ನಿರಾಣಿ, ವಿಜಯೇಂದ್ರ ಧರ್ಮಸ್ಥಳದಲ್ಲಿ ಆಣೆ ಮಾಡಲಿ: ಯತ್ನಾಳ್ ಸವಾಲು

ವಿಜಯಪುರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಹಣ ನೀಡಿದ್ದರು....!

Team Udayavani, Jan 7, 2023, 3:20 PM IST

yatnal

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷೇತರ ಅಭ್ಯರ್ಥಿಗಳಿಗೆ ಒಂದು ರೂಪಾಯಿ ಹಣವನ್ನೂ ನೀಡಿಲ್ಲ ಎಂದು ಸಚಿವ ನಿರಾಣಿ ಹಾಗೂ ವಿಜಯೇಂದ್ರ ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ಸನ್ನಿಧಾನದಲ್ಲಿ ಆಣೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾಚಣೆಯಲ್ಲಿ ನನಗೆ ಟಿಕೆಟ್ ಕೊಡಿಸಲು, ಸೋಲಿಸಲು ನಿರಾಣಿ ಯಾರು ಎಂದು ಹರಿಹಾಯ್ದು, ಪಾಲಿಕೆ ಚುನಾವಣೆಯಲ್ಲಿ ನೀವು ಯಾರಿಗೆ ಎಷ್ಟು ಹಣ ಕೊಟ್ಟಿದ್ದೀರಿ ಎಂಬುದು ಗೊತ್ತು, ಈ ವಿಚಾರ ಚುನಾವಣಾ ವೀಕ್ಷಕರಿಗೆ, ಕೇಂದ್ರದ ನಾಯಕರಿಗೂ ತಿಳಿದಿದೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗಾಗಿ ಪಕ್ಷದಿಂದಾಗಲಿ, ನಿರಾಣಿ ಹಾಗೂ ವಿಜಯೇಂದ್ರ ಹಣ ನೀಡಿಲ್ಲ, ನಾವು ಹಣ ಪಡೆದಿಲ್ಲ. ನಗರದ ಮತದಾರರು ನಮ್ಮ ಅಭ್ಯರ್ಥಿಗಳಿಗೆ ಹಣ ಪಡೆಯದೇ ಅಭಿವೃದ್ಧಿಗಾಗಿ ಮತ ಹಾಕಿ ಗೆಲ್ಲಿಸಿದ್ದಾರೆ ಎಂದರು.

ನನ್ನನ್ನು ಸೋಲಿಸಲು ಭಾರಿ ಹಣ ಬರಲಿದೆ

ವಿಜಯಪುರ : ಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನು ಸೋಲಿಸಲು ವಿಜಯೇಂದ್ರ, ನಿರಾಣಿ, ಸತಿಶ ಜಾರಕಿಹೊಳಿ ಸೇರಿದಂತೆ ಹಲವರಿಂದ ದೊಡ್ಡ ಮಟ್ಟದ ಹಣ ವಿಜಯಪುರಕ್ಕೆ ಹರಿದು ಬರಲಿದೆ. ಆದರೆ ಅದನ್ನೆಲ್ಲ ಪಡೆದು ನಮ್ಮ ಜನ ನನಗೆ ಮತಹಾಕಲಿದ್ದಾರೆ ಎಂದು ಯತ್ನಾಳ್ ಹೇಳಿದರು.

ನಿರಾಣಿ ಕೇಳಿ ವಿಜಯಪುರ ಕ್ಷೇತ್ರದ ಜನರು ಮತ ಹಾಕುತ್ತಾರಾ, ನಿರಾಣಿ ನನ್ನನ್ನು ಸೋಲಿಸುವ ಮಾತಿರಲಿ, ಮೊದಲು ನಿರಾಣಿ ಬಿಳಗಿ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

ಇಷ್ಟಕ್ಕೂ ನನಗೆ ಟಿಕೆಟ್ ಕೊಡಿಸುವ ಮಾತಿರಲಿ, ನಿರಾಣಿ ಕುಟುಂಬದಲ್ಲಿ ಎಷ್ಟು ಜನ ಅಣ್ಣತಮ್ಮಂದಿರು ಚುನಾವಣೆಗೆ ನಿಲ್ಲುತ್ತಾರೆ ಎಂದು ಹೇಳಲಿ. ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಎಷ್ಟು ಜನ ನಿಲ್ಲುತ್ತಾರೆ ಎಂದು ಸ್ಪಷ್ಟಪಡಿಸಲಿ. ನನ್ನ ಮನೆಯಲ್ಲಿ ನಾನೊಬ್ಬನೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.

”ಮುರುಗೇಶ ನಿರಾಣಿಗೆ ಸಚಿವ ಸ್ಥಾನ ನೀಡದಿದ್ದರೆ ಪಂಚಮಸಾಲಿ ಸಮಾಜ ನಿಮ್ಮ ವಿರುದ್ಧ ತಿರುಗಿ ಬೀಳಲಿದೆ ಎಂದು ವಚನಾನಂದಸ್ವಾಮಿ ಬಹಿರಂಗ ವೇದಿಕೆಯಲ್ಲೇ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲೆ ಮಾಡಿದ್ದರು. ರಾಜಕೀಯ ಲಾಭಕ್ಕಾಗಿ ಬಹಿರಂಗವಾಗಿಯೇ ಸಮಾಜವನ್ನು ದುರ್ಬಳಕೆ ಮಾಡಿಕೊಂಡಿದ್ದನ್ನು ರಾಜ್ಯದ ಜನ ನೋಡಿದ್ದಾರೆ ಎಂದರು.

ವಚನಾನಂದಸ್ವಾಮಿ ಮಾತಿನಿಂದ ಯಡಿಯೂರಪ್ಪ ವೇದಿಕೆಯಿಂದ ನಿರ್ಗಮಿಸಲು ಮುಂದಾದ ಸಂದರ್ಭದಲ್ಲಿ ಸುತ್ತೂರು ಶ್ರೀಗಳು, ಬೊಮ್ಮಾಯಿ ಅವರು ಅದನ್ನು ತಡೆದಿದ್ದರು. ಹೀಗೆ ಬ್ಲಾಕ್‍ಮೇಲ್ ಮಾಡಿ ಸಚಿವರಾದವರು ನಿರಾಣಿ ಎಂದು ವಾಗ್ದಾಳಿ ನಡೆಸಿದರು.

ನಿರಾಣಿ, ವಚನಾನಂದಸ್ವಾಮಿ ಪಂಚಮಸಾಲಿ ಸಮಾಜಕ್ಕೆ ಮೀಸಲು ಬೇಕೆಂದು ಹೋರಾಟ ಮಾಡಿದವರೇ ಅಲ್ಲ. ಹೋರಾಟದ ಮಧ್ಯದಲ್ಲಿ ಬಂದು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ಮಂತ್ರಿಯಾಗಲು ಮುಖ್ಯಮಂತ್ರಿ ಆಗಲು ರಾಜಕೀಯ ಬ್ಲಾಕ್‍ಮೇಲ್ ಮಾಡಲು ಸಮಾಜದ ಶಕ್ತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದರು.

ಪಂಚಮಸಾಲಿ ಸಮಾಜದ ಹಿಂದೆ ಹಿರಿಯರು ಹೋರಾಟ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ನಾನೂ ಹೋರಾಟವನ್ನು ಮಾಡಿಕೊಂಡು ಬಂದಿದ್ದೇನೆ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗಲೇ ನನ್ನ ನೇತೃತ್ವದಲ್ಲಿ ಸಮಾಜದ ಪ್ರಮುಖರೊಂದಿಗೆ ದೆಹಲಿಯಲ್ಲಿ ಪ್ರಮುಖರ ನಿಯೋಗ ಭೇಟಿ ಮಾಡಿ 2ಎ ಮೀಸಲಾತಿಗೆ ಆಗ್ರಹಿಸಿದ್ದೇವೆ ಎಂದರು.

ಹಿಂದೆ ಅರ್ಧಕ್ಕೆ ನಿಲ್ಲಿಸಿದ್ದ ಪಂಚಮಸಾಲಿ ಮೀಸಲು ಹೋರಾಟವನ್ನು ಮತ್ತೆ ಮುಮದುವರೆಸಿದ್ದೇವೆ. ಇಷ್ಟಕ್ಕೂ ಈಗಲೂ ನಿಮ್ಮಲ್ಲಿ ಶಕ್ತಿ ಇದ್ದರೆ, ನಿಜವಾದ ಬದ್ಧತೆ ಇದ್ದರೆ ತ್ವರಿತವಾಗಿ ಸಮಾಜಕ್ಕೆ ಮೀಸಲು ಕಲ್ಪಿಸಿ ಎಂದು ಸಚಿವ ನಿರಾಣಿಗೆ ಶಾಸಕ ಯತ್ನಾಳ ಸವಾಲು ಹಾಕಿದರು.

ಮೀಸಲಾತಿ ಕುರಿತು ಸಚಿವ ಸಂಪುಟದ ಅಜೆಂಡಾದಲ್ಲೇ ಇಲ್ಲ. 2ಸಿ ಹಾಗೂ 2 ಡಿ ಎಂದರೆ ಏನು ಎಂದು ಈ ವರೆಗೆ ನಡಾವಳಿಗಳನ್ನೇ ನೀಡಿಲ್ಲ. 2ಡಿ ಪ್ರವರ್ಗದಲ್ಲಿ ಎಲ್ಲಾ ವೀರಶೈವ-ಲಿಂಗಾಯತರಿಗೆ ಕೊಡುವುದಾಗಿ ಹೇಳಿದ್ದೀರಿ. ಹಾಗಿದ್ದರೆ 2ಡಿ ಪ್ರವರ್ಗಕ್ಕೆ ಎಷ್ಟು ಶೇಕಡಾ ಮೀಸಲು ಕೊಡುತ್ತೀರಿ ಎಂದು ನಿಖರವಾಗಿ ಹೇಳಿ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲು 2 ತಿಂಗಳ 9 ದಿನಗಳು ಮಾತ್ರ ಬಾಕಿ ಇದೆ. 3 ತಿಂಗಳಲ್ಲಿ ಮೀಸಲು ಕಲ್ಪುಸುವಾಗಿ ನಿರಾಣಿ ಹೇಳುವುದೆಲ್ಲ ಸುಳ್ಳು. ಮೀಸಲು ಕಲ್ಪಿಸಿವುದು ಅಸಾಧ್ಯವಂದೇ ಈ ಮಾತಿನ ಅರ್ಥ ಎಂದು ದೂರಿದರು.

ಪರಿಶಿಷ್ಟ ಜಾತಿ-ಪಂಗಡಕ್ಕೆ ಇತರೆ ಸಮುದಾಯಗಳನ್ನು ಸೇರ್ಪಡೆ ಮಾಡಲು ಕುಲಶಾಸ್ತ್ರ ಅಧ್ಯಯನ ಬೇಕು. ಪ್ರವರ್ಗಕ್ಕೆ ಸೇರಲಿ ಕುಲಶಾಸ್ತ್ರ ಆಧ್ಯಯನ, ಹಿಂದುಳಿದ ವರ್ಗದ ಆಯೋಗದ ವರದಿ ಪಡೆಯುವ ಅವಶ್ಯಕತೆ ಇಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಆರ್ಥಿಕ ದುರ್ಬಲ ಸಮುದಾಯದವರಿಗೆ ಪ್ರಧಾನಿ ಮೋದಿ ಅವರು ಶೇ.10 ರಷ್ಟು ಮೀಸಲು ಕಲ್ಪಿಸಿದ್ದಾರೆ. ಮೀಸಲಾತಿ ಇಲ್ಲದ ಸಮುದಾಯಗಳಿಗೆ ಇಲ್ಲಿ ಅವಕಾಶ ಕಲ್ಪಿಸಿದ್ದರೂ ಲಿಂಗಾಯತರೂ ಇದರಲ್ಲಿ ಸೇರಲು ಸಾಧ್ಯವಿಲ್ಲ. ಇದನ್ನು ಪಡೆಯಲು ಕಠಿಣ ನಿಯಮಗಳಿವೆ. ಇದರಲ್ಲಿ ಶೇ.2 ರಷ್ಟು ಲಿಂಗಾಯತರಿಗೆ ಕೊಡುವುದಾಗಿ ಹೇಳಿದ್ದರೂ ಅದೂ ಅಸಾಧ್ಯ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.