ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ: ಜೈಲಿನಲ್ಲಿದ್ದುಕೊಂಡೇ ಕೃತ್ಯವೆಸಗಿದ ಪುತ್ತೂರಿನ ಜಯೇಶ್
Team Udayavani, Jan 15, 2023, 10:48 AM IST
ಮುಂಬಯಿ/ ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ನಾಗ್ಪುರ ಪೊಲೀಸರು ತನಿಖೆ ಸಚಿವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ.
ಜೈಲಿನಲ್ಲಿ ಅಕ್ರಮವಾಗಿ ಫೋನ್ ಬಳಸಿ ಜಯೇಶ್ ಕುಮಾರ್ ಈ ಕೃತ್ಯವನ್ನು ಎಸಗಿದ್ದಾನೆ. ನಾಗ್ಪುರ ಪೊಲೀಸರು ತನಿಖೆಗಾಗಿ ಬೆಳಗಾವಿಗೆ ತೆರಳಿದ್ದಾರೆ. ಆರೋಪಿಯನ್ನು ಪ್ರೊಡಕ್ಷನ್ ರಿಮಾಂಡ್ ನೀಡಲು ಕೇಳಿಕೊಂಡಿದ್ದೇವೆ ಎಂದು ನಾಗ್ಪುರ ಪೊಲೀಸ್ ಆಯುಕ್ತರು ಅಮಿತೇಶ್ ಕುಮಾರ್ ಹೇಳಿದ್ದಾರೆ.
ಜಯೇಶ್ ಕುಮಾರ್ ಪುತ್ತೂರಿನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್ ಕುಮಾರ್ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿದ್ದ. ಆರೋಪಿಯ ಬಳಿ ಡೈರಿಯೊಂದು ಪತ್ತೆಯಾಗಿದ್ದು, ಈ ಡೈರಿಯಲ್ಲಿ ನಿನ್ನೆ ಸಚಿವರ ಕಚೇರಿಗೆ ಹೇಳಿದ್ದ ನಂಬರ್ ಸೇರಿದಂತೆ ಹಲವು ನಂಬರ್ ಗಳಿವೆ. ಸದ್ಯ ಡೈರಿ ವಶಕ್ಕೆ ಪಡೆದಿದ್ದು, ಮೊಬೈಲ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಜಯೇಶ್ ಸಚಿವರ ಕಚೇರಿಗೆ ಶನಿವಾರ ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಕರೆ ಮಾಡಿ ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯನೆಂದು 100 ಕೋಟಿ ರೂ.ಗೆ ಬೇಡಿಕೆಯಿಟ್ಟದ್ದ. ಇದಾದ ಬಳಿಕ ಸಚಿವರ ನಿವಾಸದ ಸುತ್ತ ಭದ್ರತೆ ಹೆಚ್ಚಿಸಲಾಗಿತ್ತು.
ಕೊಲ್ಲಾಪುರ ಟೆರರಿಸ್ಟ್ ವಿರೋಧಿ ದಳ ನಿನ್ನೆ ಜೈಲಿಗೆ ಭೇಟಿ ನೀಡಿತ್ತು. ನಾಗ್ಪುರ ಪೊಲೀಸರು ಬಂದು ತನಿಖೆ ನಡೆಸಿದ ಬಳಿಕವಷ್ಟೇ ಇನ್ನಷ್ಟು ಸತ್ಯಗಳು ಹೊರಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ
UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್ 18, 19ಕ್ಕೆ ಸಿಇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.