ಸುರಕ್ಷಾ ಕ್ರಮಗಳ ಮೇಲಿರಲಿ ಹೆಚ್ಚಿನ ಆದ್ಯತೆ


Team Udayavani, Jan 12, 2023, 6:00 AM IST

ಸುರಕ್ಷಾ ಕ್ರಮಗಳ ಮೇಲಿರಲಿ ಹೆಚ್ಚಿನ ಆದ್ಯತೆ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕುಸಿದು ಮಂಗಳವಾರ ಇಬ್ಬರು ಅಮಾಯಕರು ಪ್ರಾಣ ಕಳೆದುಕೊಂಡಿದ್ದು, ತಾಯಿ ಮತ್ತು ಮಗುವಿನ ದಾರುಣ ಅಂತ್ಯಕ್ಕೆ “ನಮ್ಮ ಮೆಟ್ರೋ’ ದುಃಸಾಕ್ಷಿಯಾಗಿದೆ. ಇದು ಕಳಪೆ ಕಾಮಗಾರಿಯ ಪರಿಣಾಮ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಕಾಮಗಾರಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕೊರತೆ ಮತ್ತು ಕಾಮಗಾರಿಯ ನಿರ್ವಹಣೆಯ ಸ್ಥಾನಗಳಲ್ಲಿರುವವರ ಘೋರ ಅವಜ್ಞೆ ಇದಕ್ಕೆ ಪ್ರಮುಖ ಕಾರಣ.

ಮೆಟ್ರೋ ಕಾಮಗಾರಿ ವೇಳೆ ದುರಂತ ಘಟಿಸಿ ಸಾವು-ನೋವು ಸಂಭ ವಿಸಿದ್ದು ಇದೇ ಮೊದಲಲ್ಲ. ಕಳೆದ ಒಂದು ದಶಕದಲ್ಲಿ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಭವಿಸಿದಾಗ ಸರಕಾರದ ತುರ್ತು ಸ್ಪಂದನೆ, ಸಾರ್ವಜನಿಕರ ಕ್ಷಣಿಕ ಆಕ್ರೋಶ ಕಂಡು ಬರುತ್ತದೆ. ಸಮಯ ಕಳೆದಂತೆ ಎಲ್ಲವೂ ತೆರೆಗೆ ಸರಿಯುತ್ತದೆ. ಮತ್ತೆ ಯಾವುದಾದರೂ ಘಟನೆ ನಡೆದಾಗ ಮತ್ತದೆ ಪುನರಾವರ್ತನೆಯಾಗುತ್ತದೆ. ಬುಧ ವಾರ ನಡೆದ ಘಟನೆಯೂ ಒಂದೆರಡು ದಿನಗಳಲ್ಲಿ ನೇಪಥ್ಯಕ್ಕೆ ಸರಿಯುತ್ತದೆ.

ಸರಕಾರ ಪರಿಹಾರ ಘೋಷಣೆ ಮಾಡಿದೆ, ಮೆಟ್ರೋ ಸಹ ಪರಿಹಾರ ನೀಡುವ ಮಾತನಾಡಿದೆ, ಗುತ್ತಿಗೆದಾರ ಕಂಪೆನಿ ಎನ್‌ಸಿಸಿ, ಮೆಟ್ರೋ ನಿಗಮಕ್ಕೆ ಸೇರಿದ ಕೆಲವರ ಮೇಲೆ ಎಫ್ಐಆರ್‌ ಆಗಿ ಕೆಲವರನ್ನು ಅಮಾನತುಗೊಳಿಸಲಾಗಿದೆ. ಪರಿಶೀಲಿಸಿ ವರದಿ ಸಲ್ಲಿಸಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಗೆ ವಹಿಸಲಾಗಿದೆ. ಇದೆಲ್ಲವೂ ತಾಂತ್ರಿಕ ಮತ್ತು ಕಾನೂನಾತ್ಮಕ ಹಂತಗಳು. ಬಿಸೋದೊಣ್ಣೆಯಿಂದ ತಪ್ಪಿಸಿಕೊಳ್ಳಲು ಇರುವ ಮಾರ್ಗಗಳು. ಆದರೆ ಈ ಬಗ್ಗೆ ದೂರದೃಷ್ಟಿ ಕ್ರಮಗಳ ಅಗತ್ಯವಿದೆ. 2009ರಿಂದ ಇಲ್ಲಿಯವರೆಗೆ 10ಕ್ಕೂ ಹೆಚ್ಚು ಜನ ಮೆಟ್ರೋ ಕಾಮಗಾರಿಗಳಿಗೆ ತಮ್ಮ “ಬಲಿ ಅರ್ಪಿಸಿದ್ದಾರೆ’.

ಮೆಟ್ರೋ ರೈಲು ಯೋಜನೆಗೆ ಸರಕಾರ “ನಮ್ಮ ಮೆಟ್ರೋ’ ಹೆಸರು ಕೊಟ್ಟಿದೆ. ಇದು ನಿಜಕ್ಕೂ ನಮ್ಮದಾಗಬೇಕಾದರೆ ಕಾಮಗಾರಿ ಮತ್ತು ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಬೇಕು. ನಾಗರಿಕರಿಗೆ ಮೂಲ     ಸೌಕರ್ಯಗಳನ್ನು ಒದಗಿಸುವ ಯೋಜನೆಗಳ ಅನುಷ್ಠಾನದಲ್ಲಿ ಅವರ ಸುರಕ್ಷತೆಯೂ ಮುಖ್ಯವಾಗಬೇಕು. ನಗರದಲ್ಲಿನ ಮೆಟ್ರೋ ಕಾಮಗಾರಿಗಳು ಸ್ವತಃ ಅಪಾಯಗಳನ್ನು ತಂದಿಡುವುದರ ಜತೆಗೆ ಅನೇಕ ಅನಾಹುತ, ಅನನುಕೂಲತೆಗಳಿಗೆ ದಾರಿ ಮಾಡಿಕೊಡುತ್ತಿವೆ. ಅಪಫಾತಗಳಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ತಂದುಕೊಟ್ಟ ಅಪಖ್ಯಾತಿ ಮೆಟ್ರೋಗೆ ಸಲ್ಲುತ್ತದೆ. ಬೆಂಗಳೂರಿಗೆ ರಸ್ತೆ ಗುಂಡಿಗಳ ಕಿರೀಟ ಬಂದಿರುವುದರಲ್ಲಿ ದೊಡ್ಡ ಪಾತ್ರ ಮೆಟ್ರೋ ಕಾಮಗಾರಿಯದ್ದು ಇದೆ. ಈ ವಿಚಾರದಲ್ಲಿ ಹೈಕೋರ್ಟ್‌ ಅನೇಕ ಬಾರಿ ಮೆಟ್ರೋ ನಿಗಮ ಹಾಗೂ ಸರಕಾರಕ್ಕೆ ಚಾಟಿ ಬೀಸಿದೆ.

ಮೆಟ್ರೋ ಯೋಜನೆ ಸದ್ಯಕ್ಕೆ ಮುಗಿಯುವಂತದ್ದಲ್ಲ ಇನ್ನೂ ಕೆಲ ಹಂತಗಳ ಕಾಮಗಾರಿ ಮುಂಬರುವ ವರ್ಷಗಳಲ್ಲಿ ಪ್ರಾರಂಭವಾಗಬೇಕಿದೆ. ಬುಧವಾರ ನಡೆದ ತಾಯಿ-ಮಗುವಿನ ಸಾವು ಪ್ರಕರಣ ಸರಕಾರ ಮತ್ತು ಮೆಟ್ರೋ ನಿಗಮಕ್ಕೆ ಎಚ್ಚರಿಕೆ ಗಂಟೆ ಆಗಬೇಕು. ಕಳಪೆ ಕಾಮಗಾರಿಗೆ ಕಿಂಚಿತ್ತೂ ಅವಕಾಶ ನೀಡದೆ, ಕಾಮಗಾರಿ ನಡೆಸುವ ವೇಳೆ ಸುರಕ್ಷಾ ಕ್ರಮಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಆ ಮೂಲಕ ಅಮಾಯಕ ಜನರ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು. ಗುಣಮಟ್ಟದ ಕಾಮಗಾರಿ ಮತ್ತು ನಾಗರಿಕರ ಸುರಕ್ಷತೆ ಧ್ಯೇಯವಾಕ್ಯವಾಗಲಿ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.