ಮನೆಮದ್ದು: ಆರೋಗ್ಯದ ಹಲವು ಸಮಸ್ಯೆಗಳಿಗೆ ಔಷಧೀಯ ಗುಣದ “ದಾಸವಾಳ ಹೂ” ರಾಮಬಾಣ

ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

Team Udayavani, Jan 17, 2023, 5:40 PM IST

thumnail-web-kavya

ಸಾಮಾನ್ಯವಾಗಿ ಹೂವುಗಳನ್ನು ಪೂಜೆಗೆ ಮಾತ್ರ ಬಳಸಲಾಗುತ್ತದೆ. ಅದರಲ್ಲೂ ಎಲ್ಲೆಂದರಲ್ಲಿ ಬೆಳೆಸಲಾಗುವ ದಾಸವಾಳ ಹೂವು ದೇವರ ನಿತ್ಯ ಪೂಜೆಗೆ ಬಳಕೆಯಾಗುತ್ತದೆ. ಆದರೆ ಈ ಹೂವಿನಲ್ಲಿ ಔಷಧೀಯ ಗುಣಗಳಿವೆ ಎಂಬುದು ಹಲವರಿಗೆ ಗೊತ್ತಿರಲ್ಲಿಕ್ಕಿಲ್ಲ.

ಹೂವು ಅನೇಕ ಆರೊಗ್ಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ಕೂದಲು, ಹೊಟ್ಟೆ, ಕೊಲೆಸ್ಟ್ರಾಲ್, ಕ್ಯಾನ್ಸರ್, ಹೃದಯ, ರಕ್ತನಾಳದ ಕಾಯಿಲೆ ಸೇರಿದಂತೆ ಸ್ತ್ರೀಯರ ಅನೇಕ ಸಮಸ್ಯೆಗಳು ಹೂವಿನಿಂದ ಪರಿಹಾರವಾಗುತ್ತದೆ. ಇಂತಹ ಕೆಲವು ಸಮಸ್ಯೆ-ಪರಿಹಾರಗಳ ಬಗ್ಗೆ ತಿಳಿದುಕೊಳ್ಳೋಣ.

ಮಧುಮೇಹ ನಿವಾರಣೆಗೆ:

ಮಧುಮೇಹ ಸಮಸ್ಯೆ ಇರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡವನ್ನು ನಿವಾರಣೆ:

ರಕ್ತದೊತ್ತಡ ಸಾಮಾನ್ಯ ಕಾಯಿಲೆಯಾಗಿದ್ದರು ಕೂಡ ಇದು ಅಪಾಯಕಾರಿ.  ಈ ಹೂವಿನ ರಸದ ಕಷಾಯವನ್ನು ಕುಡಿದರೆ ದೇಹದಲ್ಲಿನ ಅತಿಯಾದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ. ದಾಸವಾಳದ ಹೂವಿನ ಟೀ ಮಾಡಿ ಕುಡಿದರೆ ಅಥವಾ ಅದರ ರಸವನ್ನು ಸೇವಿಸಿದರೆ, ಹೃದಯ ಸ್ತಂಭನಕ್ಕೆ ಕಾರಣವಾಗುವ, ರಕ್ತದಲ್ಲಿ ಸೇರಿಕೊಂಡ ಅನಗತ್ಯ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಈ ಮೂಲಕ ಹೃದಯ ಸ್ತಂಭನದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಕೆ:

ದೇಹದಲ್ಲಿರುವ ಅನಗತ್ಯ ಬೊಜ್ಜನ್ನು ಕರಗಿಸುವಲ್ಲಿ ದಾಸವಾಳ ಹೆಚ್ಚು ಪ್ರಯೋಜನ. ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ದಾಸವಾಳದಲ್ಲಿನ ಸಾರಗಳು ಕೊಬ್ಬಿನ ಕೋಶಗಳನ್ನು ಸಂಗ್ರಹಿಸುವುದನ್ನು ತಡೆಯಲು ಸಹಾಯ ಮಾಡುತ್ತದೆ. ದಾಸವಾಳ ಆ್ಯಂಟಿಆಕ್ಸಿಡೆಂಟ್ ಅಂಶವಿದ್ದು, ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಕ್ಯಾನ್ಸರ್‌:

ದಾಸವಾಳ ಹೂವಿನಲ್ಲಿರುವ ಗುಣ ಕ್ಯಾನ್ಸರ್ ಕಣಗಳ ವಿರುದ್ಧ ಹೋರಾಡುತ್ತದೆ. ದಾಸವಾಳ ಹೂವಿನ ಟೀ ಮಾಡಿ ಕುಡಿಯುವುದು ತುಂಬಾ ಒಳ್ಳೆಯದು. ಬಿಳಿ ದಾಸವಾಳ ಎಲ್ಲಕ್ಕಿಂತ ಹೆಚ್ಚು ಔಷಧೀಯ ಗುಣಗಳನ್ನು ಹೊಂದಿದೆ. ಹೂವುಗಳನ್ನು ಬೇವಿನ ಮರದ ಅಡಿ (ನೆರಳಿನಲ್ಲಿ) ಒಣಗಿಸುವುದು ಉತ್ತಮ. ನಂತರ ಇದನ್ನು ಪುಡಿ ಮಾಡಿ ಸೇವಿಸಿದರೆ ಎಲ್ಲ ಬಗೆಯ ಕ್ಯಾನ್ಸರ್‌ಗಳಿಗೆ ಉಪಶಮನಕಾರಿ.

ತಲೆ ಕೂದಲಿನ ಸಮಸ್ಯೆ:

ಈ ಹೂವಿನ ದಳಗಳನ್ನು ಅರೆದು ಅದರಲ್ಲಿ ಸಂಗ್ರಹಿಸಲಾದ ಲೋಳೆಯನ್ನು ಕೂದಲ ಬುಡಕ್ಕೆ ಹಚ್ಚುವುದು ಕೂದಲ ಪೋಷಣೆಗೆ ಒಂದು ಉತ್ತಮ ವಿಧಾನ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಪ್ರತೀದಿನ ಕೂದಲಿಗೆ ಈ ಎಣ್ಣೆ ಹಚ್ಚಿದರೆ ಕೂದಲು ಕಪ್ಪು ಬಣ್ಣ ಪಡೆಯುತ್ತದೆ.

ಹಲವು ನೈಸರ್ಗಿಕ ಕೂದಲ ಉತ್ಪನ್ನಗಳಲ್ಲಿ ಇದನ್ನು ಬಳಸಲಾಗುತ್ತದೆ. ಇದರ ಗಿಡದ ಚೆಕ್ಕೆ ಪುಡಿಯನ್ನು ಶಾಂಪೂ ಮೂಲಕ ಬಳಸುವುದು ತಲೆಯ ಚರ್ಮ ಒಣಗುವುದಕ್ಕೆ ಹಾಗೂ ತಲೆಯಲ್ಲಿ ಹೊಟ್ಟಾಗುವುದರಿಂದ ರಕ್ಷಿಸಬಹುದು.

ಚರ್ಮದ ಆರೈಕೆಗೆ:

ದಾಸವಾಳ ಹೂವಿನ ತೈಲದ ಬಳಕೆಯಿಂದ ಚರ್ಮಕ್ಕೆ ಹೊಳಪು ಬರುತ್ತದೆ. ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ. ಈ ಸಸ್ಯದ ಬೇರುಗಳನ್ನು ಎಣ್ಣೆಯಲ್ಲಿ ಹಾಕಿ, ಬೇರಿನಲ್ಲಿರುವ ನೀರಿನ ಅಂಶ ಆವಿಯಾಗುವವರೆಗೂ ಕುದಿಸಬೇಕು. ಗಾಯಗಳಿಗೆ ಈ ಎಣ್ಣೆ ಲೇಪಿಸಿದರೆ ಗುಣಮುಖವಾಗುವುದು.

ಕಾವ್ಯಶ್ರೀ

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.