ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು


Team Udayavani, Jan 8, 2023, 11:42 PM IST

ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಅಚ್ಚುಕಟ್ಟು

ಹಾವೇರಿ: ಕಳೆದ ಮೂರು ದಿನಗಳಿಂದ ಕಳೆಕಟ್ಟಿದ್ದ ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರವಿವಾರ ರಾತ್ರಿ ಸಂಭ್ರಮದ ತೆರೆ ಬಿದ್ದಿದೆ.

ಯಾವುದೇ ಸೌಲಭ್ಯಗಳೇ ಇಲ್ಲದ ಹಾವೇರಿಯಲ್ಲಿ ಸಮ್ಮೇಳನ ನಡೆಸುವುದು ಕಷ್ಟ ಎಂದು ಹೀಯಾಳಿಸಿದವರಿಗೆ ತಿರುಗೇಟು ಕೊಟ್ಟ ಹಾವೇರಿ ಜಿಲ್ಲೆಯ ಜನ, ಒಂದೇ ಒಂದು ಸಣ್ಣ ಅವಘಡ, ಅಪಸ್ವರಕ್ಕೂ ಆಸ್ಪದ ನೀಡದಂತೆ ಸಮ್ಮೇಳನ ಮಾಡಿ ತೋರಿಸಿ ಸೈ ಎನಿಸಿಕೊಂಡರು.

ಮೊದಲ ದಿನ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಉದ್ಘಾಟನೆ ಮಾಡಿ ಜಿಲ್ಲೆಯ ಜನರಿಗೆ ಮತ್ತಷ್ಟು ಹುರುಪು ತುಂಬಿ ಹೋದರೆ, ಎರಡು ಮತ್ತು ಮೂರನೇ ದಿನ ಹಾವೇರಿ ಮಾತ್ರವಲ್ಲ, ಸುತ್ತಲಿನ ಜಿಲ್ಲೆಗಳಿಂದಲೂ ಜನ ಕಿಕ್ಕಿರಿದು ತುಂಬಿ ಕನ್ನಡ ನುಡಿ ತೇರು ಎಳೆದು ಸಂಭ್ರಮಿಸಿದರು.

ಸಾಮಾನ್ಯವಾಗಿ ಗೋಷ್ಠಿಗಳಲ್ಲಿ ನಡೆಯುವ ಚಿಂತನ- ಮಂಥನಕ್ಕೆ ಜನರ ಕೊರತೆ ಎದ್ದು ಕಾಣುತ್ತಿತ್ತು. ಆದರೆ ಹಾವೇರಿ ಸಮ್ಮೇಳನದಲ್ಲಿ ಪ್ರಧಾನ ಮತ್ತು ಸಮಾನಾಂತರ ಮೂರೂ ವೇದಿಕೆಗಳಲ್ಲಿ ಜನ ಕಿಕ್ಕಿರಿದು ತುಂಬಿ ಕನ್ನಡ ನಾಡು, ನುಡಿ, ನೆಲ, ಜಲ, ಕೃಷಿ ಗೋಷ್ಠಿಗಳ ಚಿಂತನೆಗಳನ್ನು ಕುಳಿತು ಆಲಿಸಿದರು.

ಗಣ್ಯರಿಗೆ ಕೆಲವು ಕಡೆಗಳಲ್ಲಿ ಅವಮಾನಕರ ಪ್ರಸಂಗಗಳು ನಡೆದಿದ್ದು ಸತ್ಯ. ಪಾಸ್‌ ಹಂಚಿಕೆ ವಿಚಾರದಲ್ಲಿ ಕಸಾಪ ನಡೆದುಕೊಂಡ ರೀತಿ, ಮೂಲ ಸೌಕರ್ಯಗಳನ್ನು ಇನ್ನಷ್ಟು ಅಚ್ಚುಕಟ್ಟಾಗಿ ಮಾಡಲು ಸಾಧ್ಯವಿದ್ದರೂ ನಿರ್ಲಕ್ಷÂ ತೋರಿದ್ದನ್ನು ಹೊರತುಪಡೆಸಿದರೆ ಹೆಚ್ಚು ಕಡಿಮೆ ಸಮ್ಮೇಳನ ಯಶಸ್ವಿಯಾಗಿದ್ದು ಕೂಡ ಸತ್ಯ.

ಮೂರನೇ ದಿನವೂ ಜನಸ್ತೋಮ: ಮಡಿಲಿನಿಂದ ತಪ್ಪಿಸಿಕೊಂಡ ಮಕ್ಕಳಿಗಾಗಿ ಹೆತ್ತವರ ಪರದಾಟ, ಬಿಸಿಲಿನಿಂದ ಬಳಲಿ ನೆರಳಿಗಾಗಿ ಹಲವರ ಹುಡುಕಾಟ. ಮತ್ತೂಂದೆಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಿರುಚಾಟ, ಅಲ್ಲಲ್ಲಿ ಕನ್ನಡಾಂಬೆಯ ಶ್ಯಾಲು ಹೆಗಲಿಗೆ ಹಾಕಿಕೊಂಡು ಕಾಲೇಜು ವಿದ್ಯಾರ್ಥಿಗಳ ಓಡಾಟ. ಇವೆಲ್ಲದರ ನಡುವೆ ಭೂರಿ ಭೋಜನ ಸವಿದು ಜನರು ಮಧ್ಯಾಹ್ನವೇ ಊರಿನತ್ತ ಮುಖ ಮಾಡಿದ್ದರು. ಇದು ಅಕ್ಷರ ಜಾತ್ರೆ ಕೊನೆಯ ದಿನದ ದೃಶ್ಯಗಳು.

ಸಾಹಿತ್ಯ ಸಮ್ಮೇಳನಕ್ಕೆ ಕೊನೆಯ ದಿನವಾದ ರವಿವಾರ ಅ ಧಿಕ ಸಂಖ್ಯೆಯಲ್ಲಿ ಜನ ಹರಿದು ಬಂದಿತ್ತು. ಹೀಗಾಗಿ, ಎಲ್ಲೆಲ್ಲೂ ಜನಸಂದಣಿ ಕಾಣುತ್ತಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಹೆತ್ತವರು ತಪ್ಪಿಸಿಕೊಂಡ ಮಕ್ಕಳಿಗಾಗಿ ಪರದಾಟ ನಡೆಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.