ಕಾಂಗ್ರೆಸ್ ಗೆಲ್ಲಲು ಸೂರ್ಯ ನಾರಾಯಣ ರೆಡ್ಡಿಗೆ ಉಸ್ತುವಾರಿ ನೀಡಲು ಹೈಕಮಾಂಡ್ ಚಿಂತನೆ.!

ಹಾಗಾದ್ರೆ ಶಿಷ್ಯ ಶಾಸಕ ಗಣೇಶ್ ಗೆ ಬೆಂಬಲ ಸಿಗುತ್ತಾ.?

Team Udayavani, Jan 16, 2023, 1:34 PM IST

8-kurugodu-election

ಕುರುಗೋಡು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಕಂಪ್ಲಿ-ಕುರುಗೋಡಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ರಂಗೇರಿದೆ.

ಹಾಲಿ ಶಾಸಕ ಗಣೇಶ್ ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಹಳ್ಳಿ ಹಳ್ಳಿಗಳಿಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಾ ಮತದಾರರನ್ನು ಭೇಟಿ ಮಾಡಲು ನಾನಾ ಕಸರತ್ತು ನಡೆಸುತ್ತಿದ್ದಾರೆ.

ಈಗಾಗಲೇ ಟಿಕೇಟ್ ಗಾಗಿ ಬಿಜೆಪಿಯಿಂದ ಕೇವಲ ಮಾಜಿ ಶಾಸಕ ಸುರೇಶ್ ಬಾಬು ಹೆಸರು ಕಂಡು ಬಂದರೆ ಕಾಂಗ್ರೆಸ್ ನಿಂದ ಹಾಲಿ ಶಾಸಕ ಗಣೇಶ್ ಮತ್ತು ನಾರಾಯಣಪ್ಪ, ರಾಜುನಾಯಕ್ ಹೆಸರುಗಳು ಕಂಡು ಬರುತ್ತಿವೆ.

ಇದಲ್ಲದೆ ಕುರುಗೋಡು ಮತ್ತು ಕಂಪ್ಲಿಯ ಕಾಂಗ್ರೆಸ್ ನ ಕೆಲ ಮುಖಂಡರು ಶಾಸಕರ ನಡುವೆ ಒಡನಾಟ ಕಡಿಮೆಯಾಗಿದ್ದು, ಇದರ ಪರಿಣಾಮ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಎದುರಾಗುವ ಸನ್ನಿವೇಶಗಳು ಕಂಡು ಬರುತ್ತಿವೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಶ್ರೀರಾಮುಲು ಅವರಿಗೆ ಟಾಂಗ್ ಕೊಟ್ಟು ಕಂಪ್ಲಿಯಿಂದ ಗಣೇಶ್ ಅವರನ್ನು ಗೆಲ್ಲಿಸಿಕೊಂಡು ಬಂದಿದ್ರು.

ಸದ್ಯ ಈಗ ಜನಾರ್ದನ ರೆಡ್ಡಿ ಕೂಡ ಹೊಸ ಪಕ್ಷ ಕಟ್ಟಿರುವುದರಿಂದ ಅದರಲ್ಲಿ ರೆಡ್ಡಿ ಹಣಬಲ ಹೊಂದಿರುವ ವ್ಯಕ್ತಿಯಾಗಿದ್ದು, ಈ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಕಂಪ್ಲಿ, ಸಿರುಗುಪ್ಪ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಲು ಸೂರ್ಯನಾರಾಯಣ ರೆಡ್ಡಿ ಅವರಿಗೆ ಉಸ್ತುವಾರಿ ನೀಡಲು ಈಗಾಗಲೇ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಈ ಕುರಿತು ಕೂಡ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಕಂಡು ಬರುತ್ತಿದೆ.

ಜನಾರ್ದನ ರೆಡ್ಡಿ ಹಣ ಬಲ ಯಾವ ರೀತಿ ಹೊಂದಿದ್ದರೋ ಅದರಂತೆ ಕಾಂಗ್ರೆಸ್ ನಲ್ಲಿ ಅದಕ್ಕೆ ತಕ್ಕ ಹಾಗೆ ಹಣಬಲ ಹೊಂದಿರುವ ನಾಯಕರಿಗೆ ಉಸ್ತುವಾರಿ ಕೊಟ್ಟು, ಬಿಜೆಪಿ, ಜೆಡಿಎಸ್, ಕೆ.ಆರ್.ಪಿ.ಪಿ. ಪಕ್ಷವನ್ನು ಕಟ್ಟಿ ಹಾಕಿ ಕಾಂಗ್ರೆಸ್ ನ್ನು ಗೆಲ್ಲಿಸಲು ನಾನಾ ರಣತಂತ್ರಗಳನ್ನು ಕಾಂಗ್ರೆಸ್ ರೂಪಿಸುತ್ತಿದೆ.

ಅದರಲ್ಲಿ ಸೂರ್ಯನಾರಾಯಣ ರೆಡ್ಡಿ ಸಿರುಗುಪ್ಪ, ಕಂಪ್ಲಿ, ಬಳ್ಳಾರಿ, ಸಂಡೂರು ಹೊಸಪೇಟೆ ಸೇರಿದಂತೆ ಇತರೆ ಭಾಗದಲ್ಲಿ ವರ್ಚಸ್ಸು ಚೆನ್ನಾಗಿ ಇರುವ ಕಾರಣ ಕಾಂಗ್ರೆಸ್ ಗೆಲ್ಲಿಸಲು ರೆಡ್ಡಿಯನ್ನು ಮಣಿ ಹಾಕುತ್ತಿದ್ದಾರೆ.

ಈಗಾಗಲೇ ಸೂರ್ಯನಾರಾಯಣ ರೆಡ್ಡಿಗೆ ಉಸ್ತುವಾರಿ ಕೊಡುವ ಸುದ್ದಿ ಕುರುಗೋಡು ಮತ್ತು ಕಂಪ್ಲಿ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದ್ದು, ಇದರಿಂದ ಕೆಲ ತಿಂಗಳಗಳಿಂದ ಸೂರ್ಯನಾರಾಯಣ ರೆಡ್ಡಿಗೆ ಮತ್ತು ಶಾಸಕ ಗಣೇಶ್ ಇಬ್ಬರ ನಡುವೆ ಅಸಮಾಧಾನ ವ್ಯಕ್ತವಾಗಿದ್ದು, ಮೊದಲಿನಂತೆ ಅವರ ನಡವಳಿಕೆಗಳು ಕಂಡು ಬರುತ್ತಿಲ್ಲ. ಆದ್ದರಿಂದ ರೆಡ್ಡಿಗೆ ಉಸ್ತುವಾರಿಯ ಜವಾಬ್ದಾರಿ ಸಿಕ್ಕಿದರೆ ಕಂಪ್ಲಿಯಲ್ಲಿ ಗಣೇಶ್ ಗೆಲ್ಲಲು ಕಂಟಕವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.