![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2023, 11:02 AM IST
ಪರಭಾಷೆಯಲ್ಲಿ ನಟಿಸಿ ಸೈ ಅನಿಸಿಕೊಂಡು ಬೇಡಿಕೆ ಗಿಟ್ಟಿಸಿಕೊಂಡ ಕನ್ನಡದ ಅನೇಕ ನಟ-ನಟಿಯರ ಸಾಲಿನಲ್ಲಿ ಈಗ ಮತ್ತೂಂದು ಹೆಸರು ಸೇರ್ಪಡೆಯಾಗಿದೆ. ಅದು ದುನಿಯಾ ವಿಜಯ್. ಸಂಕ್ರಾಂತಿಗೆ ತೆರಕಂಡ ಬಾಲಯ್ಯ ನಟನೆಯ “ವೀರಸಿಂಹ ರೆಡ್ಡಿ’ ಚಿತ್ರದಲ್ಲಿ ವಿಜಯ್ ಮುಖ್ಯ ವಿಲನ್ ಆಗಿ ನಟಿಸಿದ್ದಾರೆ.
ಈಗಾಗಲೇ ಸಿನಿಮಾ ಬಿಡುಗಡೆಯಾಗಿ ಹಿಟ್ಲಿಸ್ಟ್ ಸೇರಿದೆ. ಸಿನಿಮಾ ನೋಡಿದವರು ವಿಜಯ್ ವಿಲನ್ ಅಬ್ಬರಕ್ಕೆ ಫಿದಾ ಆಗಿದ್ದಾರೆ. ಖಡಕ್ ವಿಲನ್ ಆಗಿ ಬಾಲಯ್ಯ ಎದುರು ತೊಡೆ ತಟ್ಟಿದ ವಿಜಯ್ಗೆ ಈಗ ತೆಲುಗು ಚಿತ್ರರಂಗದಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೆಚ್ಚುಗೆ ಈಗ ಮತ್ತಷ್ಟು ಅವಕಾಶಗಳಿಗೆ ದಾರಿ ಮಾಡಿಕೊಡುತ್ತಿದೆ. ಈಗಾಗಲೇ ವಿಜಯ್ ಅವರಿಗೆ ತೆಲುಗು ಚಿತ್ರರಂಗದ ಅನೇಕರು ಕರೆಮಾಡಿ, ಮೆಚ್ಚುಗೆ ಸೂಚಿಸುವ ಜೊತೆಗೆ ಹೊಸ ಸಿನಿಮಾದ ಬಗ್ಗೆಯೂ ಮಾತುಗಳನ್ನಾಡುತ್ತಿದ್ದಾರೆ. ಈ ಮೂಲಕ ವಿಜಯ್ ಮುಂದಿನ ದಿನಗಳಲ್ಲಿ ಕನ್ನಡದ ಜೊತೆಗೆ ತೆಲುಗಿನಲ್ಲೂ ಬಿಝಿಯಾಗುವ ಲಕ್ಷಣ ಕಾಣುತ್ತಿದೆ.
ಬರ್ತ್ ಡೇಗೆ ಭೀಮ ಫಸ್ಟ್ಲುಕ್ ಟೀಸರ್: “ಸಲಗ’ ಚಿತ್ರದ ಯಶಸ್ಸಿನ ನಂತರ ವಿಜಯ್ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾ “ಭೀಮ’. ಈಗಾಗಲೇ ಭರ್ಜರಿ ನಿರೀಕ್ಷೆ ಹುಟ್ಟಿಸಿರುವ “ಭೀಮ’ ಸಿನಿಮಾದ ಫಸ್ಟ್ಲುಕ್ ಟೀಸರ್ ಜ.20ರಂದು ರಿಲೀಸ್ ಆಗುತ್ತಿದೆ. ಇದಕ್ಕೆ ಕಾರಣ ವಿಜಯ್ ಬರ್ತ್ಡೇ.
ಹೌದು, ಜನವರಿ 20 ದುನಿಯಾ ವಿಜಯ್ ಹುಟ್ಟಿದ ಹಬ್ಬ. ಈ ಕಾರಣದಿಂದ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡುತ್ತಿದೆ. ಅಂದಹಾಗೆ, “ಭೀಮ’ ಇದು ಕೂಡಾ ಒಂದು ಗಂಭೀರ ಹಾಗೂ ಪ್ರೇಕ್ಷಕರಿಗೆ ಇಷ್ಟವಾಗುವ ವಿಷಯವನ್ನಿಟ್ಟುಕೊಂಡು ಮಾಡುತ್ತಿದ್ದಾರೆ. ಈ ಕಥೆಗಾಗಿ ಸುಮಾರು ಎಂಟು ತಿಂಗಳಿಗೂ ಹೆಚ್ಚು ತಮ್ಮನ್ನು ವಿಜಯ್ ತೊಡಗಿಸಿಕೊಂಡು, ಎಲ್ಲವನ್ನು ಪಕ್ಕಾ ಮಾಡಿಕೊಂಡಿದ್ದಾರೆ. “ಸಲಗ’ದಲ್ಲಿ ಸಿಕ್ಕ ದೊಡ್ಡ ಯಶಸ್ಸು “ಭೀಮ’ನಲ್ಲಿ ಮುಂದುವರೆಯುವ ವಿಶ್ವಾಸ ವಿಜಯ್ ಅವರಿಗಿದೆ.
ಇನ್ನು, ಇತ್ತೀಚೆಗೆ ಬಿಡುಗಡೆಯಾಗಿರುವ “ಭೀಮ’ ಚಿತ್ರದ ಮೇಕಿಂಗ್ ವಿಡಿಯೋಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.