ಪರಿಹಾರ ಸಿಗದಿದ್ದರೆ ದೇವರೇ ಗತಿ: ಕುಕ್ಕರ್‌ ಬಾಂಬ್‌ ಸ್ಫೋಟದ ಗಾಯಾಳುವಿನ ಅಳಲು


Team Udayavani, Jan 17, 2023, 7:15 AM IST

https://www.udayavani.com/wp-content/uploads/2023/01/auto-2.jpg

ಮಂಗಳೂರು: ಸರಕಾರ ಪರಿಹಾರ ನೀಡುವುದಾಗಿ ಹೇಳಿದೆ. ನಮ್ಮಲ್ಲಿ ಇದ್ದ ಹಣ ಖರ್ಚಾಯಿತು. ಪರಿಹಾರ ನೀಡದಿದ್ದರೆ ದೇವರೇ ಗತಿ.

– ಇದು ನ. 19ರಂದು ನಗರದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದು ಶನಿವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡಿರುವ ಆಟೋ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ನೋವಿನ ನುಡಿಗಳು.

ಪುರುಷೋತ್ತಮ ಅವರ ಮನೆ ದುರಸ್ತಿಯಾಗುತ್ತಿದ್ದು ಪ್ರಸ್ತುತ ಬಾಡಿಗೆ ಮನೆ ಯಲ್ಲಿದ್ದಾರೆ. ಸೋಮವಾರ ಬಾಡಿಗೆ ಮನೆಗೆ ಮಾಧ್ಯಮದವರು ತೆರಳಿ ಮಾತನಾಡಿಸಿದಾಗ ಅವರು ನೋವು ತೋಡಿಕೊಂಡರು.

ಅಂದು ನಾನು ರಿಕ್ಷಾ ಓಡಿಸುತ್ತಿರು ವಾಗ ಒಬ್ಬ ಕೈ ಅಡ್ಡ ಹಿಡಿದು ನಿಲ್ಲಿಸಿ ಪಂಪ್‌ವೆಲ್‌ಗೆ ಹೋಗಬೇಕು ಎಂದ. ಸ್ವಲ್ಪ ಹೊತ್ತಲ್ಲೇ ಭಾರೀ ಶಬ್ದವಾಯಿತು. ದಟ್ಟ ಹೊಗೆ ಆವರಿಸಿ ಏನೂ ಕಾಣಿಸ ಲಿಲ್ಲ. ನಾನು ಹೇಗೋ ರಿಕ್ಷಾ ಪಕ್ಕಕ್ಕೆ ನಿಲ್ಲಿಸಿದೆ. ಪ್ರಯಾಣಿಕನಿಗೆ ಬೆಂಕಿ ತಗಲಿತ್ತು. ಅವನು ರಿಕ್ಷಾದಿಂದ ಹೊರಗೆ ಇಳಿದ. ನನ್ನ ಮುಖ ಮತ್ತು ಕೈಗೆ ಬೆಂಕಿಯಿಂದ ಗಾಯವಾಗಿತ್ತು. ಬಳಿಕ ನಮ್ಮನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬೇರೇನೂ ನನಗೆ ಗೊತ್ತಾಗಿಲ್ಲ ಎಂದರು ಪುರುಷೋತ್ತಮ.

ಇನ್ನೂ ಒಂದು ವರ್ಷ
ದುಡಿಮೆ ಅಸಾಧ್ಯ
ನಾನು ಇನ್ನೂ ಒಂದು ತಿಂಗಳು ಮನೆಯಿಂದ ಹೊರಗೆ ಹೋಗಬಾರದು ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ ಒಂದು ವರ್ಷ ನನಗೆ ದುಡಿಯಲು ಸಾಧ್ಯವಿಲ್ಲ. 10 ದಿನಕ್ಕೊಮ್ಮೆ ಚಿಕಿತ್ಸೆಗೆ ಬರುವಂತೆ ವೈದ್ಯರು ಹೇಳಿದ್ದಾರೆ. ಇಎಸ್‌ಐನಿಂದ ಇಷ್ಟರ ವರೆಗೆ ಚಿಕಿತ್ಸೆಯ ಖರ್ಚು ಆಯಿತು. ಓಡಾಟ ಮತ್ತಿತರ ಖರ್ಚಿಗೆ ನಮ್ಮಲ್ಲಿದ್ದ ಹಣ ಬಳಕೆ ಮಾಡಿದೆವು. ಸರಕಾರದವರು ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಹೊಸ ರಿಕ್ಷಾ ಕೂಡ ಕೊಡುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರು ಕೊಟ್ಟರೆ ಆಯಿತು. ಇಲ್ಲವಾದರೆ ದೇವರೇ ಗತಿ ಎಂದು ನೋವು ತೋಡಿಕೊಂಡರು.

ಮೇಯಲ್ಲಿ ಮಗಳ ಮದುವೆ
ಮುಂದಿನ ಮೇ ತಿಂಗಳಿಗೆ ಮಗಳ ಮದುವೆ ನಿಗದಿಯಾಗಿದೆ. ಅದಕ್ಕಾಗಿ ಮನೆ ದುರಸ್ತಿ ನಡೆಯುತ್ತಿದೆ. ಕೆಲವರು ಸಹಾಯ ಮಾಡುತ್ತಿದ್ದಾರೆ. ಬಾಡಿಗೆ ಮನೆ ನೀಡಿದವರು ನನ್ನ ಸ್ನೇಹಿತರು. ಎಷ್ಟು ಬಾಡಿಗೆ ಎಂದು ಹೇಳಿಲ್ಲ ಎಂದರು ಪುರುಷೋತ್ತಮ ಅವರು.

ಆಸ್ಪತ್ರೆಗೆ ಸಂಸದ ನಳಿನ್‌ ಕುಮಾರ್‌ ಕಟೀಲು, ಸಚಿವ ಸುನಿಲ್‌ ಕುಮಾರ್‌, ಶಾಸಕ ವೇದವ್ಯಾಸ ಕಾಮತ್‌, ಮಾಜಿ ಶಾಸಕರಾದ ಜೆ.ಆರ್‌. ಲೋಬೋ, ಐವನ್‌ ಡಿ’ಸೋಜಾ ಮೊದಲಾದವರು ಭೇಟಿ ನೀಡಿದ್ದಾರೆ. ಸರಕಾರ ಭರವಸೆ ಈಡೇರಿಸುವ ವಿಶ್ವಾಸವಿದೆ ಎಂದು ಪುರುಷೋತ್ತಮ ಅವರ ಮನೆಯವರು ತಿಳಿಸಿದರು.

ಬಲಗೊಳ್ಳದ ಕೈಗಳು
ಪುರುಷೋತ್ತಮ ಪೂಜಾರಿ ಅವರಿಗೆ 61 ವರ್ಷ ವಯಸ್ಸು. ಆಟೋರಿಕ್ಷಾದಲ್ಲಿಯೇ ಬದುಕು ಕಟ್ಟಿಕೊಂಡವರು. ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರೂ ಅವರ ಆರೋಗ್ಯ ಇನ್ನೂ ಪೂರ್ಣ ಚೇತರಿಕೆ ಕಂಡಿಲ್ಲ. ಅವರ ಕೈಗಳ ಗಾಯ ಇನ್ನೂ ಕೂಡ ಪೂರ್ಣ ಗುಣಮುಖವಾಗದೇ ಇರುವುದರಿಂದ ಅವರ ಮನೆಯವರು ಊಟ ಮಾಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.