ಅಚ್ಚರಿ ಮೂಡಿಸಿದ ಘಟನೆ; ಸಂಗಮ ಕ್ಷೇತ್ರ ಪಜಿರಡ್ಕಕ್ಕೆ ಬಂದ ಬಸವ

ಯಾರಿಗೂ ಯಾವುದೇ ತೊಂದರೆ ನೀಡಿಲ್ಲ ಮತ್ತು ಇದರ ವಾರಸುದಾರರು ಯಾರೆಂದು ತಿಳಿಯಲ್ಪಟ್ಟಿಲ್ಲ.

Team Udayavani, Jan 17, 2023, 3:08 PM IST

ಅಚ್ಚರಿ ಮೂಡಿಸಿದ ಘಟನೆ; ಸಂಗಮ ಕ್ಷೇತ್ರ ಪಜಿರಡ್ಕಕ್ಕೆ ಬಂದ ಬಸವ

ಬೆಳ್ತಂಗಡಿ: ಕಲ್ಮಂಜ ಗ್ರಾಮಕ್ಕೆ ಒಳಪಟ್ಟ ಇತಿಹಾಸ ಪ್ರಸಿದ್ಧ ಮಾಗಣೆ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ಬ್ರಹ್ಮಕಲಶೋತ್ಸವ ದಿನ ನಿಗದಿಯಾಗುತ್ತಿದ್ದಂತೆ ಕ್ಷೇತ್ರಕ್ಕೆ ಬಸವನ ಆಗಮನವಾಗಿರುವುದು ಅಚ್ಚರಿ ಮೂಡಿಸಿದೆ.

ಜ. 31ರಿಂದ ಫೆ. 6ರ ವರೆಗೆ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್‌ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ನಿಗದಿಯಾಗಿದೆ. ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಪಜಿರಡ್ಕ ದೇವಸ್ಥಾನಕ್ಕೆ ಹತ್ತಿರದ ಪ್ರದೇಶಗಳಲ್ಲಿ ಈವರೆಗೆ ಕಂಡಿರದ ವಾರಸುದಾರರಿಲ್ಲದ ಬಸವ ರಾತ್ರಿ ಹೊತ್ತು ಓಡಾಡುವುದು ಗೋಚರಿಸಿದೆ.

ಸುಮಾರು ಎರಡು-ಮೂರು ತಿಂಗಳಿನಿಂದ ಬಸವ ಊರಿನಲ್ಲಿ ಓಡಾಟ ನಡೆಸುತ್ತಿದ್ದರೂ, ಯಾರಿಗೂ ಈ ಬಗ್ಗೆ ಗೋಚರಕ್ಕೆ ಬಂದಿರಲಿಲ್ಲ. ಆದರೆ ಬ್ರಹ್ಮಕಲಶೋತ್ಸವ ಸಮೀಪಿಸುತ್ತಿರುವಂತೆ ದೇವಸ್ಥಾನದ ಸುತ್ತಮುತ್ತ ಮನೆಗಳಿಗೆ ಹೋಗಿ ಅಲ್ಲಿ ಹುಲ್ಲು ಆಹಾರ ಸೇವಿಸುತ್ತಾ ಸುತ್ತಾಡುತ್ತಿದೆ. ಆದರೆ ಈವರೆಗೆ ಇದು ಯಾರಿಗೂ ಯಾವುದೇ ತೊಂದರೆ ನೀಡಿಲ್ಲ ಮತ್ತು ಇದರ ವಾರಸುದಾರರು ಯಾರೆಂದು ತಿಳಿಯಲ್ಪಟ್ಟಿಲ್ಲ. ಇದೀಗ ಅದಕ್ಕೆ ನಂದಿ ಎಂದು ಭಕ್ತರು ಹೆಸರು ಇರಿಸಿದ್ದಾರೆ.

100 ವರ್ಷಗಳ ಹಿಂದೆ ಸಂಭವಿಸಿತ್ತು ಪ್ರವಾಹ
ಸಂಗಮ ಕ್ಷೇತ್ರ ಪಜಿರಡ್ಕಕ್ಕೆ 800 ವರ್ಷಗಳ ಇತಿಹಾಸವಿದೆ. ಇದು ನೇತ್ರಾವತಿ ಮತ್ತು ಮೃತ್ಯುಂಜಯ ನದಿ ಸಂಗಮ ಕ್ಷೇತ್ರವಾಗಿದೆ. ಹಿಂದೆ ಕ್ಷೇತ್ರದಲ್ಲಿ ಬಸವ ಉತ್ಸವ ರಥೋತ್ಸವಗಳು ನಡೆಯುತ್ತಿತ್ತಂತೆ. ಆದರೆ 1923ರಲ್ಲಿ ಪ್ರವಾಹ ಸಂಭವಿಸಿ ಕ್ಷೇತ್ರದ ರಥ ಸೇರಿದಂತೆ ಬಹುತೇಕ ಸೊತ್ತುಗಳು ನೀರಿನಲ್ಲಿ ಕೊಚ್ಚಿಹೋಗಿದ್ದವು ಎಂಬ ಉಲ್ಲೇಖವಿದೆ. ಬಳಿಕ ರಥೋತ್ಸವ ನಿಂತು ಹೋಗಿತ್ತಂತೆ. 2019ರಲ್ಲಿ ಮತ್ತೆ ದೇವಸ್ಥಾನ ಪ್ರವಾಹಕ್ಕೆ ತುತ್ತಾಗಿತ್ತು. ಮೊದಲನೆಯ ಪ್ರವಾಹ ಸಂಭವಿಸಿ ಪ್ರಸಕ್ತ 100 ವರ್ಷದ ಬಳಿಕ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿರುವ ಸಂದರ್ಭ ಬಸವ ಕಂಡುಬಂದಿರುವುದು ಕಾಕತಾಳೀಯ ಎಂಬಂತಾಗಿದೆ.

ಅಚ್ಚರಿ ಮೂಡಿಸಿದ ಘಟನೆ
ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಇಂತಹದ್ದೊಂದು ವಿಶೇಷ ನಡೆದಿದ್ದು ಕುತೂಹಲ ಮೂಡಿಸಿದೆ. ಈ ಬಸವ ಯಾರಿಗೂ ತೊಂದರೆ ಮಾಡುತ್ತಿಲ್ಲ. ಆದರೆ ಎಲ್ಲಿಂದ ಬಂದಿದೆ ಎಂಬುದು ತಿಳಿದಿಲ್ಲ. ಬ್ರಹ್ಮಕಲಶೋತ್ಸವ ಸಂದರ್ಭ ಈ ಘಟನೆ ಊರಿನ ಮಂದಿಗೆ ಅಚ್ಚರಿ ಮೂಡಿಸಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ತುಕರಾಮ್‌ ಸಾಲ್ಯಾನ್‌ ಉದಯವಾಣಿ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.