ದಟ್ಟ ಮಂಜು; ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ವೇನಲ್ಲಿ ಉರುಳಿ ಬಿದ್ದ ಬಸ್, ಮೂವರು ಪ್ರಯಾಣಿಕರು ವಿಧಿವಶ
Team Udayavani, Jan 9, 2023, 12:34 PM IST
ಲಕ್ನೋ: ಭಾರೀ ಪ್ರಮಾಣದ ಮಂಜು ಮುಸುಕಿದ ವಾತಾವರಣದ ಪರಿಣಾಮ ಸೋಮವಾರ (ಜನವರಿ 09) ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ದುರಂತ ಅಂತ್ಯಕಂಡಿದ್ದಾರೆ.
ಇದನ್ನೂ ಓದಿ:ಸಾಲ ಮಂಜೂರಾತಿಯಲ್ಲಿ ಅಕ್ರಮ ಪ್ರಕರಣ: ಚಂದಾ ಕೊಚ್ಚರ್ ದಂಪತಿ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ
ಈ ಘಟನೆ ಕನೌಜ್ ಪ್ರದೇಶದಲ್ಲಿ ಮಧ್ಯರಾತ್ರಿ 12ಗಂಟೆಗೆ ಸಂಭವಿಸಿದೆ. ಎಕ್ಸ್ ಪ್ರೆಸ್ ವೇನಲ್ಲಿ ಸ್ಲೀಪರ್ ಬಸ್ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಅಸು ನೀಗಿದ್ದರು. ಸುಮಾರು 18 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತೀ ವೇಗವಾಗಿ ಬಂದಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಎಕ್ಸ್ ಪ್ರೆಸ್ ವೇನಿಂದ ಕೆಳಕ್ಕೆ ಬಿದ್ದಿತ್ತು. ಇದರ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಮಗು ಸೇರಿ ಮೂವರು ವಿಧಿವಶರಾಗಿದ್ದಾರೆ ಎಂದು ವರದಿ ತಿಳಿಸಿದೆ.
ದಟ್ಟ ಮಂಜು ಮತ್ತು ಅತೀಯಾದ ವೇಗದ ಪರಿಣಾಮವೇ ಅಪಘಾತ ಸಂಭವಿಸಲು ಕಾರಣವಾಗಿದೆ. ಈ ಸ್ಲೀಪರ್ ಬಸ್ ದೆಹಲಿಯ ಆನಂದ್ ವಿಹಾರ್ ನಿಂದ ಸುಲ್ತಾನ್ ಪುರ್ ಗೆ ತೆಳುತ್ತಿತ್ತು. ಭಾನುವಾರ 30ಜನ ಪ್ರಯಾಣಿಕರೊಂದಿಗೆ ಬಸ್ ಹೊರಟಿತ್ತು,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.