ದಾವಣಗೆರೆ : ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Team Udayavani, Jan 20, 2023, 8:01 PM IST
ದಾವಣಗೆರೆ: ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ದಾವಣಗೆರೆ ವಲಯ ಕಚೇರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಶಿರಸ್ತೇದಾರ್ ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ವಿಶೇಷ ಭೂ ಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ಜಿ.ಡಿ. ಶೇಖರ್ ಮತ್ತು ಶಿರಸ್ತೇದಾರ್ ವಿ.ಎ. ಶ್ರೀನಿವಾಸ್ ಲೋಕಾಯುಕ್ತರ ಬಲೆಗೆ ಬಿದ್ದವರು.
ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲೇ ಹಾವೇರಿ ತಾಲೂಕಿನ ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಎಂಬುವರಿಂದ ೩೦ ಸಾವಿರ ರೂಪಾಯಿ ಲಂಚ ಪಡೆದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಸರ್ಕಾರದ ಯೋಜನೆಗೆಂದು ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಭೂಮಿ ಸ್ವಾಽನಪಡಿಸಿಕೊಳ್ಳ ಲಾಗಿದ್ದು ಪರಿಹಾರಕ್ಕೆ ಇಬ್ಬರು ೩೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಬಗ್ಗೆ ಸಂತೋಷ್ ಗುಡ್ಡಪ್ಪನವರ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ .ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ, ಇನ್ಸ್ಪೆಕ್ಟರ್ ಎಚ್.ಎಸ್. ರಾಷ್ಟ್ರಪತಿ, ಎನ್.ಎಚ್. ಆಂಜನೇಯ ಅವರನ್ನೊಳಗೊಂಡ ತಂಡ ದಾಳಿ ನಡೆಸಿ, ಇಬ್ಬರು ಅಧಿಕಾರಿ ಗಳನ್ನ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
MUST WATCH
ಹೊಸ ಸೇರ್ಪಡೆ
Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.