ಸುಲ್ತಾನ್ಪುರಿ ಘಟನೆಯಲ್ಲಿ ಮೃತಪಟ್ಟ ಯುವತಿ ಕುಟುಂಬಕ್ಕೆ ಆರ್ಥಿಕ ಸಹಾಯ ದಾನ ನೀಡಿದ ಶಾರುಖ್ ಖಾನ್ ಎನ್ ಜಿಒ
Team Udayavani, Jan 8, 2023, 2:27 PM IST
ಮುಂಬಯಿ: ಇತ್ತೀಚೆಗೆ ದಿಲ್ಲಿಯ ಸುಲ್ತಾನ್ ಪುರಿಯಲ್ಲಿ ನಡೆದ ಪ್ರಕರಣದಲ್ಲಿ ಮೃತಪಟ್ಟ ಅಂಜಲಿ ಸಿಂಗ್ ಕುಟುಂಬಕ್ಕೆ ಶಾರುಖ್ ಖಾನ್ ಅವರ ಎನ್ ಜಿಒ ಆರ್ಥಿಕ ಸಹಾಯ ದಾನ ನೀಡಿದೆ.
ಬಾಲಿವುಡ್ ನಟ ಶಾರುಖ್ ಖಾನ್ ಮೀರ್ ಫೌಂಡೇಶನ್ ಮೂಲಕ ಹತ್ತಾರು ಕೆಲಸ – ಕಾರ್ಯಗಳನ್ನು ಮಾಡಿದ್ದು, ಸುಲ್ತಾನ್ ಪುರಿಯಲ್ಲಿ ಘಟನೆಯಲ್ಲಿ ಮೃತಪಟ್ಟ ಅಂಜಲಿ ಅವರ ಕುಟುಂಬಕ್ಕೆ ಆರ್ಥಿಕವಾಗಿ ಜೊತೆನಿಂತು ಮಾನವೀಯತೆ ಮೆರದಿದೆ.
ಅಂಜಲಿ ಅವರು ಕುಟುಂಬದ ಹಿರಿ ಮಗಳಾಗಿದ್ದರು. ತಾಯಿ ಆರೋಗ್ಯ ಸಮಸ್ಯೆಯಿಂದ ಬೆಡ್ ರೆಸ್ಟ್ ನಲ್ಲೇ ಇದ್ದಾರೆ. ಇನ್ನಿಬ್ಬರು ಮಕ್ಕಳದು ದುಡಿಯುವ ವಯಸ್ಸಲ್ಲ. ಎಲ್ಲವನ್ನೂ ಮಗಳೇ ನೋಡಿಕೊಳ್ಳಬೇಕಿತ್ತು. ಕುಟುಂಬದ ಈ ಪರಿಸ್ಥಿತಿಯನ್ನು ಅರಿತ ಶಾರುಖ್ ಖಾನ್ ಅವರ ಮೀರ್ ಫೌಂಡೇಶನ್ ಹಣಕಾಸಿನ ನೆರವನ್ನು ನೀಡಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಬಡತನದಿಂದ 10ನೇ ಕ್ಲಾಸ್ ಬಿಟ್ಟು ಮನೆ ಕೆಲಸ, ಬೀಡಿ ರೋಲ್ ಮಾಡುತ್ತಿದ್ದ ಕೇರಳದ ವ್ಯಕ್ತಿ ಇಂದು ಅಮೆರಿಕಾದಲ್ಲಿ ನ್ಯಾಯಾಧೀಶ
ಘಟನೆ ಹಿನ್ನೆಲೆ: ರವಿವಾರ (ಜ.1 ರಂದು) ಮುಂಜಾನೆ 3 ಗಂಟೆ ಸುಮಾರಿಗೆ ಸುಲ್ತಾನ್ಪುರಿಯಲ್ಲಿ ಅಪಘಾತ ನಡೆದು, ಸ್ಕೂಟಿ ಚಲಾಯಿಸುತ್ತಿದ್ದ 20ರ ಯುವತಿ ಅಂಜಲಿ ಸಾವಿಗೀಡಾಗಿದ್ದರು. ಸ್ಕೂಟಿಯೊಂದಿಗೆ ಕೆಳಗೆ ಬಿದ್ದ ಅಂಜಲಿಯ ಕಾಲುಗಳು ಕಾರಿನ ತಳಭಾಗಕ್ಕೆ ಸಿಲುಕಿಕೊಂಡ ಕಾರಣ, 12 ಕಿ.ಮೀ. ದೂರದ ವರೆಗೂ ಅಂಜಲಿ ಎಳೆಯಲ್ಪಟ್ಟಿದ್ದರು. ಕಂಜಾವಾಲ ಪ್ರದೇಶದಲ್ಲಿ ಬಟ್ಟೆಗಳಿಲ್ಲದೇ ಮೃತದೇಹ ಪತ್ತೆಯಾಗಿತ್ತು. ಕಾರಿನಲ್ಲಿ ಆರೋಪಿಗಳು ದೊಡ್ಡ ಧ್ವನಿಯಲ್ಲಿ ಸಂಗೀತ ಹಾಕಿಕೊಂಡಿದ್ದರು. ಹೀಗಾಗಿ ಕಾರಿನಡಿ ಸಿಲುಕಿದ್ದ ಅಂಜಲಿ ಜೋರಾಗಿ ಕಿರುಚಿತ್ತಿದ್ದರೂ ಆರೋಪಿಗಳಿಗೆ ಕೇಳಿಸಿರಲಿಲ್ಲ.
ಈ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
2020 ರಲ್ಲಿ ತಾಯಿಯನ್ನು ಕಳೆದುಕೊಂಡ ಮಗುವಿಗೆ ಸಹಾಯ ಮಾಡಲು ಮೀರ್ ಫೌಂಡೇಶನ್ ಮುಂದೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್ ಪ್ರಮಾಣಪತ್ರ!
Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ
Somy Ali: ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್ ಕೇಳಿದ ಸಲ್ಮಾನ್ ಖಾನ್ ಮಾಜಿ ಗೆಳತಿ
Ranbir Kapoor: ಹೊಸ ಲುಕ್ನಲ್ಲಿ ರಣಬೀರ್ ಕಪೂರ್; ಧೂಮ್ 4ಗೆ ತಯಾರಿ?
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.