ಮಾಲೀಕರಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ; ತೀರ್ಥಹಳ್ಳಿಯಲ್ಲೊಂದು ರಿಯಲ್ ʼಚಾರ್ಲಿʼ


Team Udayavani, Jan 8, 2023, 11:08 AM IST

4–charlie-dog-story

ತೀರ್ಥಹಳ್ಳಿ: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಲೀಕರಿಗಾಗಿ ನಾಯಿಯೊಂದು ಆಸ್ಪತ್ರೆಯ ಬಾಗಿಲಲ್ಲಿ ಕಾದು ಕುಳಿತ ಫೋಟೊವೊಂದು ವೈರಲ್ ಆಗಿದೆ.

ಇದು ಇತ್ತೀಚೆಗೆ ಬಿಡುಗಡೆಯಾದ ‘ಚಾರ್ಲಿ 777’ ಸಿನಿಮಾದ ದೃಶ್ಯವನ್ನು ನೆನಪಿಸುತ್ತಿದೆ. ಅಷ್ಟೆ ಅಲ್ಲ, ಈಗ ಇಡೀ ಪಟ್ಟಣದ ಜನ ಈ ಶ್ವಾನಕ್ಕೆ ಚಾರ್ಲಿ ಎಂದು ಕರೆಯುತ್ತಿದ್ದಾರೆ.

ಆಸ್ಪತ್ರೆ ಬಾಗಿಲಲ್ಲೇ ಮೊಕ್ಕಾಂ: ಪಟ್ಟಣದ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ ಅವರ ಮಗಳು ಸುಧಾ ಜೋಯಿಸ್ ಅವರು ಮನೆಯಲ್ಲಿ ನಾಯಿ ಸಾಕಿದ್ದಾರೆ. 8 ತಿಂಗಳ ಈ ನಾಯಿಯ ಹೆಸರು ʼಪಪ್ಪಿʼ. ನಾಗರತ್ನ ಶಾಸ್ತ್ರಿಯವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪಟ್ಟಣದ ಆಸ್ಪತ್ರೆಯೊಂದರಲ್ಲಿ ನಾಗರತ್ನ ಶಾಸ್ತ್ರಿಯವರಿಗೆ ಚಿಕಿತ್ಸೆ ನಡೆಯುತ್ತಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದ ಪಪ್ಪಿ, ಆಸ್ಪತ್ರೆ ಬಾಗಿಲಲ್ಲಿ ಮೊಕ್ಕಾಂ ಹೂಡಿತ್ತು. ಆಸ್ಪತ್ರೆ ಸಿಬ್ಬಂದಿ ಮತ್ತು ಇತರ ಸಾರ್ವಜನಿಕರಿಗೆ ಪಪ್ಪಿ ಯಾವುದೇ ತೊಂದರೆ ಕೊಟ್ಟಿಲ್ಲ. ಆದರೆ ಹೆಚ್ಚು ಹೊತ್ತು ಆಸ್ಪತ್ರೆ ಬಾಗಿಲಲ್ಲೆ ಕಾದು ಕುಳಿತಿರುತ್ತಿತ್ತು ಎನ್ನುತ್ತಾರೆ ಅಲ್ಲಿನ ಸ್ಥಳೀಯರು.

ವಾರ್ಡ್ ಕಡೆಗೆ ಗಮನ: ಆಸ್ಪತ್ರೆ ಬಾಗಿಲಲ್ಲೇ ನಿಲ್ಲುತ್ತಿದ್ದ ಪಪ್ಪಿ, ನಾಗರತ್ನ ಶಾಸ್ತ್ರಿಯವರನ್ನು ಕರೆದೊಯ್ದು ದಾಖಲು ಮಾಡಿದ್ದ ವಾರ್ಡ್ ಕಡೆಗೆ ದೃಷ್ಟಿ ನೆಟ್ಟಿರುತ್ತಿತ್ತು. ಬೇರೆ ಯಾರೆ ಬಂದು ಮಾತನಾಡಿಸಿದರೂ ಸೌಮ್ಯವಾಗಿಯೇ ಪ್ರತಿಕ್ರಿಯಿಸುತ್ತಿತ್ತು. ಆ ಬಳಿಕ ಪುನಃ ವಾರ್ಡ್ ಕಡೆಗೆ ಕಣ್ಣು ನೆಟ್ಟು ಕಾದು ನಿಲ್ಲುತ್ತಿತ್ತು. ನಾಗರತ್ನ ಶಾಸ್ತ್ರಿಯವರು ಆಸ್ಪ್ರೆಯಿಂದ ಡಿಸ್ಚಾರ್ಜ್ ಆದಾಗ, ಆಂಬುಲೆನ್ಸ್ ಬಳಿ ಕುಣಿದಾಡಿತ್ತು ಅನ್ನುತ್ತಾರೆ ಅಲ್ಲಿನ ಸಿಬ್ಬಂದಿ.

ಒಂದೂವರೆ ತಿಂಗಳಿದ್ದಾಗ ಅದನ್ನು ಮನೆಗೆ ತಂದಿದ್ದು, ಪಪ್ಪಿ ಎಂದು ಕರೆಯುತ್ತೇವೆ. ಈಗ ಅದಕ್ಕೆ 8 ತಿಂಗಳು. ನಮ್ಮ ತಾಯಿಗೆ ವಯಸ್ಸಾಗಿದೆ. ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಮ್ಮ ಜೊತೆಗೆ ಬಂದು ಆಸ್ಪತ್ರೆ ಮುಂದೆ ನಿಲ್ಲುತ್ತಿತ್ತು. ʼಅಲ್ಲಿಗೆ ಬರುವ ಎಲ್ಲರಿಗೂ ಅದು ನಮ್ಮ ಮನೆ ನಾಯಿ ಎಂದು ಗೊತ್ತಾಗಿ ಹೋಗಿದೆʼ ಎನ್ನುತ್ತಾರೆ ನಾಗರತ್ನ ಶಾಸ್ತ್ರಿ ಅವರ ಮಗಳು ಸುಧಾ ಜೋಯಿಸ್.

ಆಹಾರ ತಿನ್ನದೇ ಕುಳಿತಿದ್ದ ಪಪ್ಪಿ: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗರತ್ನ ಶಾಸ್ತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕೊನೆಯುಸಿರೆಳೆದಿದ್ದಾರೆ. ಅಂದಿನಿಂದಲೂ  ಪಪ್ಪಿ ಆಹಾರ ಸೇವಿಸದೆ ಸುಮ್ಮನೆ ಕುಳಿತಿರುತ್ತಿದ್ದು, ನಮ್ಮ ಮನೆಯಲ್ಲಿ ಯಾರಿಗಾದರು ಆರೋಗ್ಯ ಸಮಸ್ಯೆಯಾದರು ಅದಕ್ಕೆ ಗೊತ್ತಾಗುತ್ತದೆ. ಆಗ ಅದು ಕೂಡ ಮಂಕಾಇ ಕೂತಿರುತ್ತದೆ ಎನ್ನುತ್ತಾರೆ ಸುಧಾ ಜೋಯಿಸ್.

ಪಪ್ಪಿ ಚಾರ್ಲಿ ಆಯಿತು: ಸುಧಾ ಜೋಯಿಸ್ ಅವರ ಮನೆಯ ಪಪ್ಪಿಗೆ ಈಗ ಪಟ್ಟಣದ ಜನರು ಚಾರ್ಲಿ ಎಂದು ಕರೆಯಲು ಆರಂಭಿಸಿದ್ದಾರೆ. ಚಾರ್ಲಿ ಸಿನಿಮಾದ ನಾಯಿಯಂತೆಯೆ ಬಣ್ಣ, ಅದರಂತೆಯೇ ಹೊಂದಾಣಿಕೆ, ಹೇಳಿದ್ದು ಕೇಳುವ ಸ್ವಭಾವ ಕಂಡು ಜನರು ಚಾರ್ಲಿ ಎಂದು ಕರೆಯುತ್ತಿದ್ದಾರಂತೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.