ಮಲೇಷ್ಯಾ ಓಪನ್‌ ಸೂಪರ್‌ 1000 ಕೂಟ: ಸಿಂಧು ಪತನ; ಪ್ರಣಯ್‌ ಮುನ್ನಡೆ


Team Udayavani, Jan 11, 2023, 11:09 PM IST

ಮಲೇಷ್ಯಾ ಓಪನ್‌ ಸೂಪರ್‌ 1000 ಕೂಟ: ಸಿಂಧು ಪತನ; ಪ್ರಣಯ್‌ ಮುನ್ನಡೆ

ಕೌಲಾಲಂಪುರ: ಗಾಯದ ಸಮಸ್ಯೆಯಿಂದ ದೀರ್ಘ‌ ಸಮಯದ ವಿಶ್ರಾಂತಿಯ ಬಳಿಕ ಸ್ಪರ್ಧೆಗೆ ಮರಳಿದ್ದ ಪಿ.ವಿ. ಸಿಂಧು ಮಲೇಷ್ಯಾ ಓಪನ್‌ ಸೂಪರ್‌ 1000 ಬ್ಯಾಡ್ಮಿಂಟನ್‌ ಕೂಟದ ಮೊದಲ ಸುತ್ತಿನ ಹೋರಾಟದಲ್ಲಿಯೇ ಎಡವಿದ್ದಾರೆ. ಆದರೆ ಉತ್ತಮ ಫಾರ್ಮ್ ನಲ್ಲಿರುವ ಎಚ್‌. ಎಸ್‌. ಪ್ರಣಯ್‌ ತನ್ನ ದೇಶದವರೇ ಆದ ಲಕ್ಷ್ಯ ಸೇನ್‌ ಅವರನ್ನು 3 ಗೇಮ್‌ಗಳ ಕಠಿನ ಹೋರಾಟದಲ್ಲಿ ಕೆಡಹಿ ಮುನ್ನಡೆ ಸಾಧಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಬಳಿಕ ಗಾಯಕ್ಕೆ ಒಳಗಾದ ಬಳಿಕ ಇದೇ ಮೊದಲ ಬಾರಿ ಆಡಿದ ಆರನೇ ಶ್ರೇಯಾಂಕದ ಸಿಂಧು 59 ನಿಮಿಷಗಳ ಹೋರಾಟದಲ್ಲಿ ರಿಯೋ ಒಲಿಂಪಿಕ್ಸ್‌ ಚಾಂಪಿಯನ್‌ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ ಕೈಯಲ್ಲಿ 12-21, 21-10, 15-21 ಗೇಮ್‌ಗಳಿಂದ ಶರಣಾದರು.

ಈ ಮೊದಲು ವಿಶ್ವದ ಎಂಟನೇ ರ್‍ಯಾಂಕಿನ ಪ್ರಣಯ್‌ ನಿರೀಕ್ಷಿತ ನಿರ್ವಹಣೆ ನೀಡಿ ಲಕ್ಷ್ಯ ಸೇನ್‌ ಅವರನ್ನು 22-24, 21-12, 21-18 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಕೇರಳ ಮೂಲದ ಅವರು ಮುಂದಿನ ಸುತ್ತಿನಲ್ಲಿ ಇಂಡೋನೇಶ್ಯದ ಚಿಕೊ ಔರಾ ದ್ವಿ ವಾರ್ಡೊಯೊ ಅವರನ್ನು ಎದುರಿಸಲಿದ್ದಾರೆ.

ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಕೊರಿಯದ ಚೋಯಿ ಸೋಲ್‌ ಗ್ಯು ಮತ್ತು ಕಿಮ್‌ ವೋನ್‌ ಹೊ ಅವರನ್ನು 21-16, 21-13 ಗೇಮ್‌ಗಳಿಂದ ಸೋಲಿಸಿ ಪ್ರಿ-ಕ್ವಾರ್ಟರ್‌ಫೈನಲಿಗೇರಿದರು. ಮುಂದಿನ ಸುತ್ತಿನಲ್ಲಿ ಅವರು ಇಂಡೋನೇಶ್ಯದ ಮುಹಮ್ಮದ್‌ ಶೊಹಿಮುಲ್‌ ಫಿಕ್ರಿ ಮತ್ತು ಬಗಸ್‌ ಮೌಲಾನ ಅವರನ್ನು ಎದುರಿಸಲಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ಮಾಳವಿಕಾ ಬನ್ಸೂದ್‌ ಅವರು ಮೊದಲ ಸುತ್ತು ದಾಟಲು ವಿಫ‌ಲರಾದರು. ಅವರು ದ್ವಿತೀಯ ಶ್ರೇಯಾಂಕದ ಕೊರಿಯದ ಆ್ಯನ್‌ ಸೆ ಯಂಗ್‌ ಅವರ ಕೈಯಲ್ಲಿ 9-21, 12-21 ಗೇಮ್‌ಗಳಿಂದ ಸೋತು ಹೊರಬಿದ್ದರು. ವನಿತೆಯರ ಡಬಲ್ಸ್‌ನಲ್ಲಿ ಅಶ್ವಿ‌ನಿ ಭಟ್‌ ಮತ್ತು ಶಿಖಾ ಗೌತಮ್‌ ಕೂಡ ನೇರ ಗೇಮ್‌ಗಳಿಂದ ಸೋತು ಹೊರಬಿದ್ದಿದ್ದಾರೆ.

 

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.