![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 15, 2023, 11:48 AM IST
ಕುಷ್ಟಗಿ: ತಾಲೂಕಿನ ಕನ್ನಾಳ ಗುಡ್ಡದಲ್ಲಿ ಶನಿವಾರ (ಜ.14) ರಾತ್ರಿ ನಾಲ್ಕು ವರ್ಷದ ಹೆಣ್ಣು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ.
ಕನ್ನಾಳ ಗುಡ್ಡದ ಪ್ರದೇಶದಲ್ಲಿ ಚಿರತೆಯ ಚಲನವಲನವನ್ನು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕೈದು ದಿನಗಳ ಹಿಂದೆಯೇ ಚಿರತೆಯ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದರು. ಇದರಿಂದ ಚಿರತೆಯನ್ನು ಬೋನಿಗೆ ಕೆಡವಲು ಸುಲಭವಾಯಿತು.
ಚಿರತೆ ಚಲನವಲನದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಬೋನಿನಲ್ಲಿ ಸೆರೆಯಾದ ಚಿರತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸುವ ಮಾಹಿತಿ ಇದೆ.
ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚೈತ್ರಾ ಮೆಣಸಿನಕಾಯಿ, ಉಪ ವಲಯ ಅರಣ್ಯಾಧಿಕಾರಿ ರಿಯಾಜ್ ಗಣಿ, ಹನುಮಂತಪ್ಪ, ಅರಣ್ಯ ಗಸ್ತು ಅಧಿಕಾರಿ ಮಹಾಂತೇಶ ರಡ್ಡೇರ್, ಸ್ಥಳೀಯ ಸಂತೋಷ ಸರನಾಡಗೌಡರು ಹಾಗೂ ಮತ್ತಿತರಿದ್ದರು.
ಈ ಕುರಿತು ಸ್ಥಳೀಯ ಸಂತೋಷ ಸರನಾಡಗೌಡ್ರು ಉದಯವಾಣಿಯೊಂದಿಗೆ ಪ್ರತಿಕ್ರಿಯಿಸಿ, ಕಳೆದ ನಾಲ್ಕು ದಿನಗಳ ಹಿಂದೆ ಕನ್ನಾಳ ಗುಡ್ಡದಲ್ಲಿ ಚಿರತೆ ಕಂಡು ಬಂದಿತ್ತು. ಆದರೆ ಗುಡ್ಡ ಬಿಟ್ಟು ಕೆಳಗೆ ಇಳಿದಿರಲಿಲ್ಲ. ಕಳೆದ ಶನಿವಾರ ಅಹಾರಕ್ಕಾಗಿ ಕೆಳಗೆ ಇಳಿದು ಬಂದಾಗ ಬೋನಿನಲ್ಲಿ ಸೆರೆಯಾಗಿದೆ ಎಂದು ತಿಳಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.