ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ನ್ಯಾಕ್‌ ಮಾನ್ಯತೆಯತ್ತ

ದಕ್ಷಿಣ ಕನ್ನಡ, ಉಡುಪಿ, ಕೊಡಗಿನ 22 ಕಾಲೇಜುಗಳಿಗೆ ಮನ್ನಣೆ

Team Udayavani, Jan 24, 2023, 7:22 AM IST

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ನ್ಯಾಕ್‌ ಮಾನ್ಯತೆಯತ್ತ

ಮಂಗಳೂರು: ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಡ್ಡಾಯ ವಾಗಿ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್‌ (ನ್ಯಾಕ್‌) ಮಾನ್ಯತೆ ಪಡೆಯಬೇಕು ಎನ್ನುವ ಕಾಲೇಜು ಶಿಕ್ಷಣ ಇಲಾಖೆಯ ಸೂಚನೆಯಂತೆ ಮಂಗಳೂರು ಪ್ರಾದೇಶಿಕ ಕಚೇರಿಯ ವ್ಯಾಪ್ತಿಯ ಕಾಲೇಜುಗಳೂ ಮಾನ್ಯತೆ ಪಡೆಯುತ್ತಿವೆ. ಬಹುತೇಕ ಕಾಲೇಜು ಗಳು ಉತ್ತಮ ದರ್ಜೆಯನ್ನೇ ಪಡೆದಿವೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಟ್ಟು 37 ಸರಕಾರಿ ಪ್ರ. ದ. ಕಾಲೇಜು ಗಳಿದ್ದು, 22 ಕಾಲೇಜುಗಳು ಈಗಾಗಲೇ ಮಾನ್ಯತೆ ಪಡೆದಿವೆ. 3 ಕಾಲೇಜುಗಳಿಗೆ ನ್ಯಾಕ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಒಂದು ಕಾಲೇಜು ಫಲಿತಾಂಶ (ಗ್ರೇಡ್‌) ನಿರೀಕ್ಷೆಯಲ್ಲಿದೆ. 7 ಕಾಲೇಜುಗಳಿಗೆ ನ್ಯಾಕ್‌ ಪೀರ್‌ ತಂಡದ ಭೇಟಿಗೆ ದಿನಾಂಕ ನಿಗದಿಯಾಗಿದೆ.

ಯುಜಿಸಿ ಸೇರಿದಂತೆ ಸರಕಾರದ ವಿವಿಧ ಅನುದಾನಗಳು, ಸೌಲಭ್ಯಗಳು ದೊರೆಯಬೇಕಾದರೆ ನ್ಯಾಕ್‌ ಮಾನ್ಯತೆ ಕಡ್ಡಾಯ. ಈ ಮಾನ್ಯತೆ 5 ವರ್ಷಗಳ ಅವಧಿಯದ್ದಾಗಿದ್ದು, ಬಳಿಕ ಕಾಲೇಜುಗಳು ಮತ್ತೆ ಮೌಲ್ಯಮಾಪನಕ್ಕೆ ಒಳಗಾಗಬೇಕು. ಕಾಲೇಜುಗಳಿಗೆ ಒಂದು ಬಾರಿ ಮೌಲ್ಯಾಂಕನಕ್ಕೆ ಒಳಗಾಗಲು ಸುಮಾರು 5 ಲಕ್ಷ ರೂ. ವರೆಗೆ ಅಗತ್ಯವಿದ್ದು, ಸರಕಾರವೇ ಈ ಅನುದಾನ ಬಿಡುಗಡೆ ಮಾಡುತ್ತಿದೆ.

ನಾಲ್ಕು ಕಾಲೇಜುಗಳು ಬಾಕಿ
ನ್ಯಾಕ್‌ ಪರಿಶೀಲನೆಗೆ ಒಳಪಡಲು ಪ್ರಸ್ತುತ ನಾಲ್ಕು ಕಾಲೇಜುಗಳು ಮಾತ್ರ ಬಾಕಿ ಉಳಿದಿವೆ. ಮಡಿಕೇರಿ ಸ.ಪ್ರ. ದರ್ಜೆ ಕಾಲೇಜು, ಮಡಿಕೇರಿ ಸ.ಪ್ರ.ದ. ಮಹಿಳಾ ಕಾಲೇಜು, ಪುತ್ತೂರು ಸ.ಪ್ರ.ದ. ಮಹಿಳಾ ಕಾಲೇಜು ಮತ್ತು ಬಂಟ್ವಾಳ ಕನ್ಯಾನ ಸ.ಪ್ರ. ದರ್ಜೆ ಕಾಲೇಜುಗಳು ಇನ್ನಷ್ಟೇ ಮಾನ್ಯತೆ ಪಡೆಯಬೇಕಾಗಿದೆ. ಈ ಕಾಲೇಜುಗಳು ಮೂಲ ಸೌಕರ್ಯದಲ್ಲಿ ಹಿಂದೆ ಉಳಿದಿದ್ದು, ಇದರಿಂದಾಗಿ ನ್ಯಾಕ್‌ಗೆ ಹೋಗಲು ಹಿಂದೇಟು ಹಾಕಿವೆ.

ಬಲ್ಮಠ ಏಕೈಕ “ಎ’ ಗ್ರೇಡ್‌ ಕಾಲೇಜು
ಮಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ಬಲ್ಮಠ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಸ್ತುತ “ಎ’ ಗ್ರೇಡ್‌ ಪಡೆದಿರುವ ಏಕೈಕ ಕಾಲೇಜು. ಇತ್ತೀಚೆಗಷ್ಟೇ ಈ ಮಾನ್ಯತೆ ತನ್ನದಾಗಿಸಿಕೊಂಡಿದೆ. ಉಳಿದಂತೆ ಕುಂದಾಪುರದ ಶಂಕರನಾರಾಯಣ, ಬಾಕೂìರಿನ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಕಾಲೇಜು, ಹೆಬ್ರಿ ಸರಕಾರಿ ಕಾಲೇಜು ಮತ್ತು ಮಂಗಳೂರಿನ ಕಾವೂರು ಸರಕಾರಿ ಪ್ರ.ದ. ಕಾಲೇಜುಗಳು “ಬಿ++’ ಗ್ರೇಡ್‌ ಪಡೆದಿವೆ. ಪುತ್ತೂರು ಬೆಟ್ಟಂಪಾಡಿ, ಉಪ್ಪಿನಂಗಡಿ, ಸುಳ್ಯ, ತೆಂಕನಿಡಿಯೂರು, ಪುಂಜಾಲಕಟ್ಟೆ, ಕುಂದಾಪುರ, ಮುಡಿಪು, ಬೆಳ್ಳಾರೆ, ಮತ್ತು ಪುತ್ತೂರು ಸರಕಾರಿ ಪ್ರ.ದ.ಕಾಲೇಜುಗಳು “ಬಿ+’ ಗ್ರೇಡ್‌ ಪಡೆದಿವೆ. ವಾಮದಪದವು, ಬೈಂದೂರು, ಉಡುಪಿ ಅಜ್ಜರಕಾಡು, ಕುಶಾಲನಗರ, ವೀರಾಜಪೇಟೆ, ಬೆಳ್ತಂಗಡಿ, ಕಾಪು ಪ್ರಥಮ ದರ್ಜೆ ಕಾಲೇಜುಗಳು “ಬಿ’ ಗ್ರೇಡ್‌ ಪಡೆದಿವೆ.

ಮಂಗಳೂರು ಪ್ರಾದೇಶಿಕ
ಕಚೇರಿ ವ್ಯಾಪ್ತಿಯ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಈಗಾಗಲೇ 22 ಕಾಲೇಜುಗಳು ನ್ಯಾಕ್‌ ಮಾನ್ಯತೆ ಪಡೆದಿವೆ. 11 ಕಾಲೇಜುಗಳಿಗೆ ಶೀಘ್ರ ಮಾನ್ಯತೆ ಸಿಗಲಿದ್ದು, ಕೆಲವು ಮೊದಲ ಮೌಲ್ಯಾಂಕನದ ಮೊದಲ ಆವೃತ್ತಿ (ಫಸ್ಟ್‌ ಸೈಕಲ್‌) ಪೂರ್ಣ ಗೊಳಿಸಿ ಎರಡನೇ ಆವೃತ್ತಿಗೆ ಸಿದ್ಧವಾಗುತ್ತಿವೆ.
-ದೇವಿಪ್ರಸಾದ್‌, ನ್ಯಾಕ್‌ ವಿಶೇಷಾಧಿಕಾರಿ, ಮಂಗಳೂರು ಪ್ರಾದೇಶಿಕ ಕಚೇರಿ

-  ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.