ಎಂಎಸ್ಸಿ ಭೌತಶಾಸ್ತ್ರದ ಫಲಿತಾಂಶ ವಿಳಂಬ: ಪಿಎಚ್‌ಡಿ ಸಹಿತ ಉನ್ನತ ಶಿಕ್ಷಣಕ್ಕೆ ಅಡ್ಡಿ


Team Udayavani, Jan 18, 2023, 7:55 AM IST

mangalore-universityಎಂಎಸ್ಸಿ ಭೌತಶಾಸ್ತ್ರದ ಫಲಿತಾಂಶ ವಿಳಂಬ: ಪಿಎಚ್‌ಡಿ ಸಹಿತ ಉನ್ನತ ಶಿಕ್ಷಣಕ್ಕೆ ಅಡ್ಡಿ

ಪುತ್ತೂರು: ಪರೀಕ್ಷೆ ಬರೆದು ನಾಲ್ಕು ತಿಂಗಳು ಕಳೆದರೂ ಮಂಗಳೂರು ವಿಶ್ವವಿದ್ಯಾನಿಲಯದ ಎಂಎಸ್ಸಿ ಭೌತಶಾಸ್ತ್ರ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ಫಲಿತಾಂಶ ಮಾತ್ರ ಪ್ರಕಟವಾಗಿಲ್ಲ.

ಪದವಿ ವಿಭಾಗದಲ್ಲಿ ಪರೀಕ್ಷೆ ಆಗಿ ಹಲವು ತಿಂಗಳು ಕಳೆದರೂ ಫ‌ಲಿತಾಂಶ ವಿಳಂಬದಿಂದ ಸುದ್ದಿಯಲ್ಲಿರುವ ಮಂಗಳೂರು ವಿ.ವಿ.ಯು ಸ್ನಾತಕೋತ್ತರ ವಿಭಾಗದಲ್ಲಿಯೂ ಈ ಸಮಸ್ಯೆ ಯಿಂದ ಹೊರತಾಗಿಲ್ಲ. ಉಳಿದ ವಿಷಯಗಳ ಫ‌ಲಿತಾಂಶ ಪ್ರಕಟವಾಗಿದ್ದು, ಭೌತಶಾಸ್ತ್ರ ವಿದ್ಯಾರ್ಥಿಗಳು ಮಾತ್ರ ಸಮಸ್ಯೆಗೆ ಸಿಲುಕಿದ್ದಾರೆ.

ಅಂತಿಮ ಸೆಮಿಸ್ಟರ್‌
ಸ್ನಾತಕೋತ್ತರ ವಿಭಾಗವು 2 ವರ್ಷಗಳಲ್ಲಿ ತಲಾ 2ರಂತೆ ಒಟ್ಟು 4 ಸೆಮಿಸ್ಟರ್‌ಗಳನ್ನು ಒಳಗೊಂಡಿದೆ. ಎಂಎಂಸ್ಸಿ ಭೌತಶಾಸ್ತ್ರದ 4ನೇ ಸೆಮಿಸ್ಟರ್‌ ಪರೀಕ್ಷೆಯು 2022ರ ಸೆಪ್ಟಂಬರ್‌ನಲ್ಲಿ ನಡೆದಿತ್ತು. ಅಂತಿಮ ಹಂತದ ಪರೀಕ್ಷೆ ಇದಾಗಿದ್ದು, ಬಳಿಕ ಮುಂದಿನ ಶಿಕ್ಷಣ/ ಉದ್ಯೋಗದತ್ತ ತೆರಳಲು ಸಾಧ್ಯವಾಗುತ್ತದೆ. ಆದರೆ ಪರೀಕ್ಷೆ ಬರೆದು ನಾಲ್ಕು ತಿಂಗಳು ಕಳೆದರೂ ಫಲಿತಾಂಶ ಬಂದಿಲ್ಲ.

ಪಿಎಚ್‌ಡಿಗೆ ಸಮಸ್ಯೆ
ಫಲಿತಾಂಶ ಬಾರದೆ ಹೊರ ಜಿಲ್ಲೆ, ರಾಜ್ಯಗಳಲ್ಲಿನ ವಿ.ವಿ., ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌ಡಿ ಅಧ್ಯಯನಕ್ಕೆ ಸೇರ್ಪಡೆಗೊಳ್ಳಲು ಸಾಧ್ಯವಾಗುತ್ತಿಲ್ಲ. ಸೇರ್ಪಡೆಗೆ ಫಲಿತಾಂಶದ ಅಂಕಪಟ್ಟಿ ಸಿಗದಿದ್ದರೂ ಕನಿಷ್ಠ ಆನ್‌ಲೈನ್‌ ಪ್ರತಿಯನ್ನಾದರೂ ಲಗತ್ತಿಸಬೇಕಿದೆ. ರಾಜ್ಯ ಅಥವಾ ಹೊರ ರಾಜ್ಯದ ಬೇರೆ-ಬೇರೆ ವಿ.ವಿ.ಗಳಲ್ಲಿ ಈಗಾಗಲೇ ಫಲಿತಾಂಶ ಪ್ರಕಟವಾಗಿರುವುದರಿಂದ ಅಲ್ಲಿನ ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಂಬಂಧಿಸಿ ತಮ್ಮ ಇಚ್ಛಿತ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಮಂಗಳೂರು ವಿ.ವಿ. ವಿದ್ಯಾರ್ಥಿಗಳಿಗೆ ಈ ಅವಕಾಶ ಇಲ್ಲವಾಗಿದೆ. ಈಗಾಗಲೇ ನೆಟ್‌ ಎಕ್ಸಾಮ್‌ ಕ್ಲಿಯರ್‌ ಆದವರಿಗೂ ಕೂಡ ಸೆಮಿಸ್ಟರ್‌ನ ಅಂಕಪಟ್ಟಿ ಇಲ್ಲದ ಕಾರಣ ಸೇರ್ಪಡೆಗೆ ಅವಕಾಶ ಸಿಗುತಿಲ್ಲ. ಈ ತಿಂಗಳ ಒಳಗೆ ಫಲಿತಾಂಶ ಬಾರದಿದ್ದರೆ ಈ ವರ್ಷದ ಉತ್ತಮ ಅವಕಾಶಗಳು ಕೈ ತಪ್ಪಲಿದೆ ಅನ್ನುವುದು ವಿದ್ಯಾರ್ಥಿಗಳ ಅಳಲು. ಇದೇ ರೀತಿ ರಸಾಯನಶಾಸ್ತ್ರ ಮೊದಲ ಸೆಮಿಸ್ಟರ್‌ ಮತ್ತು ಭೌತಶಾಸ್ತ್ರ ಎರಡನೇ ಸೆಮಿಸ್ಟರ್‌ನ ಫ‌ಲಿತಾಂಶ ಕೂಡ ಬಂದಿಲ್ಲ.

ಸ್ಪಂದಿಸದ ಸಹಾಯವಾಣಿ
ಫಲಿತಾಂಶ ವಿಳಂಬದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ವಿ.ವಿ. ಸಹಾಯವಾಣಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ ಎನ್ನುವುದು ವಿದ್ಯಾರ್ಥಿಗಳ ಆರೋಪ. ಉನ್ನತ ಶಿಕ್ಷಣಕ್ಕಾಗಿ ಫಲಿತಾಂಶದ ಆವಶ್ಯಕತೆ ಇದ್ದರೂ ವಿ.ವಿ. ಮಾತ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಮೂರನೇ ವೌಲ್ಯಮಾಪನಕ್ಕೆ ಬಂದಿರುವ ಕಾರಣ ಅದನ್ನು ನಾವು ಬಾಹ್ಯ ಪರೀಕ್ಷಕರಿಂದ ಮಾಡಿಸಬೇಕು. ಆ ಕಾರಣಕ್ಕೆ ಫ‌ಲಿತಾಂಶ ವಿಳಂಬವಾಗಿದೆ. ಅದಾಗ್ಯೂ ಈಗಾಗಲೇ ಒಂದು ಡೆಡ್‌ಲೈನ್‌ ನೀಡಿದ್ದೇವೆ. 41ನೇ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಆಗುವ ಹಾಗೆ ಫಲಿತಾಂಶ ಘೋಷಣೆ ಮಾಡುತ್ತೇವೆ.
– ಪಿ.ಎಲ್‌. ಧರ್ಮ, ಪರೀಕ್ಷಾಂಗ ಕುಲಸಚಿವರು, ಮಂಗಳೂರು ವಿ.ವಿ.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.