ಫಲಪುಷ್ಪ ಪ್ರದರ್ಶನ: ಸಿದ್ಧಗೊಳ್ಳುತ್ತಿದೆ ಕದ್ರಿ ಪಾರ್ಕ್‌… ಎರಡು ವರ್ಷಗಳ ಬಳಿಕ ಫ್ಲವರ್ ಶೋ


Team Udayavani, Jan 6, 2023, 6:05 AM IST

ಫಲಪುಷ್ಪ ಪ್ರದರ್ಶನ: ಸಿದ್ಧಗೊಳ್ಳುತ್ತಿದೆ ಕದ್ರಿ ಪಾರ್ಕ್‌… ಎರಡು ವರ್ಷಗಳ ಬಳಿಕ ಫ್ಲವರ್ ಶೋ

ಮಹಾನಗರ: ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಎರಡು ವರ್ಷಗಳ ಕೋವಿಡ್‌ ವಿರಾಮದ ಬಳಿಕ ಪ್ರದರ್ಶನ ಆಯೋಜನೆಗೊಳ್ಳುತ್ತಿರುವುದರಿಂದ ಸಾರ್ವಜನಿಕರೂ ಹೆಚ್ಚಿನ ಉತ್ಸಾಹದಿಂದ ಭಾಗವಹಿಸುವ ನಿರೀಕ್ಷೆಯಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ತೋಟಗಾರಿಕೆ ಇಲಾಖೆ, ಕದ್ರಿ ಪಾರ್ಕ್‌ ಅಭಿವೃದ್ಧಿ ಸಮಿತಿಯ ಒಟ್ಟು ಸೇರುವಿಕೆಯಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಗಣರಾ ಜ್ಯೋತ್ಸವ ದಿನದಂದು ಉದ್ಘಾಟನೆಗೊಂಡು ಮೂರು ದಿನಗಳ ಕಾಲ ನಡೆಯುತ್ತಿದ್ದ ಕಾರ್ಯಕ್ರಮವನ್ನು ಈ ಬಾರಿ ನಾಲ್ಕು ದಿನಕ್ಕೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಕದ್ರಿಪಾರ್ಕ್‌ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪೂರಕ ಕೆಲಸಗಳು ಆರಂಭ
ಕದ್ರಿಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋ ಜನೆಗೊಳ್ಳುವ ಸ್ಥಳವನ್ನು ಸ್ವತ್ಛ ಮಾಡುವ ಕೆಲಸಗಳು ನಡೆಯುತ್ತಿದೆ. ಹುಲ್ಲು ತೆರವು ಮಾಡುವುದು, ಬಣ್ಣ ಬಳಿಯುವ ಕೆಲಸಗಳು ಈಗಾಗಲೇ ಆರಂಭವಾಗಿದೆ. ಪ್ರದರ್ಶನದ ಭಾಗವಾಗಿರುವ ತರಕಾರಿ ಗಿಡಗಳನ್ನು ಬೆಳೆಸುವ ಕೆಲಸ ಕಳೆದ ಅಕ್ಟೋಬರ್‌ ತಿಂಗಳಲ್ಲೇ ಆರಂ ಭವಾಗಿದ್ದು, ಬಹುತೇಕ ಗಿಡಗಳಲ್ಲಿ ಹೂವು ಅರಳಿ ಫಲಬಿಟ್ಟಿವೆ. ಬೆಂಡೆ, ಸೌತೆ, ಚೀನಿಕಾಯಿ, ಬಸಳೆ, ತೊಂಡೆ, ಹರಿವೆ, ಅಲಸಂಡೆ ಮೊದಲಾದ ಸುಮಾರು 30ಕ್ಕೂ ಅಧಿಕ ಬಗೆಯ ವಿವಿಧ ತರಕಾರಿಗಳನ್ನು ಬೆಳೆಸಲಾಗಿದೆ.

ಅಲಂಕಾರಿಕ ಗಿಡಗಳು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಅಲಂಕಾರಿಕ ಹೂವಿನ ಗಿಡಗಳನ್ನು ತರಿಸಿಕೊಳ್ಳಲಾಗಿದ್ದು, ಅವುಗಳನ್ನು ಹೂ ಕುಂಡಗಳಲ್ಲಿ ನೆಡುವ ಕೆಲಸಗಳನ್ನು ಹೂದೋಟದ ಕೆಲಸದವರು ಮಾಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಗಿಡಗಳನ್ನು ತರಿಸಿಕೊಳ್ಳಲಾಗಿದ್ದು, ಫಲಪುಷ್ಪ ಪ್ರದರ್ಶನದ ವೇಳೆ ಇದನ್ನು ಅಲಂಕಾರಕ್ಕಾಗಿ ಇಡಲಾಗುತ್ತದೆ.
ಗೊಂಡೆ, ಮೆರಿಗೋಲ್ಡ್‌, ಜೆರೇನಿಯಂ, ಡೇಲ್ಯ, ಜೀನ್ಯ, ಫಿಲೋಸಿಯಾ, ಕೋಕ್ಸ್‌ ಕೋಂಬ್‌, ಕಾಸ್ಮೋಸ್‌, ಹಾಲಿಯಾಕ್‌ ಮೊದಲಾದ ಜಾತಿಯ ಹೂವಿನ ಗಿಡಗಳು ಪ್ರದರ್ಶನದಲ್ಲಿ ಆಕರ್ಷಿಸಲಿವೆ.

1 ರೂ.ಗೆ ತರಕಾರಿ ಗಿಡ
ಫಲಪುಷ್ಪ ಪ್ರದರ್ಶನದಲ್ಲಿ ಈ ಹಿಂದಿನ ವರ್ಷಗಳಲ್ಲಿ 1 ರೂ.ಗೆ ತರಕಾರಿ ಗಿಡ ನೀಡುವ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿಯೂ ಇದನ್ನು ಮುಂದುವರಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿಯ ಮದ್ದಡ್ಕ ತೋಟಗಾರಿಕೆ ಕ್ಷೇತ್ರದಲ್ಲಿ ವಿವಿಧ ತರಕಾರಿ ಸಸಿಗಳನ್ನು ಬೆಳೆಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಅಗತ್ಯ ಸಿದ್ಧತೆ
ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಫಲಪುಷ್ಪ ಪ್ರದರ್ಶನ ಆಯೋಜಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಲಾಗಿದೆ. ಜಿಲ್ಲಾಧಿಕಾರಿಯವರು ಅಧ್ಯಕ್ಷರಾಗಿರುವ ಕದ್ರಿಪಾರ್ಕ್‌ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಪ್ರಕಟವಾಗಲಿದೆ.
– ಪ್ರವೀಣ್‌ ಕೆ., ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.