ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ

ವಾರಾಂತ್ಯದಲ್ಲಿ ಪಠ್ಯಾಧಾರಿತ ಕ್ವಿಜ್‌, ಪರೀಕ್ಷೆ ವೇಳೆ ಶಾಲೆಯಲ್ಲೇ ಪುನರ್‌ ಮನನ

Team Udayavani, Jan 11, 2023, 7:35 AM IST

ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ

ಉಡುಪಿ: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಫ‌ಲಿತಾಂಶ ಉನ್ನತೀಕರಿಸಿಕೊಳ್ಳಲು ಸಿದ್ಧತೆಯೂ ಅಷ್ಟೇ ವ್ಯವಸ್ಥಿತವಾಗಿ ನಡೆಯುತ್ತಿದೆ. ಉಡುಪಿ ಜಿಲ್ಲೆಯ ವಾರಕ್ಕೊಮ್ಮೆ ತರಗತಿಯಲ್ಲಿ ಪಠ್ಯಾಧಾರಿತ ರಸಪ್ರಶ್ನೆ ಆಯೋಜಿಸುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಎಸೆಸೆಲ್ಸಿ ವಿದ್ಯಾರ್ಥಿಗಳು ವಾರಪೂರ್ತಿ ಕಲಿತ ಪಾಠವನ್ನು ಪರೀಕ್ಷೆಯಲ್ಲಿ ಸುಲಭವಾಗಿ ನೆನಪಿಟ್ಟುಕೊಳ್ಳಲು ಅನುಕೂಲ ವಾಗುವಂತೆ ಆಯಾ ವಾರದ ಅಂತ್ಯದಲ್ಲಿ ಪಠ್ಯಾಧಾರಿತವಾದ ರಸಪ್ರಶ್ನೆಗಳನ್ನು ವಿಷಯ ಶಿಕ್ಷಕರು ಸಿದ್ಧಪಡಿಸಿ, ಮಕ್ಕಳಿಗೆ ಕೇಳುತ್ತಾರೆ. ಈ ಮೂಲಕ ವಿಷಯವನ್ನು ಸುಲಭವಾಗಿ ಅರ್ಥೈಸಲು ಕ್ರಮ ಕೈಗೊಳ್ಳಲಾಗಿದೆ.

ಮನೆ ಮನೆ ಭೇಟಿ
ಪ್ರತೀ ವರ್ಷ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಮನೆ ಮನೆ ಭೇಟಿ ಮಾಡುತ್ತಿದ್ದರು. ಈ ಬಾರಿ ಅದರ ಮುಂದುವರಿದ ಭಾಗವಾಗಿ ಡಿಡಿಪಿಐ ಸಹಿತವಾಗಿ ಬಿಇಒ, ಸಿಆರ್‌ಪಿ, ಬಿಆರ್‌ಪಿ ಸಹಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೂಡ ವಿದ್ಯಾರ್ಥಿಗಳ ಮನೆ ಮನೆ ಭೇಟಿ ಮಾಡಲಿದ್ದಾರೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳ ಮಾಹಿತಿ ನೀಡುವ ಜತೆಗೆ ಪಾಲಕ, ಪೋಷಕರು ಪರೀಕ್ಷೆ ಸಂದರ್ಭದಲ್ಲಿ ಹೇಗಿರಬೇಕು ಎಂಬುದರ ಮಾಹಿತಿ ನೀಡಲಿದ್ದಾರೆ.

ವಿಶೇಷ ಬೋಧನೆ
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಒಂದು ವಿಷಯದಿಂದ ಇನ್ನೊಂದು ವಿಷಯಕ್ಕೆ ಮಧ್ಯದಲ್ಲಿ ಒಂದು ಅಥವಾ ಎರಡು ದಿನ ರಜೆ ಇರುತ್ತದೆ. ಈ ರಜಾ ದಿನಗಳನ್ನು ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಆ ದಿನದಂದು ಶಾಲೆಗೆ ವಿದ್ಯಾರ್ಥಿಗಳನ್ನು ಕರೆಸಿ, ಬೆಳಗ್ಗಿನಿಂದ ಸಂಜೆಯ ವರೆಗೂ ಆಯಾ ವಿಷಯ ಶಿಕ್ಷಕರ ಮೂಲಕ ಪರೀಕ್ಷೆಗೆ ಸಂಬಂಧಿಸಿದ ಅಂತಿಮ ಹಂತದ ಪುನರ್‌ ಮನನ ಮಾಡಲಿದ್ದಾರೆ. ಮಕ್ಕಳಿಗೆ ಮಧ್ಯಾಹ್ನದ ಊಟವೂ ಶಾಲೆಯಲ್ಲೆ ವ್ಯವಸ್ಥೆಯಾಗಲಿದೆ. ಜಿಲ್ಲೆಯ ಮಟ್ಟಿಗೆ ಇದೊಂದು ವಿಶೇಷ ಪ್ರಯತ್ನವೂ ಆಗಲಿದೆ.

ತಾಯಂದಿರ ಸಭೆ
ಮಕ್ಕಳ ವಿದ್ಯಾಭ್ಯಾಸದ ಪೂರ್ಣ ಮಾಹಿತಿಯನ್ನು ತಾಯಿಗೆ ನೀಡಬೇಕು ಮತ್ತು ಪರೀಕ್ಷಾ ಸಂದರ್ಭದಲ್ಲಿ ಮಕ್ಕಳು ಯಾವ ರೀತಿ ಅಧ್ಯಯನ ಮಾಡಬೇಕು, ಮನೆಯವರ ಸಹಕಾರ ಹೇಗಿರಬೇಕು ಎಂಬುದನ್ನು ತಿಳಿಸಲು ಪ್ರತಿ ಪ್ರೌಢಶಾಲೆಯನ್ನು ತಿಂಗಳ ಕೊನೆಯಲ್ಲಿ ಮಕ್ಕಳ ತಾಯಂದಿರ ವಿಶೇಷ ಸಭೆ ನಡೆಸಲಾಗುತ್ತದೆ.

ಅಣಕು ಪರೀಕ್ಷೆ
ವಾರ್ಷಿಕ ಪರೀಕ್ಷೆಗೂ ಪೂರ್ವದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಇದರ ಮಧ್ಯದಲ್ಲೇ ಜಿಲ್ಲೆಯಲ್ಲೊಂದು ಮೊಕ್‌ ಟೆಸ್ಟ್‌(ಅಣಕು ಪರೀಕ್ಷೆ) ನಡೆಸಲು ಇಲಾಖೆಯಿಂದ ಯೋಚನೆ ನಡೆಯುತ್ತಿದೆ. ವಾರ್ಷಿಕ ಪರೀಕ್ಷೆಯ ಮಾದರಿಯಲ್ಲೇ ಇದನ್ನು ನಡೆಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ದೂರಮಾಡುವುದು ಇದರ ಉದ್ದೇಶವಾಗಿದೆ.

ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಈ ಹಿಂದಿನ ವರ್ಷಗಳಲ್ಲಿ ತೆಗೆದುಕೊಂಡಿರುವ ಉತ್ತಮ ವಿಧಾನಗಳನ್ನು ಈ ವರ್ಷವೂ ಮುಂದುರಿಸುವ ಜತೆಗೆ ಕೆಲವೊಂದು ಹೊಸ ಉಪಕ್ರಮಗಳನ್ನು ಜೋಡಿಸಿಕೊಳ್ಳುತ್ತಿದ್ದೇವೆ. ತರಗತಿಯಲ್ಲಿ ವಿದ್ಯಾರ್ಥಿಗಳ ಗುಂಪು ರಚನೆ, ಕಲಿಕೆಯ ಆಧಾರದಲ್ಲಿ ವಿಶೇಷ ಆದ್ಯತೆ ನೀಡುವುದು, ವಿಶೇಷ ತರಗತಿ ಇತ್ಯಾದಿಗಳು ನಿರಂತರವಾಗಿ ನಡೆಯುತ್ತಿರುತ್ತವೆ.
– ಕೆ. ಗಣಪತಿ, ಸುಧಾಕರ್‌, ಡಿಡಿಪಿಐ, ಉಡುಪಿ ಮತ್ತು ದ.ಕ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.