ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ನಿಷ್ಪಕ್ಷ‌ ತನಿಖೆ ನಡೆಯಲಿ


Team Udayavani, Jan 20, 2023, 6:00 AM IST

tdy-35

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ದೇಶದ ಹೆಸರಾಂತ ಮಹಿಳಾ ಕುಸ್ತಿಪಟುಗಳು ಗಂಭೀರ ಆರೋಪ ಮಾಡಿ, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಕಳೆದೆರಡು ದಿನಗಳಿಂದ ನವ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರಕರಣ ದೇಶದ ಕ್ರೀಡಾರಂಗಕ್ಕೆ ಒಂದು ಕಳಂಕವಾಗಿ ಪರಿಣಮಿಸಿದ್ದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.

ಆರು ಬಾರಿ ಸಂಸದರಾಗಿರುವ ಬಿಜೆಪಿಯ ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರು ವುದಲ್ಲದೆ ಒಕ್ಕೂಟದಲ್ಲಿನ ಕೆಲವೊಂದು ಪುರುಷ ತರಬೇತುದಾರರಿಂದಲೂ ಮಹಿಳಾ ತರಬೇತುದಾರರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಸ್ವತಃ ಬೃಜ್‌ ಭೂಷಣ್‌ ಅವರೇ ಈ ಎಲ್ಲ ದುಷ್ಕೃತ್ಯಗಳಿಗೆ ನೇರ ಹೊಣೆ ಗಾರರಾಗಿದ್ದು ಮಹಿಳಾ ಕುಸ್ತಿ ಪಟುಗಳು ಇನ್ನಿಲ್ಲದ ಹಿಂಸೆ ಅನುಭವಿಸು ತ್ತಿದ್ದಾರೆ. ಈ ಹಿಂದೆ ಟೋಕಿಯೊ ಒಲಿಂಪಿಕ್ಸ್‌ನ ಬಳಿಕ ಕುಸ್ತಿ ಪಟುಗಳಿಗೆ ತೀವ್ರ ತೆರನಾದ ಮಾನಸಿಕ ಕಿರುಕುಳ ನೀಡಲಾಗಿತ್ತು ಎಂದೂ ಕುಸ್ತಿಪಟು ಗಳು ಆರೋಪಿಸಿದ್ದಾರೆ. ಮಹಿಳಾ ಕುಸ್ತಿಪಟುಗಳು ಇದೀಗ ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಬಹಿರಂಗವಾಗಿ ನಡೆಸುತ್ತಿರುವ ಪ್ರತಿ ಭಟನೆಗೆ ಖ್ಯಾತ ಕುಸ್ತಿಪಟುಗಳು ಬೆಂಬಲ ಘೋಷಿಸಿದ್ದು, ಹಲವರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶದ ಕುಸ್ತಿಪಟುಗಳು ನಿರೀಕ್ಷಿತ ಸಾಧನೆಗೈಯ್ಯುವಲ್ಲಿ ವಿಫ‌ಲರಾಗಿದ್ದರು. ಈ ಕೂಟದಲ್ಲಿ ಕುಸ್ತಿಯಲ್ಲಿ ಎರಡು ಪದಕಗಳಷ್ಟೇ ದೇಶಕ್ಕೆ ಲಭಿಸಿತ್ತು. ಇದು ಕುಸ್ತಿ ಒಕ್ಕೂಟದ ಕೆಂಗಣ್ಣಿಗೆ ಗುರಿಯಾಗಿತ್ತು. ಇದೇ ಸಂದರ್ಭದಲ್ಲಿ ವಿನೇಶ್‌ ಪೋಗಟ್‌ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು. ಆ ಬಳಿಕ ಭಾರತೀಯ ಕುಸ್ತಿ ಒಕ್ಕೂಟ ಮತ್ತು ಕುಸ್ತಿಪಟುಗಳ ನಡುವೆ ಒಂದಿಷ್ಟು ಅಸಮಾಧಾನ ಹೊಗೆಯಾಡುತ್ತಲೇ ಇತ್ತು. ಇದರ ಹೊರತಾಗಿಯೂ 2022ರಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 6 ಚಿನ್ನ ಸಹಿತ ಒಟ್ಟು 12 ಪದಕಗಳನ್ನು ಕುಸ್ತಿಪಟುಗಳು ಜಯಿಸಿದ್ದರು. ಕುಸ್ತಿಯಲ್ಲಿ ಭಾರತೀಯ ಕ್ರೀಡಾಳುಗಳು ಉಚ್ಛಾ†ಯ ಪ್ರದರ್ಶನ ನೀಡುತ್ತಿರುವಾಗಲೇ ಅವರಿಂದ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಕ್ರೀಡಾಭಿಮಾನಿಗಳಲ್ಲಿ ಆತಂಕ ಮೂಡಿಸಿ ದ್ದರೆ ಭಾರತೀಯ ಕ್ರೀಡಾರಂಗವನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.

ಬೃಜ್‌ ಭೂಷಣ್‌ ವಿರುದ್ಧ ಮಾಡಲಾಗಿರುವ ಆರೋಪ ರಾಜಕೀಯ ಪ್ರೇರಿತ ಎಂಬ ಮಾತುಗಳು ಕೇಳಿಬರುತ್ತಿವೆಯಾದರೂ ದೇಶದ ಬಹುತೇಕ ಖ್ಯಾತ ಕುಸ್ತಿಪಟುಗಳು ಮಹಿಳಾ ಕ್ರೀಡಾಳುಗಳ ಬೆಂಬಲಕ್ಕೆ ನಿಂತಿರುವುದು ಮತ್ತು ಪ್ರತಿಭಟನೆಗೆ ಸಾಥ್‌ ನೀಡಿರುವುದರಿಂದ ಮೇಲ್ನೋಟದಲ್ಲಿ ಆರೋ ಪದಲ್ಲಿ ಒಂದಿಷ್ಟು ಹುರುಳಿದ್ದಂತೆ ಕಂಡುಬರುತ್ತಿದೆ. ಸರಕಾರ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿ ಗೆಳೆಯಬೇಕಿದೆ. ಆರೋಪಕ್ಕೆ ಗುರಿಯಾಗಿರುವ ಬೃಜ್‌ ಭೂಷಣ್‌ ಅವರು ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಒಕ್ಕೂಟದ ಜವಾಬ್ದಾರಿಯಿಂದ ಹೊರಗುಳಿಯಲೇಬೇಕಿದೆ. ಅಧ್ಯಕ್ಷ ಹುದ್ದೆಗೆ ರಾಜೀನಾಮೆ, ಕಾಟಾಚಾರದ ತನಿಖೆಯ ಬದಲಾಗಿ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸುವ ಮೂಲಕ ಕ್ರೀಡಾಳುಗಳಲ್ಲಿ ನೈತಿಕ ಸ್ಥೈರ್ಯವನ್ನು ತುಂಬುವ ಕಾರ್ಯವನ್ನು ಸರಕಾರ ಮಾಡಬೇಕು. ಈ ನಿಟ್ಟಿನಲ್ಲಿ ಕ್ರೀಡಾಳುಗಳು ಕೂಡ ತನಿಖಾ ಸಂಸ್ಥೆಗಳಿಗೆ ಸಹಕಾರ ನೀಡಬೇಕು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.