ಭಾರತದ ವಿರುದ್ಧ “ಉಗ್ರ’ ಅಸ್ತ್ರ ಬಳಕೆ ತೀವ್ರಗೊಳಿಸಿದ ಪಾಕ್
ತಾನು ಭಿಕ್ಷೆ ಬೇಡುತ್ತಿದ್ದರೂ, ಪಾಪ ಕೃತ್ಯಗಳಿಗೆ ಕೊನೆಯಿಲ್ಲ!
Team Udayavani, Jan 11, 2023, 7:30 AM IST
ನವದೆಹಲಿ:2021ಕ್ಕೆ ಹೋಲಿಸಿದರೆ 2022ರಲ್ಲಿ ಉಗ್ರ ಕೃತ್ಯಗಳಿಗೆ ನಾಗರಿಕರು ಬಲಿಯಾದ ಪ್ರಕರಣಗಳು ಶೇ.13.5ರಷ್ಟು ಕಡಿಮೆಯಾಗಿದ್ದರೂ, ಭಾರತದಲ್ಲಿ ಇಸ್ಲಾಮಿಕ್ ಉಗ್ರವಾದವು ಹೆಚ್ಚಳವಾಗುತ್ತಿದ್ದು, ಇದನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಉಗ್ರ ಸಂಘಟನೆಗಳು ಪೋಷಿಸುತ್ತಿವೆ ಎಂದು ದತ್ತಾಂಶಗಳು ಹೇಳಿವೆ.
ಒಂದು ಕಡೆ ಆರ್ಥಿಕವಾಗಿ ಭಿಕ್ಷೆ ಎತ್ತುವಂಥ ಸ್ಥಿತಿಗೆ ತಲುಪಿರುವ ಪಾಕಿಸ್ತಾನ, ತನಗೆ ನೆರವಾಗುವಂತೆ ಜಗತ್ತಿನ ಇತರೆ ದೇಶಗಳ ಮುಂದೆ ಕೈಚಾಚಿ ನಿಂತಿದೆ. ಎರಡಂಕಿ ಹಣದುಬ್ಬರ, ದುರ್ಬಲ ಕರೆನ್ಸಿಯಿಂದ ನಲುಗಿರುವ ನಡುವೆಯೂ ಪಾಕಿಸ್ತಾನವು ತನ್ನ ಪಾಪಕೃತ್ಯಗಳನ್ನು ಮಾತ್ರ ನಿಲ್ಲಿಸಿಲ್ಲ. ಭಾರತದಲ್ಲಿ ಆಂತರಿಕ ಕ್ಷೋಭೆ ಹುಟ್ಟುಹಾಕಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡುತ್ತಲೇ ಇದೆ ಎಂದೂ ವರದಿಗಳು ತಿಳಿಸಿವೆ.
ಪಾಕಿಸ್ತಾನವು ಕಾಶ್ಮೀರದಲ್ಲಿ ಎಲ್ಲ ಪಾಕ್ ಮೂಲದ ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸಿದೆ. ಡ್ರೋನ್ಗಳ ಮೂಲಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹೆಚ್ಚಿಸಿದೆ, ಭಾರತದಲ್ಲಿ ಉಗ್ರರಿಗೆ ಹಣಕಾಸು ನೆರವು ಒದಗಿಸಲು ಆಫ^ನ್ ಹೆರಾಯಿನ್ ಅನ್ನು ರವಾನಿಸುತ್ತಿದೆ, ಭಾರತ-ನೇಪಾಳ ಗಡಿಯಲ್ಲಿ 5 ಕಿ.ಮೀ. ವ್ಯಾಪ್ತಿಯೊಳಗೆ ಮಸೀದಿಗಳು ಮತ್ತು ಮದರಸಾಗಳ ನಿರ್ಮಾಣಕ್ಕೂ ಹಣಕಾಸು ನೆರವು ಒದಗಿಸುತ್ತಿದೆ ಎಂದು ಮೂಲಗಳು ತಿಳಿಸಿದೆ.
2022ರಲ್ಲಿ ಪಾಕ್ ಮೂಲದ ಲಷ್ಕರ್, ಜೈಶ್, ಹಿಜ್ಬುಲ್ ಮುಜಾಹಿದೀನ್ ಮತ್ತು ಅಲ್ ಬದ್ರ್ ಮುಜಾಹಿದೀನ್ ಸಂಘಟನೆಗಳು ಕಣಿವೆಯಲ್ಲಿ ಸಕ್ರಿಯವಾಗಿದ್ದವು. ಈಗ ಪಾಕಿಸ್ತಾನವು ಹೊಸ ಉಗ್ರ ಸಂಘಟನೆಗಳಾದ ದಿ ರೆಸಿಸ್ಟೆನ್ಸ್ ಫ್ರಂಟ್, ಕಾಶ್ಮೀರ್ ಫ್ರೀಡಂ ಫೈಟರ್ಸ್, ಪೀಪಲ್ಸ್ ಆ್ಯಂಟಿ-ಫ್ಯಾಸಿಸ್ಟ್ ಫ್ರಂಟ್, ಜೆಕೆ ಘಝಾನಿ ಫೋರ್ಸ್, ಯುಎಲ್ಎಫ್, ಮುಜಾಹಿದೀನ್ ಗಜ್ವತುಲ್ ಹಿಂದ್, ಕಾಶ್ಮೀರ್ ಟೈಗರ್ಸ್, ಕಾಶ್ಮೀರ್ ಜಾನ್ಬಾಜ್ ಫೋರ್ಸ್ಗಳನ್ನು ಛೂಬಿಟ್ಟು ಸ್ಥಳೀಯರನ್ನು ಬೆದರಿಸಲು ಯತ್ನಿಸುತ್ತಿದೆ ಎಂದೂ ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.