ಹಂಪನಕಟ್ಟೆ:ಕುಂಟುತ್ತಿರುವ ಕಾರು ಪಾರ್ಕಿಂಗ್‌ ಕಾಮಗಾರಿ

ಸ್ಥಳೀಯ ವ್ಯಾಪಾರ ಹಾಗೂ ಪಾದಚಾರಿಗಳಿಗೂ ಸುಲಭವಾಗುತ್ತದೆ

Team Udayavani, Jan 13, 2023, 5:52 PM IST

ಹಂಪನಕಟ್ಟೆ:ಕುಂಟುತ್ತಿರುವ ಕಾರು ಪಾರ್ಕಿಂಗ್‌ ಕಾಮಗಾರಿ

ಹಂಪನಕಟ್ಟೆ: ಹಂಪನಕಟ್ಟೆ ಹಳೆ ಬಸ್‌ ನಿಲ್ದಾಣದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ “ಮಲ್ಟಿಲೆವೆಲ್‌ ಕಾರು ಪಾರ್ಕಿಂಗ್‌’ ಕಾಮಗಾರಿ ನಿಧಾನವಾಗಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಾಪಾರಕ್ಕೆ ಹೊಡೆತ ಬಿದ್ದಿದ್ದು, ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ!

10 ತಿಂಗಳ ಹಿಂದೆ ಕಾಮಗಾರಿ ಆರಂಭವಾಗಿದ್ದು ಆರಂಭಿಕ ತಯಾರಿ ಮಾತ್ರ ಇಲ್ಲಿಯವರೆಗೆ ಆಗಿದೆ. ಬೃಹತ್‌ ಹೊಂಡ ಮಾಡಿದ್ದು ಈ ಪ್ರದೇಶ ಅಪಾಯಕಾರಿಯಾಗಿಯೂ ಕಾಣುತ್ತಿದೆ. ಕಾಮಗಾರಿಯ ನೆಪದಿಂದ ಬಸ್‌ ನಿಲ್ದಾಣದ ನಾಲ್ಕೂ ಭಾಗದಲ್ಲಿ ಪೂರ್ಣ ತಗಡು ಶೀಟ್‌ ಅಳವಡಿಸಿ ನಿರ್ಬಂಧ ವಿಧಿಸಲಾಗಿದೆ. ಪಾದಚಾರಿಗಳು ಹಾಗೂ ಲಘುವಾಹನ ಸವಾರರಿಗೆ ಇಲ್ಲಿ ಬಹು ಸಮಸ್ಯೆ ಕಾಡುವಂತಾಗಿದೆ.

ಕಚೇರಿಗೆ ತೆರಳಲು ಹಾಗೂ ಹಿಂದಿರುಗುವ ಬೆಳಗ್ಗೆ, ಸಂಜೆ ವೇಳೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪಾದಚಾರಿಗಳು ಈ ರಸ್ತೆ ಬಳಸುವುದರಿಂದ ಅವರು ಸಂಕಷ್ಟ ಎದುರಿಸುವಂತಾಗಿದೆ. ಕಾಮಗಾರಿ ಕಾರಣದಿಂದ ಕಾರು, ಬೈಕ್‌ ನಿಲುಗಡೆಗೆ ಸೂಕ್ತ ಜಾಗವಿಲ್ಲದೆ ಗ್ರಾಹಕರು ಬರುತ್ತಿಲ್ಲ ಹಾಗೂ ಇರುವ ಕೊಂಚ ಜಾಗದಲ್ಲಿ ಅಡ್ಡಾದಿಡ್ಡಿ ಕೆಲವರು ವಾಹನವಿಟ್ಟು ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂಬುದು ಸ್ಥಳೀಯರ ಆಕ್ಷೇಪ.

“ಕಾಮಗಾರಿ ನಡೆಸುವ ಸಂದರ್ಭ ಸ್ಥಳೀಯರಿಗೆ ಸಮಸ್ಯೆ ಆಗುವುದು ಸಹಜ. ಆದರೆ ತಿಂಗಳುಗಟ್ಟಲೆ ಸಮಸ್ಯೆ ಯನ್ನೇ ಮಾಡುವ ಬದಲು ಸ್ಥಳೀಯರಿಗೆ ಪರ್ಯಾಯ ವ್ಯವಸ್ಥೆಗಳತ್ತ ಕೊಂಚ ಗಮನಹರಿಸಿದರೆ ಉತ್ತಮ. ಸ್ಥಳೀಯ ವ್ಯಾಪಾರ ಹಾಗೂ ಪಾದಚಾರಿಗಳಿಗೂ ಸುಲಭವಾಗುತ್ತದೆ’ ಎನ್ನುತ್ತಾರೆ ಸ್ಥಳೀಯ ವ್ಯಾಪಾರಿ.

ಪರಿಶೀಲಿಸಲಾಗುವುದು “ಸುದಿನ’ ಜತೆಗೆ ಪ್ರತಿಕ್ರಿಯಿಸಿದ ಸ್ಮಾರ್ಟ್‌ ಸಿಟಿ ಜನರಲ್‌ ಮ್ಯಾನೇಜರ್‌ ಅರುಣ್‌ ಪ್ರಭ ಅವರು, “ತಳಮಟ್ಟದ ಕಾಮಗಾರಿ ಸದ್ಯ ನಡೆಯುತ್ತಿದೆ. ಹಂತ ಹಂತವಾಗಿ ಇದು ನಡೆಯಬೇಕಿದೆ. ನಿಗದಿತ ಸಮಯದಲ್ಲಿಯೇ ಕಾಮಗಾರಿ ಮುಗಿಸಲು ಎಲ್ಲ ಪ್ರಯತ್ನ ಮಾಡಲಾಗುವುದು. ಸ್ಥಳೀಯರ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗುವುದು’ ಎಂದರು.

ಸರಿಯಾಗಬಹುದೆಂಬ ಆಸೆ-ನಿರಾಶೆ!
ಕಾಮಗಾರಿ ಮುಗಿದ ಮೇಲೆ ಎಲ್ಲವೂ ಸರಿಯಾಗಬಹುದು ಎಂದು ಸ್ಥಳೀಯರು ಅಂದುಕೊಂಡಿದ್ದರು. ಆದರೆ ಸುದೀರ್ಘ‌ ತಿಂಗಳಿನಿಂದ ಇಲ್ಲಿ ನಿರೀಕ್ಷಿತ ಕಾಮಗಾರಿಯೇ ಆರಂಭವಾಗದಿರುವ ಕಾರಣದಿಂದ ವ್ಯಾಪಾರಿಗಳು ಮಾತ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಪೂರ್ಣ ಕೆಲಸ ಪ್ರಾರಂಭಿಸದ ಕಾರಣದಿಂದ ಸದ್ಯ ಪಾರ್ಕಿಂಗ್‌ ವ್ಯವಸ್ಥೆಯೇ ಅಸ್ತವ್ಯಸ್ಥವಾಗಿದೆ. ಸ್ಥಳೀಯ ವ್ಯಾಪಾರಕ್ಕೆ ಪೆಟ್ಟು ಬಿದ್ದಿದೆ. ಇಲ್ಲಿರುವ ಹೊಟೇಲ್‌, ಲಾಡ್ಜ್, ಅಂಗಡಿ ಸಹಿತ ವಿವಿಧ ವ್ಯಾಪಾರಸ್ಥರಿಗೆ ಗ್ರಾಹಕರ ಕೊರತೆ ಎದುರಾಗಿದೆ. ಹೀಗಾಗಿ ಆಸೆ-ನಿರಾಶೆಯಾಗಿದೆ!

ಕಾಮಗಾರಿಗೆ ವೇಗ
ಹಂಪನಕಟ್ಟೆ ಹಳೆ ಬಸ್‌ ನಿಲ್ದಾಣದಲ್ಲಿ ಮಲ್ಟಿಲೆವೆಲ್‌ ಕಾರ್‌ ಪಾರ್ಕಿಂಗ್‌ ಕಾಮಗಾರಿ ಕೆಲವು ಕಾರಣದಿಂದ ಕೊಂಚ ಸಮಯ ನಿಧಾನ ಆಗಿತ್ತು. ಆದರೆ ಈಗ ಕಾಮಗಾರಿ ಭರದಿಂದ ನಡೆಯುತ್ತಿದೆ. ಸ್ಥಳೀಯರಿಗೆ ಎದುರಾಗಿರುವ ಸಮಸ್ಯೆಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು.
-ಅಕ್ಷಯ್‌ ಶ್ರೀಧರ್‌,
ಆಯುಕ್ತರು, ಮನಪಾ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.