ಗಣರಾಜ್ಯ ದಿನಕ್ಕೆ ತೆಲಂಗಾಣದಲ್ಲಿಎರಡು ಪ್ರತ್ಯೇಕ ಕಾರ್ಯಕ್ರಮ
ರಾಜ್ಯಪಾಲರು, ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಕಾರಣ
Team Udayavani, Jan 25, 2023, 7:30 AM IST
ಹೈದರಾಬಾದ್: ತೆಲಂಗಾಣ ರಾಜ್ಯ ಸರ್ಕಾರ ಜ.26ರ ಗಣರಾಜ್ಯ ದಿನವನ್ನು ಪ್ರತ್ಯೇಕವಾಗಿ ಆಚರಿಸಲು ನಿರ್ಧರಿಸಿದೆ. ರಾಜ್ಯಪಾಲೆ ಡಾ.ತಮಿಳ್ಸೈ ಸುಂದರರಾಜನ್ ಮತ್ತು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ನಡುವಿನ ಭಿನ್ನಾಭಿಪ್ರಾಯವೇ ಈ ಬೆಳವಣಿಗೆಗೆ ಕಾರಣ.
2022ರಲ್ಲಿಯೂ ರಾಜಭವನದಲ್ಲಿ ರಾಜ್ಯಪಾಲೆ ರಾಷ್ಟ್ರಧ್ವಜಾರೋಹಣ ನಡೆಸಿ, ಕಾರ್ಯಕ್ರಮ ಆಯೋಜಿಸಿದ್ದರು. ಪ್ರಸಕ್ತ ಸಾಲಿನಲ್ಲಿಯೂ ಕೂಡ ರಾಜಭವನ ಪ್ರತ್ಯೇಕ ಕಾರ್ಯಕ್ರಮ ನಡೆಸುವುದಿದ್ದರೆ ರಾಜ್ಯ ಸರ್ಕಾರದ ಅಭ್ಯಂತರ ಇಲ್ಲ ಎಂಬ ಸೂಚನೆಯನ್ನೂ ನೀಡಲಾಗಿದೆ.
ಶಿಷ್ಟಾಚಾರದ ಪ್ರಕಾರ, ಸದನ ಅನುಮೋದಿಸಿದ ಭಾಷಣದ ಪ್ರತಿಯನ್ನು ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸುತ್ತದೆ.
ಗಣರಾಜ್ಯೋತ್ಸವ ದಿನದಂದು ರಾಜ್ಯಪಾಲರು ಅದನ್ನು ಓದುತ್ತಾರೆ ಹಾಗೂ ಮುಖ್ಯಮಂತ್ರಿಗಳು ತ್ರಿವಣ ಧ್ವಜವನ್ನು ಹಾರಿಸುತ್ತಾರೆ.
ರಾಜ್ಯಪಾಲರು ಎಂಟು ವಿಧೇಯಕಗಳನ್ನು ಅನುಮೋದಿಸಬೇಕಾಗಿದೆ. ಈ ಅಂಶವೇ ಬಿಕ್ಕಟ್ಟಿಗೆ ಕಾರಣ. ಸಿಕಂದರಾಬಾದ್ನ ಪರೇಡ್ ಮೈದಾನದಲ್ಲಿ ಈ ಹಿಂದೆ ರಾಜಭವನ ಮತ್ತು ಸರ್ಕಾರದಿಂದ ಒಟ್ಟಾಗಿ ಗಣರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.