ಮಹಿಳಾ ಮತದಾರರ ಓಲೈಕೆಗೆ ಭಾರೀ ಪೈಪೋಟಿ


Team Udayavani, Jan 17, 2023, 6:50 AM IST

ಮಹಿಳಾ ಮತದಾರರ ಓಲೈಕೆಗೆ ಭಾರೀ ಪೈಪೋಟಿ

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜ್ಯದಲ್ಲಿನ ಮೂರೂ ರಾಜಕೀಯ ಪಕ್ಷಗಳು ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳಾ ಮತದಾರರ ಮನವೊಲಿಕೆಗೆ ಮುಂದಾಗಿವೆ. ಹೀಗಾಗಿ ರಾಜ್ಯದ ವಿಧಾನ ಕದನ ಭರ್ಜರಿ ರಂಗು ಪಡೆದುಕೊಂಡಿದೆ.

ಮಹಿಳಾ ಮತದಾರರ ಓಲೈಕೆಗೆ ಮೊದಲು ಮುಂದಾಗಿದ್ದು, ಜೆಡಿಎಸ್‌. ಪಂಚರತ್ನ ಯಾತ್ರೆ ನಡೆಸುತ್ತಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಜೆಡಿಎಸ್‌ ಅಧಿಕಾರಕ್ಕೆ ಬಂದರೆ, ಒಬ್ಬ ಮಹಿಳೆಯನ್ನು ಉಪಮುಖ್ಯಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅದಷ್ಟೇ ಅಲ್ಲ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಅವರು ಘೋಷಿಸಿದ್ದಾರೆ.  ಇನ್ನು ಬಿಜೆಪಿ ಕೂಡ ಸ್ತ್ರೀಶಕ್ತಿ ಯೋಜನೆ ಜಾರಿಗೆ ನಿರ್ಧರಿಸಿದೆ. ದುಡಿಯುವ ಮನೆಯೊಡತಿಗೆ ಆರ್ಥಿಕ ಶಕ್ತಿ ತುಂಬಲು ಈ ಯೋಜನೆ ಜಾರಿ ಮಾಡುವುದಾಗಿ ಹೇಳಿದೆ. ಇದರ ಬೆನ್ನಲ್ಲೇ ಕುಟುಂಬದ ಯಾಜಮಾನಿಗೆ 2 ಸಾವಿರ ರೂ. ನೀಡುವ “ಗೃಹ ಲಕ್ಷ್ಮೀ’ ಯೋಜನೆಯನ್ನು ಕಾಂಗ್ರೆಸ್‌ ಘೋಷಿಸಿದೆ. ಈ ಮೂಲಕ ಮೂರು ರಾಜಕೀಯ ಪಕ್ಷಗಳಿಗೆ ವಿಧಾನಸಭೆ ಚುನಾವಣೆಯು “ಮಹಿಳಾ ಕೇಂದ್ರಿತ’ ಆಗಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ.

ಮಹಿಳಾ ಮತದಾರರನ್ನು ಓಲೈಸುವ ತಂತ್ರಗಾರಿಕೆ, ಘೋಷಣೆಗಳು ರಾಜಕೀಯ ಪಕ್ಷಗಳ ಪಾಲಿಗೆ ಹೊಸದೇನಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಮಹಿಳಾ ಮತದಾರರ ಕೊಡುಗೆ ಹೆಚ್ಚಿದೆ ಎಂದು ಹೇಳಲಾಗಿದೆ. ಅದಾದ ಅನಂತರ ನಡೆದ ಬಹುತೇಕ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷಗಳ ಗೆಲುವು- ಸೋಲಿನಲ್ಲಿ ಮಹಿಳೆಯರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಕಳೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಯಲ್ಲಿ ಪ್ರಿಯಾಂಕಾ ಗಾಂಧಿ ಯವರು “ಮೈ ಲಡಿR ಹೂ ಲಡ್‌ ಸಕ್ತಿಹೂ’ ಘೋಷಣೆ ಕೊಟ್ಟು ಮಹಿಳೆಯರು ಅದರಲ್ಲೂ ಯುವತಿಯರನ್ನು ಸೆಳೆಯಲು ಮುಂದಾಗಿದ್ದರು. ಆದರೆ ಆ ತಂತ್ರ ಫ‌ಲ ಕೊಡಲಿಲ್ಲ. ಅದೇ ರೀತಿ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ “ಹಿಮಾಚಲ್‌ ಕಿ ಬೇಟಿ’ ಎಂಬ ಘೋಷಣೆಯೊಂದಿಗೆ ಚುನಾವಣ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದರು. ಅಲ್ಲಿ ಈ ತಂತ್ರಗಾರಿಕೆ ಕೈಹಿಡಿದಿತ್ತು. ರಾಜ್ಯದ ಚುನಾವಣ ವಿದ್ಯಮಾನಗಳು ಅದೇ ಹಾದಿಯಲ್ಲಿ ಸಾಗುತ್ತಿವೆ.

ಇದಕ್ಕೆ ಕಾರಣವೂ ಇದೆ. ಹೇಗೆಂದರೆ ಅರ್ಧ ರಾಜ್ಯದಲ್ಲಿ ಮಹಿಳೆಯರೇ ನಿರ್ಣಾಯಕರಾಗಿದ್ದಾರೆ. 2013ರ ಅಂತಿಮ ಮತದಾರರ ಪಟ್ಟಿ ಪ್ರಕಾರ ಒಟ್ಟು ಮತದಾರರ ಸಂಖ್ಯೆ 6 ಕೋಟಿ ಅಸುಪಾಸಿನಲ್ಲಿದ್ದು ಅದರಲ್ಲಿ 2.54 ಕೋಟಿ ಮಹಿಳೆಯ ರಿದ್ದಾರೆ. ಉಡುಪಿ ದಕ್ಷಿಣ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಬಳ್ಳಾರಿ, ಕೊಡಗು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ಬಾಗಲ ಕೋಟೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರರೇ ಹೆಚ್ಚಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ 2.49 ಕೋಟಿ ಪೈಕಿ 1.78 ಕೋಟಿ ಅಂದರೆ ಶೇ.71ರಷ್ಟು ಮಹಿಳೆಯರು ಮತ ಚಲಾಯಿಸಿದ್ದರು. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿ ಎಲ್ಲ ರಾಜಕೀಯ ಪಕ್ಷಗಳಿಂದ ಹಾಗೂ ಸ್ವತಂತ್ರ ಅಭ್ಯರ್ಥಿಗಳಾಗಿ 220ಕ್ಕೂ ಹೆಚ್ಚು ಮಹಿಳೆಯರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಹೀಗಾಗಿಯೇ ಮಹಿಳಾ ಮತದಾರರನ್ನು ಓಲೈಸಿದರೆ ಅಧಿಕಾರಕ್ಕೇರುವುದು ಸುಲಭ ಎಂಬ ನಿಟ್ಟಿನಲ್ಲಿ ಈ ತಂತ್ರ ಗಾರಿಕೆಯ ಮೊರೆ ಹೋಗಿವೆ ಎಂದೇ ವಿಶ್ಲೇಷಿಸಲಾಗುತ್ತಿದೆ.

 

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.