ಡೆಮಾಲಿಷನ್‌ ಶುರು: ಜೋಶಿಮಠದಲ್ಲಿ ಕಾರ್ಯಾಚರಣೆ ; ಸೆಲಾಂಗ್‌ ಗ್ರಾಮಕ್ಕೆ ಅಪಾಯ


Team Udayavani, Jan 15, 2023, 7:50 AM IST

ಡೆಮಾಲಿಷನ್‌ ಶುರು: ಜೋಶಿಮಠದಲ್ಲಿ ಕಾರ್ಯಾಚರಣೆ ; ಸೆಲಾಂಗ್‌ ಗ್ರಾಮಕ್ಕೆ ಅಪಾಯ

ಜೋಶಿಮಠ: ಅಪಾಯದಲ್ಲಿ ಸಿಲುಕಿರುವ ಉತ್ತರಾಖಂಡದ ಜೋಶಿಮಠ ಪಟ್ಟಣದ ಎರಡು ಹೊಟೇಲ್‌ಗ‌ಳನ್ನು ಕೆಡವಿಹಾಕುವ ಕಾರ್ಯ ಶನಿವಾರದಿಂದ ಶುರುವಾಗಿದೆ. ಹೊಟೇಲ್‌ ಕಟ್ಟಡದಿಂದಾಗಿ ಸುತ್ತಮುತ್ತಲಿನ ಮನೆಗಳಿಗೆ ಹಾನಿ ಹೆಚ್ಚಿದೆ. ಈ ಮನೆಗಳನ್ನು ಉಳಿಸಲು ಹೊಟೇಲ್‌ಗ‌ಳನ್ನು ನೆಲಸಮ ಮಾಡುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ.

ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ(ಎನ್‌ಡಿಆರ್‌ಎಫ್) ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ಹೊಟೇಲ್‌ ಮಲಾರಿ ಇನ್‌ ಮತ್ತು ಹೊಟೇಲ್‌ ಮೌಂಟ್‌ ವೀವ್‌ ಕಟ್ಟಡಗಳನ್ನು ಕೆಡವಿಹಾಕುವ ಕಾರ್ಯ ನಡೆದಿದೆ.

ಸೆಲಾಂಗ್‌ ಗ್ರಾಮಕ್ಕೆ ಅಪಾಯ: ಜೋಶಿ ಮಠದಲ್ಲಿ ಉದ್ಭವಿಸಿರುವ ಸಮಸ್ಯೆಯೇ ಸಮೀಪದ ಸೆಲಾಂಗ್‌ ಗ್ರಾಮದಲ್ಲಿ ಕಾಣಿಸಿಕೊಂಡಿದೆ. ಜೋಶಿಮಠದಿಂದ 5 ಕಿ.ಮೀ. ದೂರದ, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌-58) ಯಲ್ಲಿ ಇರುವ ಸೆಲಾಂಗ್‌ ಗ್ರಾಮದ ಅನೇಕ ಮನೆಗಳು ಮತ್ತು ಜಮೀನಿನಲ್ಲಿ ಕಳೆದ ಕೆಲವು ತಿಂಗಳಿನಿಂದ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅಲ್ಲದೇ ಎನ್‌ಟಿಪಿಸಿ ಕೈಗೊಂಡಿರುವ ತಪೋವನ್‌-ವಿಷ್ಟುಗಢ ಜಲವಿದ್ಯುತ್‌ ಯೋಜನೆ ಕಾಮಗಾರಿ ಯನ್ನು ಪ್ರತಿಭಟನೆ ಮೂಲಕ ಗ್ರಾಮಸ್ಥರು ಸ್ಥಗಿತಗೊಳಿಸಿದ್ದಾರೆ.

ಸಮಗ್ರ ಪರಿಹಾರ ಪ್ಯಾಕೇಜ್‌: “ಸಂತ್ರಸ್ತ ಕುಟುಂಬಗಳ ವಿವಿಧ ಬೇಡಿಕೆಗಳನ್ನು ಪರಿಗಣಿಸಿ, ಅವರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಗ್ರ ಪರಿಹಾರ ಪ್ಯಾಕೇಜ್‌ ವರದಿ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಕೆಲವರಿಗೆ ನಗದು ರೂಪದಲ್ಲಿ ಪರಿಹಾರ ಬೇಕಿದ್ದು, ಕೆಲವರಿಗೆ ಮನೆ ರೂಪದಲ್ಲಿ ಬೇಕಿದೆ,’ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಹಿಮಾಂಶು ಖುರಾನಾ ತಿಳಿಸಿದ್ದಾರೆ.

ಸೋರಿಕೆಯಿಂದ ಬಿರುಕು: ಪ್ರಾಥಮಿಕ ವರದಿ ಪ್ರಕಾರ ಉತ್ತರ ಪ್ರದೇಶದ ಬಾಗ³ತ್‌ ಪಟ್ಟಣದ ಹಲವು ಮನೆಗಳಲ್ಲಿ ಕಾಣಿಸಿ ಕೊಂಡ ಬಿರುಕಿಗೆ ನೀರಿನ ಪೈಪ್‌ಲೈನ್‌ನಲ್ಲಿ ಉಂಟಾದ ಸೋರಿಕೆಯೇ ಕಾರಣ ಎಂಬುದು ಖಚಿತವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸರ್ವಪಕ್ಷಗಳ ಸಭೆಗೆ ಆಗ್ರಹ: ಜೋಶಿಮಠ ಮತ್ತು ಕರ್ಣಪ್ರಯಾಗದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಹಾಗೂ ಅಲ್ಲಿನ ನಿವಾಸಿಗಳ ಪುನರ್ವಸತಿ ನಿಟ್ಟಿನಲ್ಲಿ ಸರ್ವ ಪಕ್ಷಗಳ ಸಭೆ ಆಯೋಜಿಸುವಂತೆ ಕೇಂದ್ರ ಸರಕಾರಕ್ಕೆ ಸಿಪಿಐ ಆಗ್ರಹಿಸಿದೆ.

ಹೇಳಿಕೆ ನೀಡದಿರಿ
ಜೋಶಿಮಠ ಪರಿಸ್ಥಿತಿ ಕುರಿತು ಹೇಳಿಕೆ ನೀಡದಂತೆ ಹಲವು ಸರಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಅದರ ತಜ್ಞರಿಗೆ ಉತ್ತರಾಖಂಡ ಸರಕಾರ ಸೂಚನೆ ನೀಡಿದೆ. ಇಸ್ರೋ ಬಿಡುಗಡೆಗೊಳಿಸುವ ಉಪಗ್ರಹ ಚಿತ್ರಗಳ ಕುರಿತು ತಜ್ಞರ ಮತ್ತು ಅಧಿಕಾರಿಗಳ ಭಿನ್ನ ಹೇಳಿಕೆಗಳು ಜೋಶಿಮಠದ ನಿವಾಸಿಗಳಲ್ಲಿ ಗೊಂದಲ ಉಂಟು ಮಾಡಿದೆ. ಅಲ್ಲದೇ ಸಮನ್ವಯ ಕೊರತೆಯಿಂದಾಗಿ ಅಧಿಕಾರಿಗಳ ಹೇಳಿಕೆಗಳು ಜನರಲ್ಲಿ ಆತಂಕ ಹೆಚ್ಚಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮಾಧ್ಯಮಗಳ ಮುಂದೆ ಅನಾವಶ್ಯಕವಾಗಿ ಹೇಳಿಕೆ ನೀಡದಂತೆ ಸರಕಾರ ಸೂಚಿಸಿದೆ.

 

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.