![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 10, 2023, 3:13 PM IST
ಪಣಜಿ: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರ ಜಾಗ ನೀಡುವ ಕುರಿತಂತೆ ಯಾವುದೇ ಸಕಾರಾತ್ಮಕ ಉತ್ತರ ಬರುತ್ತಿಲ್ಲ. ಇದರಿಂದಾಗಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ವತಿಯಿಂದಲೇ ಗೋವಾದಲ್ಲಿ ಸೂಕ್ತ ಜಾಗ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ರವರು ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ರವರ ಬಳಿ ಮನವಿ ಮಾಡಿದರು.
ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ವೇದಿಕೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ಧಣ್ಣ ಮೇಟಿ ಈ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ, ಮಹೇಶ್ ಜೋಶಿ ಉಪಸ್ಥಿತರಿದ್ದರು.
ಗೋವಾ ರಾಜ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಲಕ್ಷಾಂತರ ಕನ್ನಡಿಗರು ನೆಲೆಸಿದ್ದಾರೆ. ಇಲ್ಲಿ ಹಲವು ಕನ್ನಡ ಸಂಘಟನೆಗಳಿವೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಗೋವಾ ಕನ್ನಡಿಗರ ಬಹು ವವರ್ಷಗಳ ಬೇಡಿಕೆಯಾಗಿದೆ. ಗೋವಾದ ನಮ್ಮ ಕನ್ನಡ ಸಂಘಟನೆಗಳ ನಿಯೋಗ ತಮ್ಮನ್ನು ಭೇಟಿ ಮಾಡಿ ಕನ್ನಡ ಭವನದ ಕುರಿತು ಮನವಿ ಮಾಡಿದ್ದ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಘೋಷಿಸಿದ್ದೀರಿ. ಇದಕ್ಕಾಗಿ ನಾವು ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದರು.
ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಾವು ಈಗಾಗಲೇ ಹಣವನ್ನು ಕೂಡ ಮಂಜೂರು ಮಾಡಿದ್ದೀರಿ. ಆದರೆ ಕನ್ನಡ ಭವನ ನಿರ್ಮಾಣಕ್ಕೆ ಗೋವಾ ಸರ್ಕಾರದ ವತಿಯಿಂದ ಜಾಗ ನೀಡುವ ಕುರಿತು ಯಾವುದೇ ಸಕಾರಾತ್ಮಕ ಉತ್ತರ ಬರುತ್ತಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ರವರು ಬೊಮ್ಮಾಯಿ ರವರ ಬಳಿ ಮನವಿ ಮಾಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.