ಉನ್ನತ ಶಿಕ್ಷಣ ಸುಧಾರಣೆ: ಪೆನ್ಸಿಲ್ವೇನಿಯಾ ವಿ.ವಿ ಜತೆ ರಾಜ್ಯದ ವಿವಿಗಳು ಒಪ್ಪಂದ ಕುರಿತು ಚರ್ಚೆ 


Team Udayavani, Jan 9, 2023, 6:40 PM IST

ಉನ್ನತ ಶಿಕ್ಷಣ ಸುಧಾರಣೆ: ಪೆನ್ಸಿಲ್ವೇನಿಯಾ ವಿ.ವಿ ಜತೆ ರಾಜ್ಯದ ವಿವಿಗಳು ಒಪ್ಪಂದ ಕುರಿತು ಚರ್ಚೆ 

ಬೆಂಗಳೂರು: ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಆಗುತ್ತಿರುವ ಸುಧಾರಣೆಗಳನ್ನು ಸರ್ಕಾರ ಮತ್ತಷ್ಟು ವಿಸ್ತರಿಸಲಿದ್ದು, ಅಮೆರಿಕದ ಪೆನ್ಸಿಲ್ವೇನಿಯಾದ ವಿಶ್ವವಿದ್ಯಾಲಯಗಳು ಇದರಲ್ಲಿ ಭಾಗಿಯಾಗಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಸೋಮವಾರ ಹೇಳಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಪೆನ್ಸಿಲ್ವೇನಿಯ ಸ್ಟೇಟ್ ಸಿಸ್ಟಮ್ ಆಫ್ ಹೈಯರ್ ಎಜುಕೇಶನ್ (ಪಿ ಎಸ್ ಎಸ್ ಎಚ್ ಇ) ನಡುವೆ ಜಾಗತಿಕ ಪಾಲುದಾರಿಕೆ ಒಪ್ಪಂದದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಹಲವು ವಿವಿಗಳು ಪೆನ್ಸಿಲ್ವೇನಿಯಾ ವಿವಿಗಳ ಜತೆ ಮಂಗಳವಾರ ಒಪ್ಪಂದಕ್ಕೆ ಸಹಿ‌ ಮಾಡಿಕೊಳ್ಳಲಿವೆ.

ಉನ್ನತ ಶಿಕ್ಷಣ ವ್ಯವಸ್ಥೆಯ ಪ್ರತಿಯೊಂದು ಹಂತಕ್ಕೂ ವಿಕೇಂದ್ರೀಕರಣವನ್ನು ವಿಸ್ತರಿಸಲು ಸರ್ಕಾರ ಒತ್ತು ನೀಡಲಿದೆ. ಎನ್ಇಪಿ ಆಶಯದಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಲಭ್ಯವಾಗಿಸಲು ವಿದೇಶಗಳ ಹೆಸರಾಂತ ವಿ.ವಿ.ಗಳ ಜೊತೆ ಸಹಭಾಗಿತ್ವ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣದ ಡಿಜಿಟಲೀಕರಣಕ್ಕೆ ಪ್ರಾಮುಖ್ಯ ಕೊಡಲಾಗಿದೆ. ಪಾಲಿಟೆಕ್ನಿಕ್ ನಲ್ಲಿ ಜಾರಿಗೊಳಿಸಿದ ಟ್ವಿನ್ನಿಂಗ್ ಕೋರ್ಸ್ ಹಾಗೂ ಮತ್ತಿತರ ಉಪಕ್ರಮಗಳಿಂದಾಗಿ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಶೇಕಡ 50ರಿಂದ 100ಕ್ಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಪ್ರತಿವರ್ಷ 80 ಸಾವಿರ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ಸೇರುತ್ತಿದ್ದಾರೆ ಎಂದು ಅವರು ವಿವರಿಸಿದರು.

ಟ್ವಿನ್ನಿಗ್ ಕೋರ್ಸ್, ಡ್ಯೂಯೆಲ್ ಪದವಿ, ಕೌಶಲ ತರಬೇತಿ, ಇಂಟರ್ನ್ಶಿಪ್ ಇತ್ಯಾದಿಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು. ಬೆಳವಣಿಗೆಯ ದೃಷ್ಟಿಯಿಂದ ಕರ್ನಾಟಕವು ಭರವಸೆಯ ರಾಜ್ಯವಾಗಿದೆ. ಹಾಗೆಯೇ ಬೆಂಗಳೂರು ದೇಶದಲ್ಲೆಡೆಯಿಂದ ಪ್ರತಿಭಾವಂತರನ್ನು ಸೆಳೆಯುತ್ತಿದೆ. ಜಾಗತಿಕ ಮಟ್ಟದ 500 ಅಗ್ರಮಾನ್ಯ ಕಂಪನಿಗಳ ಪೈಕಿ 400 ಕಂಪನಿಗಳು ಬೆಂಗಳೂರಿನಲ್ಲಿ ನೆಲೆಯಾಗಿವೆ ಎಂದು ನಾರಾಯಣ ವಿವರಿಸಿದರು.

ಕುಲಪತಿ ಡಾ.ಪೀಟರ್ ಗಾರ್ಲೆಂಡ್ ಮತ್ತು ಡಾ.ಅನಿತಾ ಮೀಹನ್ ನೇತೃತ್ವದ ಪೆನ್ಸಿಲ್ವೇನಿಯ ವಿ.ವಿ.ಗಳ ನಿಯೋಗವು ರಾಜ್ಯಕ್ಕೆ ಒಂದು ವಾರ ಅವಧಿಯ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಂತದಲ್ಲಿ ಪರಸ್ಪರ ಸಹಭಾಗಿತ್ವ ಕುರಿತು ಚರ್ಚೆ ಹಾಗೂ ಸಮಾಲೋಚನೆಗಳು ನಡೆಯಲಿವೆ.

ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಡಾ. ಗೋಪಾಲಕೃಷ್ಣ ಜೋಶಿ, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಆಯುಕ್ತ ಪಿ. ಪ್ರದೀಪ್ ಮತ್ತಿತರರು ಇದ್ದರು.

ಈ‌ ಕಾರ್ಯಕ್ರಮದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ಇಡೀ ದಿನ ನಡೆದ ಸಭೆಗಳಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.