ಪಚ್ಚನಾಡಿ ಬಯೋ ಮೈನಿಂಗ್‌ ಪ್ರಕ್ರಿಯೆ; ಟೆಂಡರ್‌ ಅವಧಿ ಇಳಿಕೆ

ಬಯೋಮೈನಿಂಗ್‌ ಪ್ರಕ್ರಿಯೆಗೆ ದೊಡ್ಡ ಮಟ್ಟದ ಪರಿಣಾಮ ಬೀರದು

Team Udayavani, Jan 23, 2023, 6:16 PM IST

ಪಚ್ಚನಾಡಿ ಬಯೋ ಮೈನಿಂಗ್‌ ಪ್ರಕ್ರಿಯೆ; ಟೆಂಡರ್‌ ಅವಧಿ ಇಳಿಕೆ

ಮಹಾನಗರ: ಕೆಲವು ದಿನಗಳ ಹಿಂದೆ ಪಚ್ಚನಾಡಿ ತ್ಯಾಜ್ಯ ರಾಶಿಗೆ ಬೆಂಕಿ ಬಿದ್ದು ಆತಂಕಕ್ಕೆ ಕಾರಣವಾಗಿತ್ತು. ಅದೇ ತ್ಯಾಜ್ಯವನ್ನು ಸಂಸ್ಕರಿಸುವ ಬಯೋಮೈನಿಂಗ್‌ ಪ್ರಕ್ರಿಯೆಗೆ ಇದೀಗ ಮತ್ತಷ್ಟು ವೇಗ ನೀಡಲು ಪಾಲಿಕೆ ನಿರ್ಧರಿಸಿದೆ. ಗುತ್ತಿಗೆ ಅವಧಿಗೂ ಮುನ್ನ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಟೆಂಡರ್‌ ವಹಿಸಿರುವ ಸಂಸ್ಥೆಯ ಜತೆ ಪಾಲಿಕೆ ಮಾತುಕತೆ ನಡೆಸಲು ಮುಂದಾಗಿದೆ.

ಪಚ್ಚನಾಡಿಯಲ್ಲಿ ಬೆಂಕಿ ಶಮನಗೊಂಡಿ ದ್ದರೂ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ದಿನಗಳವರೆಗೆ ನಿಂತಿದ್ದ ಬಯೋಮೈನಿಂಗ್‌ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ. ಈಗಾಗಲೇ ಮೊದಲನೇ ಹಂತದಲ್ಲಿ ಬಯೋಮೈನಿಂಗ್‌ ಅನ್ನು ಒಂದು ಯುನಿಟ್‌ ಸ್ಥಾಪಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಈ ಕಸದಿಂದ ಜಲ್ಲಿ ಕಲ್ಲು, ಗೊಬ್ಬರ ಸಹಿತ ವಿವಿಧ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಲು ನಿರ್ಧರಿಸಲಾಗಿದೆ.

ಪಚ್ಚನಾಡಿಯಲ್ಲಿ ಕೆಲವು ದಿನಗಳ ಹಿಂದೆ ಬೆಂಕಿ ಬಿದ್ದ ಕಾರಣ ತ್ಯಾಜ್ಯ ಸಂಸ್ಕರಣೆಯ ಬಯೋಮೈನಿಂಗ್‌ ವ್ಯವಸ್ಥೆಗೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈಗಾಗಲೇ ಪ್ರಕ್ರಿಯೆ ಆರಂಭಿಸಿದ ಜಾಗದಲ್ಲಿ ಸದ್ಯ ಬೆಂಕಿ ತಗುಲಿಲ್ಲ. ಕೆಲವೊಂದು ವಸ್ತುಗಳನ್ನು ಬೆಂಕಿಗೆ ಆಹುತಿಯಾಗಿರಬಹುದು. ಅಲ್ಲದೆ ತ್ಯಾಜ್ಯದ ಮೇಲಿನ ಪದರಕ್ಕೆ ಬೆಂಕಿ ತಗುಲಿದೆ. ಇದರಿಂದ ಬಯೋಮೈನಿಂಗ್‌ ಪ್ರಕ್ರಿಯೆಗೆ ದೊಡ್ಡ ಮಟ್ಟದ ಪರಿಣಾಮ ಬೀರದು. ಇದರಿಂದ ಮತ್ತಷ್ಟು ವೇಗ ಸಿಗಬಹುದು ಎನ್ನುತ್ತಾರೆ ಅಧಿಕಾರಿಗಳು.

4 ವರ್ಷದಿಂದ 3 ವರ್ಷಕ್ಕೆ ಇಳಿಕೆ?
ಪಚ್ಚನಾಡಿಯ ಮಂದಾರ ಬಳಿ ರಾಶಿ ಬಿದ್ದ ತ್ಯಾಜ್ಯವನ್ನು ಬಯೋಮೈನಿಂಗ್‌ ವ್ಯವಸ್ಥೆಯ ಮೂಲಕ ತೆರವುಗೊಳಿಸಲಾಗುತ್ತಿದೆ. “ನ್ಯಾಕಾಫ್‌’ ಎಂಬ ಸಂಸ್ಥೆ ಗುತ್ತಿಗೆ ಪಡೆದುಕೊಂಡಿದ್ದು, ಅವರಿಗೆ 4 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಕೆಲಸ ಪೂರ್ಣಗೊಳಿಸುವ ಅವಧಿ ಎರಡು ವರ್ಷ ಇದ್ದರೂ ಮಳೆಗಾಲದಲ್ಲಿ ಈ ಪ್ರಕ್ರಿಯೆ ನಿರ್ವಹಿಸುವುದು ಕಷ್ಟ. ಈ ಹಿನ್ನೆಲೆಯಲ್ಲಿ 4 ವರ್ಷಗಳವರೆಗೆ ಅವಧಿ ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ಒಂದು ವರ್ಷಗಳ ಕಡಿತಕ್ಕೆ ಪಾಲಿಕೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಪಚ್ಚನಾಡಿಯಲ್ಲಿ ಆಗಿದ್ದಾಗ್ಗೆ ಆಗುವ ಅನಾಹುತ ತಪ್ಪಿಸಲು ಕ್ರಮ ವಹಿಸಲಾಗಿದೆ.

3 ವರ್ಷಗಳಲ್ಲಿ ಮುಗಿಸಲು ಕ್ರಮ
ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೆಲವು ದಿನಗಳ ಹಿಂದೆ ಬೆಂಕಿತಗುಲಿದ್ದು, ಸದ್ಯ ಶಮನಗೊಂಡಿದೆ. ಆದರೂ ಮುನ್ನೆಚ್ಚರಿಕೆ ವಹಿಸಿಕೊಳ್ಳಲಾಗುತ್ತಿದೆ. ಈಗಗಾಲೇ ಸುಮಾರು 9 ಲಕ್ಷ ಟನ್‌ ಕಸ ರಾಶಿ ಬಿದ್ದಿದ್ದು, ಸಂಸ್ಕರಣೆಗೆ ಬಯೋಮೈನಿಂಗ್‌ ವಿಧಾನ ಆರಂಭಗೊಂಡಿದೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು 4 ವರ್ಷ ಅಗತ್ಯವಿದೆ. ಆದರೆ ಈ ಕಾಮಗಾರಿಗೆ ವೇಗ ಒದಗಿಸಿ ಮೂರು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ಅಕ್ಷಯ್‌ ಶ್ರೀಧರ್‌, ಮನಪಾ ಆಯುಕ್ತರು

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.