![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 10, 2023, 8:44 AM IST
ಚಂಡಿಗಢ: ನ್ಯಾಯಾಧೀಶರಂತೆ ಪೋಸ್ ಕೊಟ್ಟು ಯುವಕರಿಗೆ ಉದ್ಯೋಗ ಹುಡುಕಿ ಕೊಡುತ್ತೇವೆ ಎಂದು ಸುಳ್ಳು ಹೇಳಿ ಹಣ ಪಡೆದು ವಂಚಿಸುತ್ತಿದ್ದ ಪೊಲೀಸ್ ಅಧಿಕಾರಿ ಹಾಗೂ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಾ ಜೈಲಿನಲ್ಲಿ ಉಪ ಅಧೀಕ್ಷಕರಾಗಿದ್ದ ನರಪಿಂದರ್ ಸಿಂಗ್ (41), ಪತ್ನಿ ದೀಪ್ ಕಿರಣ್ (35) ಇಬ್ಬರೂ ಲೂಧಿಯಾನ ನಿವಾಸಿಗಳು. ಬಂಧಿತರಿಂದ ನಾಮಫಲಕವುಳ್ಳ ಮೂರು ಪೊಲೀಸ್ ಸಮವಸ್ತ್ರ, ನಾಮಫಲಕವುಳ್ಳ ಮಹಿಳಾ ಕಾನ್ಸ್ ಸ್ಟೇಬಲ್ ಸಮವಸ್ತ್ರ,10 ಖಾಲಿ ಪೊಲೀಸ್ ನೇಮಕಾತಿ ಅರ್ಜಿಗಳು, 1 ಲಕ್ಷ ರೂ. ನಗದು, ಚಿನ್ನದ ಸರ,ಚಿನ್ನದ ಉಂಗುರ ಮತ್ತು ಎರಡು ಕಾರುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಅಧಿಕಾರಿಯಾಗಿದ್ದ ನರಪಿಂದರ್ ಸಿಂಗ್ ಮತ್ತು ಪತ್ನಿ ದೀಪ್ ಕಿರಣ್ ಇಬ್ಬರು ನ್ಯಾಯಾಧೀಶರಂತೆ ಪೋಸ್ ಕೊಟ್ಟು ಉದ್ಯೋಗವಿಲ್ಲದವರಿಗೆ ಉದ್ಯೋಗ ನೀಡುತ್ತೇವೆ. ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಕೊಟ್ಟು, ಯುವಜನರಿಂದ ಹಣ ಪಡೆಯುತ್ತಿದ್ದರು. ಒಂದೊಂದು ಪ್ರಕರಣಕ್ಕೆ 8-10 ಲಕ್ಷ ರೂ.ಪಡೆಯುತ್ತಿದ್ದರು. ಉದ್ಯೋಗ ನೀಡುವ ಭರವವಸೆ ಕೊಟ್ಟು, ಉದ್ಯೋಗ ಅಕಾಂಕ್ಷಿಗಳಿಗೆ ವಂಚನೆ ಮಾಡುತ್ತಿದ್ದರು ಎಂದು ಲೂಧಿಯಾನ ಪೊಲೀಸ್ ಕಮಿಷನರ್ ಮನದೀಪ್ ಸಿಂಗ್ ಸಿಧು ಹೇಳಿದ್ದಾರೆ.
ಈ ಬಗ್ಗೆ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ, ತನಿಖೆ ನಡೆಸಿ ಇಬ್ಬರನ್ನು ಬಂಧಿಲಾಗಿದೆ. ಈ ಪ್ರಕರಣದಲ್ಲಿ ಸಾಥ್ ಕೊಟ್ಟ ಇಬ್ಬರು ಸಹಚರರಾದ ಲಖ್ವಿಂದರ್ ಸಿಂಗ್ ಮತ್ತು ಸುಖದೇವ್ ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಹಿಡಿಯಲು ಪೊಲೀಸ್ ತಂಡಗಳು ದಾಳಿ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.