅಲ್ಲ. ನನಗೆ ಟಗರು, ಹುಲಿಯ ಅಂತ ಕರೆಯುತ್ತಾರೆ. ಯಡಿಯೂರಪ್ಪ ಅವರಿಗೆ ರಾಜಾ ಹುಲಿ ಅಂತ ಅವರ ಪಕ್ಷದವರೇ ಕರೆಯುತ್ತಾರೆ. ಹಾಗಾದರೆ ಯಡಿಯೂರಪ್ಪ ಅವರು ಹುಲಿನಾ” ಎಂದು ಪ್ರಶ್ನಿಸಿದರು.
”15 ನೇ ಹಣಕಾಸು ಆಯೋಗ ದಲ್ಲಿ ರಾಜ್ಯಕ್ಕೆ 5,495 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಶಿಫಾರಸು ಮಾಡಲಾಗಿತ್ತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ತರುವಲ್ಲಿ ಸಿಎಂ ಧೈರ್ಯ ತೋರಲಿಲ್ಲ, ಧೈರ್ಯ ತೋರಬೇಕು ಎಂದು ಹೇಳಿದ್ದೆ. ನಾಯಿ ಅಂದರೆ ನಂಬಿಕೆ ಇರುವಂತಹ ಪ್ರಾಣಿ” ಎಂದರು.
ನಾನೇನು ಅಲೆಮಾರಿ ರಾಜಕಾರಣಿಯೇ?
”ಉಳ್ಳಾಲದಿಂದ ಸ್ಪರ್ಧಿಸುತ್ತೀರಾ” ಎಂದು ಪ್ರಶ್ನಿಸಿದಾಗ,”ನಾನೇನು ಅಲೆಮಾರಿ ರಾಜಕಾರಣಿಯೇ? ಕ್ಷೇತ್ರದಲ್ಲಿ ಅಭಿಮಾನಿಗಳು ಕರೆಯುತ್ತಿದ್ದಾರೆ ನಿಜ. ವರುಣಾದಲ್ಲಿ ನನ್ನ ಮಗ ಮತ್ತು ಕಾರ್ಯಕರ್ತರು ಸ್ಪರ್ಧಿಸಲು ಹೇಳಿದ್ದಾರೆ. ಬಾದಾಮಿಯಲ್ಲೇ ಸ್ಪರ್ಧಿಸಲು ಜನ ಒತ್ತಾಯಿಸುತ್ತಿದ್ದಾರೆ” ಎಂದರು.
”ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಾಲಿಷ ಹೇಳಿಕೆ ನೀಡುವ ವಿದೂಷಕ. ಅವರ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನನ್ನನ್ನು ಜೈಲಿಗೆ ಹಾಕುತ್ತಾರೆ ಅಂದಿದ್ದಾರೆ. ಅವರು ಜೈಲಿಗೆ ಹಾಕುವುದಲ್ಲ. ಕೋರ್ಟ್ ಗಳು ಜೈಲಿಗೆ ಕಳುಹಿಸುವುದು. ವಿಚಾರಣೆ ಮಾಡಿ ತಪ್ಪಿತಸ್ಥ ಅಂದಾದರೆ ಜೈಲಿಗೆ ಕಳುಹಿಸುತ್ತಾರೆ. ನಳಿನ್ ಕುಮಾರ್ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ.ಕಾನೂನು ಗೊತ್ತಿಲ್ಲ ಏನೂ ಗೊತ್ತಿಲ್ಲ” ಎಂದರು.
”ನಾನು ಈ ಹಿಂದೆ ಮೂರು ನಾಲ್ಕು ಸರಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ” ಎಂದು ಈ ವೇಳೆ ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.