ಸರ್ಕಾರದಿಂದಲೇ ರೈತರ ಭೂಮಿ ಅತಿಕ್ರಮಣ: ಆರೋಪ


Team Udayavani, Jan 11, 2023, 12:07 PM IST

tdy-11

ಚನ್ನರಾಯಪಟ್ಟಣ: ತಾಲೂಕಿನ ಭಟ್ರಮಾರೇನ ಹಳ್ಳಿ ಗ್ರಾಮದಲ್ಲಿ ಕೈಗಾರಿಕೆ ಉದ್ದೇಶಕ್ಕೆ ಅಧಿಸೂಚನೆಗೆ ಒಳಪಡದೆ ಇದ್ದ ಭೂಮಿಯನ್ನು ಕಾನೂನು ಬಾಹಿರವಾಗಿ ಕೆಐಎಡಿಬಿ ಅಧಿಕಾರಿಗಳು ಅಕ್ರಮವಾಗಿ ವಶ ಪಡಿಸಿಕೊಂಡು, ಕರ್ನಾಟಕ ವಿದ್ಯುತ್‌ ಪ್ರಾಧಿಕಾರ(ಕೆಇಬಿ)ಗೆ ನೀಡಿದ್ದಾರೆಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರೈತ ಸಿ.ನಾರಾಯಣಸ್ವಾಮಿ ಮಾತನಾಡಿ, ಭಟ್ರ ಮಾರೇನಹಳ್ಳಿ ಗ್ರಾಮದ ಸರ್ವೆ ನಂಬರ್‌ 7/1ರ ಭೂಮಿಯನ್ನು ಕೃಷಿಯಿಂದ ಬಂದ ಆದಾಯದ ಮೂಲಕ 1 ಎಕರೆ 28 ಗುಂಟೆ ಭೂಮಿಯನ್ನು ಖರೀದಿ ಮಾಡಿದ್ದು, ಅದರಂತೆ ಸ್ವಾಧೀನದಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡು 8 ಜನರ ಕುಟುಂಬ ಜೀವನ ನಿರ್ವಹಣೆ ಮಾಡಿಕೊಂಡು ಬಂದಿರುತ್ತೇವೆ. ಕೈಗಾರಿಕಾ ಉದ್ದೇಶಕ್ಕೆ ಸರ್ಕಾರದಿಂದ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ನಮ್ಮ ಭೂಮಿ ಇಲ್ಲದಿದ್ದರೂ ಅನಧಿಕೃತವಾಗಿ ವಶ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳಿಂದ ಕಳ್ಳತನ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಸ್ಥಳೀಯ ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂವತಿಯಿಂದ ಅನುಮತಿ ಪಡೆದು ಅಗತ್ಯ ಕಟ್ಟಡ ಸಾಮಾಗ್ರಿ ಜಮೀನಿಲ್ಲಿತ್ತು. ಚಪ್ಪಡಿ ಕಲ್ಲು, ಕೃಷಿಸಲಕರಣೆಗಳು ಶೇಖರಿಸಿದ್ದೇವು, ಆದರೆ, ಹೊಲದಕೆಲಸ ಮುಗಿಸಿ ಮನೆಗೆ ತೆರಳಿದ ನಂತರ ಕೆಐಎಡಿಬಿ ಅಧಿಕಾರಿಗಳು ಬಂದು ಅಲ್ಲಿದ್ದ 5 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ವಸ್ತುಗಳನ್ನು ಮತ್ತೂಂದೆಡೆ ಸಾಗಿಸಿದ್ದಾರೆ. ಇದು ಸರ್ಕಾರವೇ ಮಾಡಿರುವ ಕಳ್ಳತನ ಎಂದು ದೂರಿದರು.

ಸಹಾಯಕ್ಕೆ ಬಾರದ ಪೊಲೀಸರು: ಅಧಿಸೂಚನೆ ಯಾಗದ ಜಾಗವನ್ನು ಅನಧಿಕೃತವಾಗಿ ವಶಕ್ಕೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್‌ ಠಾಣೆಗಳಾದ ಚನ್ನರಾಯಪಟ್ಟಣ ಹಾಗೂ ವಿಜಯಪುರ ಠಾಣೆಗಳಲ್ಲಿ ದೂರು ನೀಡಲು ಯತ್ನಿಸಿದಾಗಲೂ ಅನ್ನದಾತರ ರಕ್ಷಣೆ ಮಾಡುವ ಬದಲು, ಅಧಿಕಾರಿಗಳಿಗೆ ಭದ್ರತಾ ಗೋಡೆಗಳಾಗಿ ಪೊಲೀಸ್‌ ಸಿಬ್ಬಂದಿ ನಿಂತರು, ತೀವ್ರವಾದ ಪ್ರಕರಣವನ್ನು ಎನ್ಸಿಆರ್‌ ಮಾಡಿ ಠಾಣೆಯಿಂದ ಹೊರಹಾಕಿದರೂ ಎಂದು ಅಳಲು ವ್ಯಕ್ತಪಡಿಸಿದರು.

2 ವರ್ಷ ಹೈಕೋರ್ಟ್‌ ಅಲೆದಾಟ: ಸರ್ಕಾರ ಸ್ವಾಧೀನ ಮಾಡಲು ನೋಟಿಫಿಕೇಷನ್‌ ಮಾಡದ ಭೂಮಿಯನ್ನು ವಶಕ್ಕೆ ಪಡೆದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ವಿದ್ಯುತ್‌ ಪರಿಕರಗಳನ್ನು ಹಾಕಿರುವ ಇಲಾಖೆಯ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿಯಥಾ ಸ್ಥಿತಿಯ ತಡೆಯಾಜ್ಞೆ ತಂದರೂ, ಮಾನ್ಯ ನ್ಯಾಯಾಲಯದ ಆದೇಶಕ್ಕೂ ಕಿಮ್ಮತ್ತು ನೀಡದೇ ಪುನಃ ಜಮೀನಿನಲ್ಲಿ ಕಾಮಗಾರಿಮಾಡಲಾಗುತ್ತಿದೆ, ಆಡಳಿತಾಂಗ, ನ್ಯಾಯಾಂಗವೂ ನೆರವಿಗೆ ಬಾರದಿದಾಗ ದೇಶದ ಸಂವಿಧಾನದಮೇಲೆ ಗೌರವ ಕಡಿಮೆಯಾಗುತ್ತಿದೆ ಎಂದು ಹೋರಾಟಗಾರರು ಬೇಸರ ವ್ಯಕ್ತಪಡಿಸಿದರು.

280 ದಿನಗಳಿಂದ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಜೊತೆಗೂಡಿ ನಮ್ಮ ಭೂಮಿ ಉಳಿವಿಗೆ ನಿರಂತರ ಪತ್ರ ವ್ಯವಹಾರಗಳನ್ನು ಕಂದಾಯ ಇಲಾಖೆಯೊಂದಿಗೆ ಮಾಡಲಾಗುತ್ತಿದೆ. ಅಧಿಕಾರಿ ಗಳಿಗೆ ರೈತರ ಹಿತ ಕಾಪಾಡುವ ಇಚ್ಛಾಶಕ್ತಿ ಇಲ್ಲ, ಯಾವುದೇ ಕಾರಣಕ್ಕೂ ಭೂಮಿನೀಡುವುದಿಲ್ಲ ಬೇಕಿದ್ದರೇ ಇಲ್ಲಿಯೇ ಪ್ರಾಣ ಬಿಟ್ಟು ರೈತಸ್ಮಾರಕ ಕಟ್ಟಿಸುತ್ತೇವೆ ಎಂದು ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.

ವಕೀಲ ಸಿದ್ದಾರ್ಥ್, ರಾಯಸಂದ್ರದಸೋಮಶೇಖರ್‌, ಚನ್ನಹಳ್ಳಿ ನಾರಾಯಣಸ್ವಾಮಿ, ಬಿದಲೂರು ರಮೇಶ್‌, ಐಬಸಾಪುರ ರಾಮಾಂಜಿ ನಪ್ಪ, ಮೂಡಿಗಾನಹಳ್ಳಿ ಹನುಮಂತರಾಯಪ್ಪ, ಕಾರಹಳ್ಳಿ ರಾಜಣ್ಣ, ಕುಂದಾಣ ವೆಂಕಟೇಶ್‌, ವಿಜಯಪುರ ಅಶ್ವಥ್, ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.