ಮುಂಡಗೋಡ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ

ಆದಷ್ಟು ಬೇಗ ಕಾಯಂ ವೈದ್ಯರನ್ನ ನೇಮಕ ಮಾಡಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.

Team Udayavani, Jan 10, 2023, 4:30 PM IST

ಮುಂಡಗೋಡ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ

ಮುಂಡಗೋಡ: ಸಕಲ ಸೌಕರ್ಯಗಳಿಂದ ಕೂಡಿದ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದಾಗಿ ಸಕಾಲದಲ್ಲಿ ಸೇವೆ ಇಲ್ಲದೆ ಬಡ ರೋಗಿಗಳು ಪರದಾಡುವ ಸ್ಥಿತಿ ಬಂದೊದಗಿದೆ.

ದಶಕದ ಹಿಂದೆ ಸೌಲಭ್ಯಗಳ ಕೊರತೆ, ಸೂಕ್ತ ಕಟ್ಟಡವಿಲ್ಲದೇ ಬಳಲುತ್ತಿದ್ದ ತಾಲೂಕು ಸರ್ಕಾರಿ ಆಸ್ಪತ್ರೆ ಇದೀಗ ಎಲ್ಲ ಸೌಲಭ್ಯಗಳ ಜತೆಗೆ 100 ಬೆಡ್‌ ಆಸ್ಪತ್ರೆಯಾಗಿ ಅಭಿವೃದ್ಧಿ ಹೊಂದಿದೆ. ಹಲವು ವೈದ್ಯರ ಸೇವೆ ಲಭ್ಯವಾಗಿದ್ದರೂ, ಈ ಭಾಗಕ್ಕೆ ತೀರಾ ಅಗತ್ಯವಿರುವ ಮೂರು ವೈದ್ಯರ ಹುದ್ದೆ ಮತ್ತು ಸಿಬ್ಬಂದಿ ಕೊರತೆ ಇದೆ.

ಸರ್ಕಾರಿ ಆಸ್ಪತ್ರೆಗೆ ಇದೀಗ 4-5 ವರ್ಷದಲ್ಲಿ ಸಾಕಷ್ಟು ಸೌಲಭ್ಯಗಳು ಬಂದಿದೆ. 100 ಬೆಡ್‌ ಆಸ್ಪತ್ರೆಯಾಗಿ ಪರಿವರ್ತನೆಯಾದ ನಂತರ ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯಾಗುತ್ತಿದೆ. ಪ್ರತಿನಿತ್ಯ ನೂರಾರು ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವಿಧ ರೀತಿ ಶಸ್ತ್ರಚಿಕಿತ್ಸೆ. ಲ್ಯಾಬ್‌, ಇತರ ತುರ್ತು ಸೇವೆಗಳು ಸಿಗುವಂತಾಗಿದೆ.

ಸದ್ಯ 100 ಬೆಡ್‌ಗೆ ಅಗತ್ಯವಿರುವಷ್ಟು ಸಿಬ್ಬಂದಿ ಬರಬೇಕಿದೆ. ಅತಿ ಮುಖ್ಯವಾಗಿ ಗ್ರಾಮೀಣ ಭಾಗದ ಬಡಕೂಲಿಕಾರರು, ಆರ್ಥಿಕ ಸಂಕಷ್ಟದಲ್ಲಿದವರು ಹೃದಯ ರೋಗ, ಡಯಬಿಟಿಸ್‌ನಂಥ ಸಮಸ್ಯೆಯಿಂದ ಸಾಕಷ್ಟು ಜನರು ಬರುತ್ತಿದ್ದಾರೆ. ಮುಖ್ಯವಾಗಿ ಬೇಕಾದ ಫಿಜಿಶಿಯನ್‌ ಇಲ್ಲದೇ ಸಮಸ್ಯೆಯಾಗಿದೆ. ಇನ್ನೂ ಚಿಕ್ಕಮಕ್ಕಳು, ಕಣ್ಣು, ಮತ್ತು ಕಿವಿ ಮೂಗು ಗಂಟಲು ಇತರ ಸಮಸ್ಯೆಯಿಂದ ಸಾಕಷ್ಟು ಜನರು ಬರುತ್ತಿದ್ದು ಅವರಿಗೂ ತಜ್ಞರಿಲ್ಲದೇ ಸಮಸ್ಯೆಯಾಗಿದೆ. ಇನ್ನೂ
ಆಪರೇಶನ ಮಾಡಲು ಬೇಕಾದ ಸರ್ಜನ್‌ ಇಲ್ಲದೇ ಸಮಸ್ಯೆಯಾಗಿದೆ. ಸದ್ಯ ಎನ್‌ಎಚ್‌ಎಂ ಆಧಾರದಲ್ಲಿ ವೈದ್ಯರೊಬ್ಬರು ಕಾರ್ಯನಿರ್ವಹಿಸುತ್ತಿದ್ದರಿಂದ ಅರವಳಿಕೆ ಚಿಕಿತ್ಸೆ ಸಮಸ್ಯೆ ಕಡಿಮೆಯಾಗಿದೆ. ಈ ಆಸ್ಪತ್ರೆಯಲ್ಲಿ ಒಟ್ಟು 11 ವೈದ್ಯರ ಹುದ್ದೆಯಲ್ಲಿ 3 ವೈದ್ಯರು ಹಾಗೂ ಎನ್‌ಎಚ್‌ಎಂ ಆಧಾರದಲ್ಲಿ 2 ವೈದ್ಯರು ಸೇರಿ ಐದು ವೈದ್ಯರ ಇತರ ಸೇವೆ ಲಭ್ಯವಾಗಿದೆ.

ಇದಲ್ಲದೇ ಸಿಬ್ಬಂದಿ ಕೊರತೆಯೂ ಇದೆ. ಕಾರ್ಮಿಕ ಸಚಿವರು ಹಾಗೂ ಆರೋಗ್ಯ ಸಚಿವರು ಆದಷ್ಟು ಬೇಗ ಕಾಯಂ ವೈದ್ಯರನ್ನ ನೇಮಕ ಮಾಡಬೇಕೆಂದು ರೋಗಿಗಳು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶ್ರಮದಿಂದ ಇತ್ತೀಚಿನ ಆಧುನಿಕ ತಂತ್ರಜ್ಞಾನದ ಸುಧಾರಣೆಯಿಂದ ತಾಲೂಕು ಆಸ್ಪತ್ರೆ ಖಾಸಗಿ ಆಸ್ಪತ್ರೆಗಳಿಂತ ಒಂದು ಹೆಜ್ಜೆ ಮುಂದೆ ಇದೆ. ಬಡ, ಸಾಮಾನ್ಯ ಮತ್ತು ಎಲ್ಲ ವರ್ಗದ ರೋಗಿಗಳು ವೈದ್ಯರನ್ನು ನಂಬಿ ಇಲ್ಲಿ ಚಿಕಿತ್ಸೆಗೆ ಬರುತ್ತಾರೆ. ಆದರೆ ಸಂಜೆಯಾದ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಕೆಲವರು ವಾಪಸ್‌ ಹೋದರೆ ಇನ್ನು ಕೆಲವರು ವೈದ್ಯರು ಬರುವವರೆಗೆ ಕಾಯುತ್ತ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಆದಷ್ಟು ಬೇಗ ವೈದ್ಯರನ್ನು ನೇಮಿಸಿಕೊಳ್ಳಬೇಕು.
ನಾಗರಾಜ ಗುಬ್ಬಕ್ಕನವರ, ರೈತ ಮುಖಂಡ

ವೈದ್ಯರ ಕೊರತೆ ಇದೆ. ತಾಲೂಕಾಸ್ಪತ್ರೆಗೆ ನಿತ್ಯ ನೂರಾರು ರೋಗಿಗಳು ಬರುತ್ತಿದ್ದು, ಎಲ್ಲ ಸೌಲಭ್ಯಗಳು ಇವೆ. ಇದ್ದ ವೈದ್ಯರೆ ಉತ್ತಮ ಸೇವೆ ನೀಡುತ್ತಿದ್ದಾರೆ. ಫಿಜಿಶಿಯನ್‌, ಮಕ್ಕಳ ತಜ್ಞರ ಅಗತ್ಯತೆ ಇದ್ದು, ಹಿರಿಯ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಅವಶ್ಯವಿರುವ ಎಂಬಿಬಿಎಸ್‌ ವೈದ್ಯರು ಬಂದರೆ ಇನ್ನು ಹೆಚ್ಚಿನ ಅನುಕೂಲವಾಗಲಿದೆ.
ಡಾ| ಎಸ್‌ ಶಿವಕುಮಾರ,
ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ

*ಮುನೇಶ ತಳವಾರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.