ಅಪಾಯಕಾರಿಯಾದ ಸ್ಟೇಟ್‌ಬ್ಯಾಂಕ್‌ “ಸಿಟಿ ಬಸ್‌ ನಿಲ್ದಾಣ’

ಸಿಟಿ ಬಸ್‌ ನಿಲ್ದಾಣ'ದಲ್ಲಿಯೇ ಸಿಟಿಬಸ್‌ ಗಳನ್ನು ನಿಲುಗಡೆ ಮಾಡಲಾಗುತ್ತಿದೆ.

Team Udayavani, Jan 17, 2023, 6:07 PM IST

ಅಪಾಯಕಾರಿಯಾದ ಸ್ಟೇಟ್‌ಬ್ಯಾಂಕ್‌ “ಸಿಟಿ ಬಸ್‌ ನಿಲ್ದಾಣ’

ಸ್ಟೇಟ್‌ಬ್ಯಾಂಕ್‌: ಸ್ಟೇಟ್‌ ಬ್ಯಾಂಕ್‌ನಲ್ಲಿರುವ “ಸಿಟಿ ಬಸ್‌ ನಿಲ್ದಾಣ’ ಅತ್ತ ಬಸ್‌ ನಿಲ್ದಾಣವೂ ಅಲ್ಲ, ಇತ್ತ ರಸ್ತೆಯೂ ಅಲ್ಲದ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿದೆ. “ಸಿಟಿ ಬಸ್‌ ನಿಲ್ದಾಣ’ವೆಂದು ಗುರು ತಿಸಲ್ಪಟ್ಟಿದ್ದರೂ ಇಲ್ಲಿ ಬಸ್‌ನಿಲ್ದಾಣಕ್ಕೆ ಬೇಕಾದ ಪ್ರಾಥಮಿಕ ಸೌಕರ್ಯಗಳಿಲ್ಲ. ಬಸ್‌ಗಳ ಯದ್ವಾತದ್ವಾ ನಿಲುಗಡೆ, ಇತರ ವಾಹನಗಳ ಓಡಾಟ, ರಸ್ತೆಯಲ್ಲಿಯೇ ವಾಹನಗಳ ಪಾರ್ಕಿಂಗ್‌ನಿಂದಾಗಿ ಪಾದಚಾರಿಗಳು ಮತ್ತು ವಾಹನಗಳ ಸುರಕ್ಷಿತ ಸಂಚಾರಕ್ಕೆ ತೊಡಕಾಗಿದೆ.

“ಸಿಟಿ ಬಸ್‌ ನಿಲ್ದಾಣ’ದ ಕಾಂಕ್ರೀಟ್‌ ಕಾಮಗಾರಿ ಒಂದು ವರ್ಷದ ಹಿಂದೆ ನಡೆದಿತ್ತು. ಆದರೆ ಅದನ್ನು ಬಸ್‌ ನಿಲ್ದಾಣವೆಂದು ಪರಿಗಣಿಸದೆ ರಸ್ತೆಯಂತೆಯೇ ಪರಿಗಣಿಸಿ ಕಾಮಗಾರಿ ನಡೆಸಲಾಗುತ್ತಿತ್ತು. ಫುಟ್‌ಪಾತ್‌ ನಿರ್ಮಾಣ ಕೂಡ ಆಗಿತ್ತು. ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಟಿ ಬಸ್‌ ಗಳನ್ನು ಸರ್ವೀಸ್‌ ಬಸ್‌ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗುತ್ತಿತ್ತು. ಅಲ್ಲದೆ ಶಾಶ್ವತವಾಗಿ ಸರ್ವೀಸ್‌ ಬಸ್‌ನಲ್ಲಿಯೇ ನಿಲುಗಡೆ ಮಾಡುವ ಬಗ್ಗೆಯೂ ನಿರ್ಧಾರವಾಗಿತ್ತು. ಕಳೆದ ಸುಮಾರು
6 ತಿಂಗಳುಗಳಿಂದ ಮತ್ತೆ “ಸಿಟಿ ಬಸ್‌ ನಿಲ್ದಾಣ’ದಲ್ಲಿಯೇ ಸಿಟಿಬಸ್‌ ಗಳನ್ನು ನಿಲುಗಡೆ ಮಾಡಲಾಗುತ್ತಿದೆ.

ಈ ಹಿಂದೆ ಬಸ್‌ ನಿಲುಗಡೆ ತಾಣ ಮತ್ತು ರಸ್ತೆಗಾಗಿ ನಿಗದಿ ಮಾಡಿದ ಸ್ಥಳದ ನಡುವೆ ಡಿವೈಡರ್‌, ತಡಬೇಲಿ ಇತ್ತು. ಕಾಮಗಾರಿ ವೇಳೆ ಅದನ್ನು ತೆಗೆದುಹಾಕಲಾಗಿತ್ತು. ಇದೀಗ ಅಲ್ಲಿ ಕೆಲವು ಬ್ಯಾರಿಕೇಡ್‌ಗಳನ್ನು ಇಟ್ಟು ಬಸ್‌ನಿಲ್ದಾಣ ಮತ್ತು ರಸ್ತೆಯನ್ನು ಪ್ರತ್ಯೇಕಿಸಲಾಗಿದೆಯಾದರೂ ಸಮಸ್ಯೆ ಹೆಚ್ಚಾಗಿದೆ.

ರಸ್ತೆಯಲ್ಲೇ ವಾಹನ ನಿಲುಗಡೆ
ಸ್ಟೇಟ್‌ಬ್ಯಾಂಕ್‌ನ ಮೀನು ಮಾರ್ಕೆಟ್‌, ಮಾರ್ಕೆಟ್‌ ಪಕ್ಕದ ಅಂಗಡಿಗಳಿಗೆ ಬರುವವರು ಸಿಟಿ ಬಸ್‌ ನಿಲ್ದಾಣದ ರಸ್ತೆ ಬದಿಯಲ್ಲೇ ವಾಹನ ನಿಲುಗಡೆ ಮಾಡುತ್ತಿದ್ದಾರೆ. ಹ್ಯಾಮಿಲ್ಟನ್‌ ಸರ್ಕಲ್‌ ಕಡೆಯಿಂದ ಬರುವ ವಾಹನಗಳು ಕೂಡ ಅಧಿಕ ಇವೆ. ಇತ್ತ ಸಿಟಿ ಬಸ್‌ಗಳು ಸಂಚರಿಸುತ್ತಿರುತ್ತವೆ. ಇದರಿಂದಾಗಿ ಪಾದಚಾರಿಗಳು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಜ.5ರಂದು ಇದೇ ಸ್ಥಳದಲ್ಲಿ ಬಸ್‌ ಢಿಕ್ಕಿಯಾಗಿ ಓರ್ವ ಪಾದಚಾರಿ ಮೃತಪಟ್ಟಿದ್ದರು. ಆಗಾಗ್ಗೆ ಇಲ್ಲಿ ವಾಹನಗಳ ಢಿಕ್ಕಿ, ಚಾಲಕರು, ಸವಾರರ ಮಾತಿನ ಚಕಮಕಿ, ಪೊಲೀಸರೊಂದಿಗೆ ವಾಗ್ವಾದ ನಡೆಯುತ್ತಲೇ ಇರುತ್ತದೆ.

250ಕೂ ಅಧಿಕ ಬಸ್‌ಗಳ ನಿಲುಗಡೆ
ಸ್ಟೇಟ್‌ಬ್ಯಾಂಕ್‌ನ “ಸಿಟಿ ಬಸ್‌ ನಿಲ್ದಾಣ’ವನ್ನು ಒಟ್ಟುಸುಮಾರು 250ಕ್ಕೂ ಅಧಿಕ ಬಸ್‌ಗಳು ಬಳಕೆ ಮಾಡುತ್ತಿವೆ. ಏಕಕಾಲದಲ್ಲಿ 25ಕ್ಕೂ ಅಧಿಕ ಬಸ್‌ ಗಳು ನಿಲುಗಡೆಯಾಗುತ್ತವೆ. ಒಂದೊಂದು ಬಸ್‌ ದಿನಕ್ಕೆ ಸುಮಾರು 3-4 ಟ್ರಿಪ್‌ ಮಾಡುತ್ತದೆ. ಸೀಮಿತ ಸ್ಥಳಾವಕಾಶ ಇರುವುದರಿಂದ ಮತ್ತು ಬಸ್‌ ನಿಲುಗಡೆಗೆ ಬಸ್‌ ಬೇ ನಿರ್ಮಾಣವಾಗದೆ ಇರುವುದರಿಂದ ಬಸ್‌ ಚಾಲಕರಿಗೂ ಗೊಂದಲವುಂಟಾಗುತ್ತಿದೆ.

ಬಸ್‌ಬೇ ನಿರ್ಮಾಣಕ್ಕೆ ಸೂಚನೆ
ಸಿಟಿಬಸ್‌ ನಿಲ್ದಾಣದಲ್ಲಿ ಬಸ್‌ ಬೇ ನಿರ್ಮಾಣವಾಗದೆ ಇರುವುದರಿಂದಲೂ ಸಮಸ್ಯೆಯಾಗಿದೆ. ಹಾಗಾಗಿ ಬಸ್‌ಬೇ ನಿರ್ಮಿಸಲು ಸ್ಮಾರ್ಟ್‌ ಸಿಟಿಯವರಿಗೆ ಸೂಚನೆ ನೀಡಲಾಗಿದೆ. ಬಸ್‌ ನಿಲ್ದಾಣ ಮತ್ತು ರಸ್ತೆಯ ನಡುವೆ ಬ್ಯಾರಿಕೇಡ್‌ ಇಟ್ಟು ಸುಗಮ ಸಂಚಾರಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಸಂಚಾರಿ ಪೊಲೀಸರು ಕೂಡ ನಿಗಾ ವಹಿಸುತ್ತಿದ್ದಾರೆ. ಬಸ್‌ ಬೇ ನಿರ್ಮಾಣವಾದರೆ ಬಹುತೇಕ ಸಮಸ್ಯೆ ಪರಿಹಾರವಾಗಬಹುದು.
-ಗೀತಾ ಕುಲಕರ್ಣಿ, ಎಸಿಪಿ ಸಂಚಾರ ವಿಭಾಗ, ಮಂಗಳೂರು

ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.