ರೋಗಿ ಸಾವಿಗೆ ಕಾರಣರಾದ ವೈದ್ಯರಿಗೆ 8 ಲಕ್ಷ ದಂಡ


Team Udayavani, Jan 17, 2023, 1:22 PM IST

ರೋಗಿ ಸಾವಿಗೆ ಕಾರಣರಾದ ವೈದ್ಯರಿಗೆ 8 ಲಕ್ಷ ದಂಡ

ಮೈಸೂರು: ವೈದ್ಯಕೀಯ ನಿರ್ಲಕ್ಷ್ಯದೊಂದಿಗೆ ಸೇವಾ ನ್ಯೂನತೆ ಎಸಗಿ ರೋಗಿಯ ಸಾವಿಗೆ ಕಾರಣರಾದ ಇಬ್ಬರು ವೈದ್ಯರಿಗೆ ಮೈಸೂರು ಜಿಲ್ಲಾ ಗ್ರಾಹಕ ಆಯೋಗ 8 ಲಕ್ಷ ರೂ.ದಂಡ ವಿಧಿಸಿದೆ.

ಮೈಸೂರಿನ ವಿಕ್ರಮ್‌ ಜ್ಯೋತ್‌ ಆಸ್ಪತ್ರೆಯ ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ, ಡಾ.ಎನ್‌. ರಾಘವೇಂದ್ರ ದಂಡ ಪಾವತಿಸಬೇಕಾಗಿದೆ. ಇವರಿಬ್ಬರ ನಿರ್ಲಕ್ಷ್ಯದಿಂದ ಮೈಸೂರಿನ ಕುವೆಂಪು ನಗರದ ನಿವಾಸಿ ಕೆ.ಶಂಕರ ನಾರಾಯಣ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ದಾವೆ ಹೂಡಲಾಗಿತ್ತು.

ಮೈಸೂರಿನ ಕುವೆಂಪು ನಗರದ ನಿವಾಸಿ ಎಚ್‌.ಜೆ. ವನಜಾಕ್ಷಿಯವರ ಪತಿ ಕೆ.ಶಂಕರ ನಾರಾಯಣ ಅವರು 2015ರ ಸಮಯದಲ್ಲಿ ಅನಾರೋಗ್ಯದ ಕಾರಣ ಯಾದವಗಿರಿಯಲ್ಲಿರುವ ವಿಕ್ರಮ್‌ ಜ್ಯೋತ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಸಮಯದಲ್ಲಿ ಡಾ.ರಾಜ್‌ ಕುಮಾರ್‌ ವಾಧ್ವಾ ಅವರು ಶಂಕರ ನಾರಾಯಣ ಅವರಿಗೆ ಚಿಕಿತ್ಸೆ ನೀಡಿದ್ದಲ್ಲದೆ ಮಾತ್ರೆಯನ್ನು ಸೇವಿಸುವಂತೆ ಸಲಹೆ ನೀಡಿದ್ದರು. ಬಳಿಕ ಹೊಟ್ಟೆನೋವಿನ ಕಾರಣ ಶಂಕರ್‌ ನಾರಾಯಣ ಅವರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರು.

ಆಗ ಎಂಐಆರ್‌ ಸ್ಕ್ಯಾನ್‌ ಮಾಡಲಾಗಿ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ನಂತರ ಶಂಕರ್‌ ನಾರಾಯಣ ಅವರಿಗೆ ಚಿಕಿತ್ಸೆ ನೀಡುವಂತೆ ಡಾ.ಎನ್‌.ರಾಘವೇಂದ್ರರಿಗೆ ಸೂಚಿಸಲಾಯಿತು. ಅವರು ಶಂಕರ ನಾರಾಯಣ ಅವರು ಕ್ಯಾನ್ಸರ್‌, ಅಲ್ಸರ್‌ ಅಥವಾ ಟಿ ಬಿ ಕಾಯಿಲೆಯಿಂದ ಬಳಲುತ್ತಿರಬಹುದೆಂಬ ಶಂಕೆಯಿಂದ ಅವರ ಪತ್ನಿ ವನಜಾಕ್ಷಿಯವರ ಗಮನಕ್ಕೆ ತಾರದೇ ಶಂಕರ ನಾರಾಯಣ ಅವರಿಗೆ ಲೆಪರಾಸ್ಕೋಪಿಕ್‌ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆ ಸಮಯದಲ್ಲಿ ಸೂಕ್ತ ಎಚ್ಚರಿಕೆ ವಹಿಸದೇ ನಿರ್ಲಕ್ಷ್ಯ ತೋರಿದ್ದರಿಂದ ರೋಗಿಯು ಪ್ರಜ್ಞಾಹೀನ ಸ್ಥಿತಿಗೆ ಹೋಗುವಂತಾಯಿತು. ತದ ನಂತರ ಶಂಕರ ನಾರಾಯಣ್‌ ಅವರ ವಿವಿಧ ಅಂಗಗಳ ವೈಫ‌ಲ್ಯ ಉಂಟಾಗಿ ರೋಗಿಯ ಆರೋಗ್ಯ ತೀರಾ ಹದಗೆಟ್ಟಿತು. ತಾತ್ಕಾಲಿಕ ವೆಂಟಿಲೇಟರ್‌ ಅಳವಡಿಸಿ ತೀವ್ರನಿಗಾ ಘಟಕಕ್ಕೆ ರೋಗಿಯನ್ನು ದಾಖಲಿಸಲಾಯಿತು.

ನಂತರ ರೋಗಿಯು 14 ದಿನ ಪ್ರಜ್ಞಾಹೀನ ಸ್ಥಿತಿ ತಲುಪಲಾಗಿ ಮೂರು ತಿಂಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರುವಂತಾಯಿತು. ಆನಂತರ ಆಸ್ಪತ್ರೆಯವರಿಗೆ ಹೆಚ್ಚಿನ ಮೊತ್ತವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ವನಜಾಕ್ಷಿ ಅವರು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದಾಗ ಡಾ.ಎನ್‌.ರಾಘವೇಂದ್ರ ಅವರು ರೋಗಿಯನ್ನು ಕರೆದುಕೊಂಡು ಹೋಗಿ, ಇನ್ನು ಉಳಿಯುವುದು ಕಷ್ಟ ಎಂದು ಹೇಳಿ ಕೇಸ್‌ ಹಿಸ್ಟರಿಯನ್ನೂ ನೀಡದೇ ರೋಗಿಯನ್ನು 2015ರಲ್ಲಿ ಡಿಸ್ಚಾರ್ಜ್‌ ಮಾಡಿದ್ದರು. ಮತ್ತೆ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿ ಎರಡು ದಿನದ ಬಳಿಕ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟರು.

ಗ್ರಾಹಕರ ಆಯೋಗದ ಮೊರೆ: ಶಂಕರ್‌ ನಾರಾಯಣ್‌ ಅವರ ಸಾವಿಗೆ ವಿಕ್ರಮ್‌ ಜ್ಯೋತ್‌ ಆಸ್ಪತ್ರೆ ಹಾಗೂ ಅದರ ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ ಮತ್ತು ಡಾ.ಎನ್‌.ರಾಘವೇಂದ್ರ ಅವರ ವೈದ್ಯಕೀಯ ನಿರ್ಲಕ್ಷ್ಯ ಹಾಗೂ ಸೇವಾ ನ್ಯೂನತೆಯೇ ಕಾರಣ ಎಂದು ಆರೋಪಿ ವನಜಾಕ್ಷಿ ಮತ್ತು ಅವರ ಪುತ್ರಿ ಶಿವಾನಿ ಶಂಕರ್‌ ಪರಿಹಾರ ಕೋರಿ 2017 ರ ಡಿ.14 ರಂದು ಗ್ರಾಹಕರ ಆಯೋಗದ ಮೊರೆ ಹೋಗಿದ್ದರು. ಈ ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗ 2021ರಲ್ಲಿ ಶಂಕರ ನಾರಾಯಣ ಅವರ ಪತ್ನಿ ವನಜಾಕ್ಷಿಯವರೂ ಸಹ ಮೃತರಾದರು.

ವೈದ್ಯಕೀಯ ನಿರ್ಲಕ್ಷ್ಯತೆ ಸಾಬೀತು: ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಜಿಲ್ಲಾ ಗ್ರಾಹಕರ ಆಯೋಗವು, ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ ಮತ್ತು ಡಾ.ಎನ್‌ ರಾಘವೇಂದ್ರ ಅವರ ವೈದ್ಯಕೀಯ ನಿರ್ಲಕ್ಷ್ಯತೆ ಹಾಗೂ ಸೇವಾ ನ್ಯೂನತೆ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಯೋಗವು, ಇಬ್ಬರು ವೈದ್ಯರಿಗೆ 8 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಮಾಡಿದೆ. ಜತೆಗೆ ಪ್ರಕರಣದ ವೆಚ್ಚ 5 ಸಾವಿರ ರೂ. ಪಾವತಿಸುವಂತೆ ಸೂಚನೆ ನೀಡಲಾಗಿದೆ. ಮೃತ ಶಂಕರ ನಾರಾಯಣ್‌ ಅವರ ಪತ್ನಿ ಮತ್ತು ಪುತ್ರಿ ಪರವಾಗಿ ವಕೀಲ ಕೆ.ಈಶ್ವರ ಭಟ್‌ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.