ರಣಜಿ ಮುಖಾಮುಖಿ: ರಾಜಸ್ಥಾನವನ್ನು ಕೆಡವಿದ ಕರ್ನಾಟಕ


Team Udayavani, Jan 12, 2023, 10:36 PM IST

BCCI

ಆಲೂರು: ರಾಜಸ್ಥಾನ ವಿರುದ್ಧದ ರಣಜಿ ಮುಖಾಮುಖಿಯಲ್ಲಿ ಕರ್ನಾಟಕ ತಂಡ 10 ವಿಕೆಟ್‌ಗಳ ಅಧಿಕಾರಯುತ ಗೆಲುವು ಸಾಧಿಸಿದೆ. ಇದರೊಂದಿಗೆ “ಸಿ’ ವಿಭಾಗದ ಅಂಕಪಟ್ಟಿಯ ಅಗ್ರಸ್ಥಾನ ಅನ್ಯರ ಪಾಲಾಗದು ಎಂಬುದನ್ನು ಸಾರಿಹೇಳಿದೆ.

ಗೆಲುವಿಗೆ ಕೇವಲ 15 ರನ್‌ ಗಳಿಸ ಬೇಕಿದ್ದ ಕರ್ನಾಟಕ ವಿಕೆಟ್‌ ನಷ್ಟವಿಲ್ಲದೆ ಗುರಿ ಮುಟ್ಟಿತು. ಇದರೊಂದಿಗೆ ಪಂದ್ಯ ಮೂರೇ ದಿನದಲ್ಲಿ ಮುಗಿಯಿತು. ಇದು 5 ಪಂದ್ಯಗಳಲ್ಲಿ ಕರ್ನಾಟಕ ಮೊಳಗಿಸಿದ 3ನೇ ಜಯಭೇರಿ. ಉಳಿದೆರಡು ಪಂದ್ಯ ಡ್ರಾಗೊಂಡಿದೆ. ಅಂಕ 26ಕ್ಕೆ ಏರಿದೆ. ಕರ್ನಾಟಕಕ್ಕೆ ಶರಣಾದ ರಾಜಸ್ಥಾನ ಇಷ್ಟೇ ಪಂದ್ಯಗಳಿಂದ 14 ಅಂಕ ಹೊಂದಿದೆ. ಒಂದು ಜಯ, ಒಂದು ಸೋಲು ಹಾಗೂ 3 ಡ್ರಾ ರಾಜಸ್ಥಾನದ ಸಾಧನೆಯಾಗಿದೆ.

ರಾಜಸ್ಥಾನವನ್ನು 129ಕ್ಕೆ ತಡೆದು ನಿಲ್ಲಿಸಿದ ಕರ್ನಾಟಕ, ಇದಕ್ಕೆ ಜವಾಬಾಗಿ 445 ರನ್‌ ಪೇರಿಸಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಸುಧಾರಿತ ಬ್ಯಾಟಿಂಗ್‌ ಪ್ರದರ್ಶಿಸಿದರೂ ರಾಜಸ್ಥಾನದ ಮೊತ್ತ 330ರ ಗಡಿಯಲ್ಲಿ ನಿಂತಿತು. ಇನ್ನಿಂಗ್ಸ್‌ ಸೋಲಿನಿಂದ ಬಚಾವಾದುದೊಂದೇ ರಾಜಸ್ಥಾನದ ಸಾಧನೆ. ಮಾಯಾಂಕ್‌ ಅಗರ್ವಾಲ್‌ 10, ಆರ್‌. ಸಮರ್ಥ್ 5 ರನ್‌ ಮಾಡಿ ಅಜೇಯರಾಗಿ ಉಳಿದರು.

ರಾಜಸ್ಥಾನದ ದ್ವಿತೀಯ ಇನ್ನಿಂಗ್ಸ್‌ ನಲ್ಲಿ ಓಪನರ್‌ ಮಹಿಪಾಲ್‌ ಲೊನ್ರೋರ್‌ 99, ಆದಿತ್ಯ ಗರ್ವಾಲ್‌ 66, ಸಮರ್ಪಿತ್‌ ಜೋಶಿ 63 ರನ್‌ ಬಾರಿಸಿದರು. ಬೌಲಿಂಗ್‌ನಲ್ಲಿ ಮಿಂಚಿದವರೆಂದರೆ ವಿಜಯ್‌ಕುಮಾರ್‌ ವೈಶಾಖ್‌ (4 ವಿಕೆಟ್‌), ಕೆ. ಗೌತಮ್‌ (3 ವಿಕೆಟ್‌) ಮತ್ತು ವಾಸುಕಿ ಕೌಶಿಕ್‌ (2 ವಿಕೆಟ್‌).

ಮೊದಲ ಇನ್ನಿಂಗ್ಸ್‌ನಲ್ಲಿ 101 ರನ್‌ ಮಾಡಿದ ಮನೀಷ್‌ ಪಾಂಡೆ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು.ಕರ್ನಾಟಕದ ಮುಂದಿನ ಎದುರಾಳಿ ಕೇರಳ. ಈ ಪಂದ್ಯ ಜ. 17ರಂದು ತಿರುವನಂತಪುರದಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ-129 ಮತ್ತು 330 (ಮಹಿಪಾಲ್‌ ಲೊನ್ರೋರ್‌ 99, ಆದಿತ್ಯ ಗರ್ವಾಲ್‌ 66, ಸಮರ್ಪಿತ್‌ ಜೋಶಿ 63, ವಿ. ವೈಶಾಖ್‌ 73ಕ್ಕೆ 4, ಕೆ. ಗೌತಮ್‌ 72ಕ್ಕೆ 3, ವಿ. ಕೌಶಿಕ್‌ 66ಕ್ಕೆ 2). ಕರ್ನಾಟಕ-445 ಮತ್ತು ವಿಕೆಟ್‌ ನಷ್ಟವಿಲ್ಲದೆ 15.

ಇನ್ನಿಂಗ್ಸ್‌ ಗೆಲುವಿನತ್ತ ಮುಂಬಯಿ
ಗುವಾಹಟಿ: ಆತಿಥೇಯ ಅಸ್ಸಾಂಗೆ ಫಾಲೋಆನ್‌ ಹೇರಿದ ಮುಂಬಯಿ ಇನ್ನಿಂಗ್ಸ್‌ ಗೆಲುವಿತ್ತ ಮುನ್ನಡೆದಿದೆ. ಮುಂಬಯಿಯ 687 ರನ್‌ಗೆ (4 ವಿಕೆಟಿಗೆ ಡಿಕ್ಲೇರ್‌) ಜವಾಬು ನೀಡಿದ ಅಸ್ಸಾಂ 370ಕ್ಕೆ ಆಲೌಟ್‌ ಆಯಿತು. ಇದು ಪೃಥ್ವಿ ಶಾ ಅವರ ವೈಯಕ್ತಿಕ ಗಳಿಕೆಗಿಂತಲೂ (379) ಕಡಿಮೆ ಮೊತ್ತವಾಗಿತ್ತು.

317 ರನ್ನುಗಳ ಇನ್ನಿಂಗ್ಸ್‌ ಹಿನ್ನಡೆಗೆ ಸಿಲುಕಿರುವ ಅಸ್ಸಾಂ 3ನೇ ದಿನದಾಟದ ಅಂತ್ಯಕ್ಕೆ ಕೇವಲ 36 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿದೆ. ಅದಿನ್ನೂ 281 ರನ್‌ ಹಿಂದಿದೆ. ಶಾದೂìಲ್‌ ಠಾಕೂರ್‌ 3, ಮೋಹಿತ್‌ ಅವಸ್ತಿ 2 ವಿಕೆಟ್‌ ಕಿತ್ತು ಅಸ್ಸಾಂಗೆ ಬೆದರಿಕೆಯೊಡ್ಡಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.