ಪಾಲಿಕೆ ಚಿಂತನೆ; ತುಂಬೆ ಡ್ಯಾಂ ಕ್ಷೀಣಿಸುತ್ತಿರುವ ಒಳಹರಿವು

ಟ್ಯಾಂಕರ್‌ ಗಳ ಮೂಲಕವೂ ನೀರಿನ ಸರಬರಾಜು ಮಾಡಲಾಗಿತ್ತು

Team Udayavani, Jan 18, 2023, 6:29 PM IST

ಪಾಲಿಕೆ ಚಿಂತನೆ; ತುಂಬೆ ಡ್ಯಾಂ ಕ್ಷೀಣಿಸುತ್ತಿರುವ ಒಳಹರಿವು

ಮಹಾನಗರ:ತುಂಬೆ ಯಲ್ಲಿ ಈ ಬಾರಿ ಜನವರಿಯಲ್ಲೇ ಒಳ ಹರಿವು ಕ್ಷೀಣಿಸುತ್ತಿದ್ದು, ಮುಂದಿನ ಬೇಸಗೆಯಲ್ಲಿ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿ ಸಮಸ್ಯೆ ತಲೆದೋರುವ ಸಾಧ್ಯತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈಗಿಂದಲೇ ನಿಗಾವಹಿಸಲು ಪಾಲಿಕೆ ಚಿಂತನೆ ನಡೆಸಿದೆ.

ಹಿಂದಿನ ಎರಡು-ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಮಳೆಯೂ ಬೇಗ ನಿಂತಿದೆ. ಇದರಿಂದಾಗಿ ನದಿಯಲ್ಲಿ ನೀರು ಹಾಗೂ ತುಂಬೆ ಅಣೆಕಟ್ಟಿಗೆ ಬರುವ ಒಳ ಹರಿವಿನ ಪ್ರಮಾಣ ಕ್ಷೀಣಿಸುತ್ತಿದೆ. ಎಪ್ರಿಲ್‌ ಅಂತ್ಯ ಮೇ ತಿಂಗಳಲ್ಲಿ ಘಟ್ಟದ ತಪ್ಪಲಿನ ಭಾಗದಲ್ಲಿ ಒಂದಷ್ಟು ಉತ್ತಮ ಮಳೆಯಾಗದಿದ್ದರೆ ನೀರು ಪೂರೈಕೆಯಲ್ಲಿ ಮತ್ತೆ ರೇಷನಿಂಗ್‌ ವ್ಯವಸ್ಥೆ ಅಳವಡಿಸಬೇಕಾದ ಅನಿವಾರ್ಯ ಎದುರಾಗಬಹುದು ಎನ್ನುವ ಆತಂಕ ಉಂಟಾಗಿದೆ.

ಸದ್ಯ ತುಂಬೆ ಅಣೆಕಟ್ಟಿನ ಎಲ್ಲ ಗೇಟ್‌ ಗಳನ್ನು ಮುಚ್ಚಲಾಗಿದ್ದು, 6 ಅಡಿಗಳಷ್ಟು ನೀರು ಸಂಗ್ರಹವಿದೆ. ಸಣ್ಣ ಪ್ರಮಾಣದಲ್ಲಿ ಹೊರ ಹರಿವು ಇದೆ. ಬಿಸಿಲು ಹೆಚ್ಚಾಗಿ
ರುವುದರಿಂದ ಸ್ವಲ್ಪ ಮಟ್ಟದಲ್ಲಿ ನೀರಿನ ಅವಿಯಾಗುವಿಕೆಯೂ ಕಂಡು ಬರುತ್ತಿದೆ. ಈ ಬಾರಿ ನೀರಿನ ಬಳಕೆಯೂ ಜನವರಿಯಿಂದಲೇ ಹೆಚ್ಚಾಗಿದೆ. ಆದ್ದರಿಂದ ಸಾರ್ವಜನಿಕರು ನೀರಿನ ಬಳಕೆ ಕುರಿತಂತೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು. ಇದೇ ವೇಳೆ ಎಎಂಆರ್‌ ಅಣೆಕಟ್ಟಿನಲ್ಲಿ 18.9 ಮೀ. (ಸಮುದ್ರ ಮಟ್ಟದಿಂದ) ನೀರಿನ ಸಂಗ್ರಹವಿದೆ.

ಕೈಗಾರಿಕೆಗಳಿಗೂ ನೀರು
ಮಂಗಳೂರು ನಗರಕ್ಕೆ ಪ್ರಸ್ತುತ ದಿನಕ್ಕೆ 160 ಎಂಎಲ್‌ಡಿ (ಮಿಲಿಯನ್‌ ಲೀಟರ್‌ ಪರ್‌ ಡೇ) ನೀರು ಪೂರೈಕೆಯಾಗುತ್ತಿದೆ. ಇದರಲ್ಲಿ ಸುಮಾರು 50 ಎಂಎಲ್‌ಡಿ
ನೀರು ಟ್ಯಾಪಿಂಗ್‌ ಮತ್ತು ಇತರ ಕಾರಣಗಳಿಗೆ ಲೀಕೇಜ್‌ ಆಗುತ್ತಿದೆ. ಉಳಿದಂತೆ ಎಂಸಿಎಫ್‌ಗೆ 2 ಎಂಜಿಡಿ (ಮಿಲಿಯನ್‌ ಗ್ಯಾಲನ್ಸ್‌), ಎನ್‌ ಎಂಪಿಟಿಗೆ 0.5 ಎಂಜಿಡಿ ಹಾಗೂ ಇತರ ಕೈಗಾರಿಕೆಗಳಿಗೆ 1 ಎಂಜಿಡಿ ನೀರು ಸರಬರಾಜಾಗುತ್ತದೆ. ಬಂಟ್ವಾಳದ ಬಳಿಯ ಎಎಂಆರ್‌ ಅಣೆಕಟ್ಟಿನಿಂದ ಎಂಆರ್‌ಪಿಎಲ್‌ ಮತ್ತು ವಿಶೇಷ ಆರ್ಥಿಕ ವಲಯಕ್ಕೆ 8 ಎಂಜಿಡಿ ನೀರು ಪೂರೈಕೆಯಾಗುತ್ತದೆ. ಮಂಗಳೂರು ನಗರಕ್ಕೆ ಹೊರತುಪಡಿಸಿದಂತೆ 18 ಎಂಜಿಡಿಯಷ್ಟು ಕೈಗಾರಿಕೆಗಳಿಗೆ
ಪೂರೈಕೆಯಾಗುತ್ತದೆ.

2016ರಲ್ಲಿ ಕಾಡಿತ್ತು ನೀರಿನ ಕೊರತೆ ನಗರದಲ್ಲಿ 2016ರಲ್ಲಿ ಭೀಕರ ನೀರಿನ ಕೊರತೆ ಕಾಡಿತ್ತು. ಇದರಿಂದ ನೀರಿನ ರೇಷನಿಂಗ್‌ ವ್ಯವಸ್ಥೆಯ ಮೊರೆ ಹೋಗಲಾಗಿತ್ತು. ಟ್ಯಾಂಕರ್‌ ಗಳ ಮೂಲಕವೂ ನೀರಿನ ಸರಬರಾಜು ಮಾಡಲಾಗಿತ್ತು. ಖಾಸಗಿ ಬಾವಿ, ಕುದುರೆಮುಖದ ಲಕ್ಯಾ ಡ್ಯಾಂ ಹೀಗೆ ವಿವಿಧೆಡೆಯಿಂದ ನೀರು ಪೂರೈಕೆಗೂ ಕ್ರಮ ಕೈಗೊಳ್ಳಲಾಗಿತ್ತು. 2017ರಲ್ಲೂ ರೇಷನಿಂಗ್‌ ವ್ಯವಸ್ಥೆಯ ಮೂಲಕವೇ ಬೇಸಗೆಯಲ್ಲಿ ನೀರು ಪೂರೈಕೆ ಮಾಡಲಾಗಿತ್ತು. ಕೈಗಾರಿಕೆ
ಗಳಿಗೆ ನೀರು ಪೂರೈಸುವುದನ್ನೂ ಕಡಿತಗೊಳಿಸಲಾಗಿತ್ತು. 2019ರಲ್ಲಿ ಕೈಗಾರಿಕೆಗಳಿಗೆ ನೀರು ಪೂರೈಕೆ ಮಾಡುವ ಪ್ರಮಾಣವನ್ನು ಅರ್ಧದಷ್ಟು ಕಡಿಮೆ ಮಾಡಲಾಗಿತ್ತು. ನಂತರದ ವರ್ಷಗಳಲ್ಲಿ ಬೇಸಿಗೆ ಮಳೆ ಉತ್ತಮವಾಗಿ ಸುರಿದು ನೀರಿನ ಕೊರತೆ ಉಂಟಾಗಿರಲಿಲ್ಲ.

ಮುಂದಿನ ವಾರ ತುಂಬೆಗೆ ಭೇಟಿ
ನೀರು ಬಳಕೆಗೆ ಸಂಬಂಧಿಸಿದಂತೆ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ವಾರ ತುಂಬೆಗೆ ಭೇಟಿ ನೀಡಿ ಗಂಗಾಪೂಜೆ ನಡೆಸಿ, ಪರಿಸ್ಥಿತಿ ಅವಲೋಕಿಸಲಾಗುವುದು. ಕಳೆದೆರಡು ವರ್ಷಗಳಿಂದ ಗೃಹಬಳಕೆ ಹೊರತು ಪಡಿಸಿ, ನೀರಿನ ಇತರ ಬಳಕೆ ಕಡಿಮೆ ಇತ್ತು. ಆದರೆ ಈ ಬಾರಿ ಕಟ್ಟಡ ನಿರ್ಮಾಣ, ವಿವಿಧ ಕಾಮಗಾರಿಗಳು, ಕಾರ್ಯಕ್ರಮಗಳು ಆಯೋಜನೆ ಮೊದಲಾದ ಕಾರಣಗಳಿಂದಾಗಿ ನೀರಿನ ಬೇಡಿಕೆ ಹೆಚ್ಚಾಗಿದೆ.
– ಜಯಾನಂದ ಅಂಚನ್‌, ಮೇಯರ್‌

ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.