ಶ್ರೇಯಸ್ ಅಯ್ಯರ್ ಬೌಲಿಂಗ್ ಕಂಡು ಬೆರಗಾದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ
Team Udayavani, Jan 16, 2023, 1:25 PM IST
ತಿರುವನಂತಪುರಂ: ಶ್ರೀಲಂಕಾ ವಿರುದ್ದದ ಏಕದಿನ ಸರಣಿಯ ಅಂತಿಮ ಪಂದ್ಯವನ್ನು ದಾಖಲೆಯ ಅಂತರದಲ್ಲಿ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ದಸುನ ಶನಕಾ ಪಡೆಯ ಮೇಲೆ ಸಂಪೂರ್ಣ ಸವಾರಿ ಮಾಡಿದೆ.
ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಅವರ ಶತಕದ ನೆರವಿನಿಂದ ಭಾರತ ತಂಡವು ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿದರೆ, ಸಂಪೂರ್ಣ ಶರಣಾದ ಶ್ರೀಲಂಕಾ ಕೇವಲ 73 ರನ್ ಗೆ ಆಲೌಟಾಯಿತು. ರೋಹಿತ್ ಶರ್ಮಾ ಬಳಗವು ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ಅಂದರೆ 317 ರನ್ ಅಂತರದ ಗೆಲುವು ಸಾಧಿಸಿತು.
ಇದೇ ವೇಳೆ ಭಾರತ ತಂಡವು ತನ್ನ ಬೌಲಿಂಗ್ ಆಯ್ಕೆಗಳ ಕುರಿತಾಗಿ ಪ್ರಯೋಗ ನಡೆಸಿತು. ಶ್ರೇಯಸ್ ಅಯ್ಯರ್ ಅವರಿಗೆ ನಾಯಕ ರೋಹಿತ್ ಶರ್ಮಾ ಬೌಲಿಂಗ್ ನೀಡಿದರು.
ಇದನ್ನೂ ಓದಿ:ದೇಶಕ್ಕಾಗಿ ಪ್ರಾಣ ಕೊಡುವುದಕ್ಕಿಂತ ಕೆಲಸ ಮಾಡುವುದು ಮುಖ್ಯ: ಸಿಎಂ ಬೊಮ್ಮಾಯಿ
ಅಯ್ಯರ್ ಅವರ ಸ್ಪಿನ್ನಿಂಗ್ ಎಸೆತವು ವಿರಾಟ್ ಕೊಹ್ಲಿಯನ್ನು ಸಂಪೂರ್ಣವಾಗಿ ಬೆಚ್ಚಿ ಬೀಳಿಸಿತು. ಸ್ಲಿಪ್ ನಲ್ಲಿ ನಿಂತಿದ್ದ ವಿರಾಟ್ ಆಶ್ಚರ್ಯಕರ ಪ್ರತಿಕ್ರಿಯೆ ನೀಡಿದ ವಿಡಿಯೋ ವೈರಲ್ ಆಗಿದೆ.
ಅಯ್ಯರ್ ಅವರು ತಮ್ಮ ಓವರ್ ನಲ್ಲಿ ಕೇವಲ 2 ರನ್ಗಳನ್ನು ಬಿಟ್ಟುಕೊಟ್ಟು ಉತ್ತಮ ಆಯ್ಕೆಯಾಗಿ ಹೊರಹೊಮ್ಮಿದರು.
Shreyas Iyer bowling #shreyasiyer #ViratKohli𓃵 pic.twitter.com/MQAu7ZuyGz
— Sikandra Babu (@SikandraBabu) January 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್
Cricket: ಒಂದೇ ಫ್ರೇಮ್ನಲ್ಲಿ ಗಂಭೀರ್- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು
T20 world cup 2024; ವನಿತೆಯರ ವಿಶ್ವಕಪ್ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.