ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ


Team Udayavani, Jan 27, 2023, 2:15 PM IST

ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ

1999ರ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ ಮತ್ತು ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿ ಕೊಂಡಿದ್ದವು. ಸಂತೆಮರಹಳ್ಳಿ ಕ್ಷೇತ್ರಕ್ಕೆ ಸಂಯುಕ್ತ ದಳದಿಂದ ಎ.ಆರ್‌. ಕೃಷ್ಣ ಮೂರ್ತಿ ಅಭ್ಯರ್ಥಿಯಾಗಿದ್ದರು. ಸಂಯುಕ್ತ ದಳ, ಬಿಜೆಪಿ ಒಡಂಬಡಿಕೆ ಇತ್ತು. ಆದರೂ ಈ ಕೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾನು ಟಿಕೆಟ್‌ ಪಡೆದಿದ್ದೆ.

ತೀವ್ರ ಪೈಪೋಟಿಯಿದ್ದ ಆ ಚುನಾವಣೆಯಲ್ಲಿ ಎ.ಆರ್‌. ಕೃಷ್ಣಮೂರ್ತಿ 33,977 ಮತಗಳನ್ನು ಪಡೆದು ಜಯಶಾಲಿಯಾದರು. ನಾನು 28,071 ಮತಗಳನ್ನು ಪಡೆದಿದ್ದೆ. ಅದೊಂದು ಮರೆಯಲಾಗದ ಅನುಭವ. ಆಗ ಚುನಾವಣೆಗಳಲ್ಲಿ ಇಷ್ಟೊಂದು ವೆಚ್ಚ ಇರಲಿಲ್ಲ. ಬಹಳ ಕಡಿಮೆ ಹಣದಲ್ಲಿ ಚುನಾವಣೆ ಮುಗಿ ಯುತ್ತಿತ್ತು. ಪ್ರಚಾರದ ಭರಾಟೆ ಜೋರಾಗಿತ್ತು. ರಾತ್ರಿಯೆಲ್ಲ ಪ್ರಚಾರ ಮಾಡಬಹುದಿತ್ತು.

ಗ್ರಾಮಗಳಲ್ಲಿ, ಬಂಟಿಂಗ್ಸ್‌ ಬ್ಯಾನರ್‌ಗಳು, ಪಾಂಪ್ಲೆಟ್‌ಗಳು ರಾರಾಜಿಸುತ್ತಿದ್ದವು. ಕಾರುಗಳಲ್ಲಿ ಮೈಕ್‌ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದರು. ಚುನಾವಣೆ ಎಂದರೆ ಹಬ್ಬದ ವಾತಾವರಣ ಇರುತ್ತಿತ್ತು.ನಾವು ಸಮಯದ ಪರಿವೆ ಇಲ್ಲದೇ, ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸುತ್ತಿ ದ್ದೆವು. ಆಗ ಟಿವಿ ಚಾನೆಲ್‌ಗ‌ಳು ಹೆಚ್ಚು ಇರಲಿಲ್ಲ. ಅಭ್ಯರ್ಥಿಗಳನ್ನು ಜನರು ಹತ್ತಿರದಿಂದ ನೋಡಿ ರುತ್ತಿರಲಿಲ್ಲ. ಹಾಗಾಗಿ ಅಭ್ಯರ್ಥಿಗಳನ್ನು ನೋಡುವ ಸಲುವಾಗಿಯೇ ಕುತೂಹಲದಿಂದ ನೆರೆಯುತ್ತಿದ್ದರು. ಗ್ರಾಮಗಳಿಗೆ ಪ್ರಚಾರದ ಕಾರುಗಳು ಹೋದಾಗ ಬಾಲಕರು ಕರಪತ್ರಗಳನ್ನು ಪಡೆಯಲು ಕಾರಿನ ಹಿಂದೆ ಓಡಿಬರುತ್ತಿದ್ದರು.

ಆಗ ಜನಸಾಮಾನ್ಯರಿಗೆ ರಾಜಕೀಯವಾಗಿ ಹೆಚ್ಚು ತಿಳಿದಿರುತ್ತಿರಲಿಲ್ಲ. ಗ್ರಾಮದಲ್ಲಿ ರಾಜಕೀಯದ ಹಿನ್ನೆಲೆಯಿದ್ದ ಮುಖಂಡರಿಗೆ ಮಾತ್ರ ರಾಜಕೀಯ ಆಸಕ್ತಿ ಇತ್ತು. ಈಗ ಸುದ್ದಿ ಮಾಧ್ಯಮಗಳು, ಮೊಬೈಲ್‌ಗ‌ಳು ಸಾಮಾಜಿಕ ಜಾಲ ತಾಣಗಳಿಂದಾಗಿ ಸಾಮಾನ್ಯ ಜನರಲ್ಲೂ ರಾಜಕೀಯ ಆಸಕ್ತಿ ಹೆಚ್ಚಾಗಿದೆ. ಚುನಾಯಿತ ಪ್ರತಿನಿಧಿಗಳಿಂದ ಜನರು ಹೆಚ್ಚು ನಿರೀಕ್ಷೆ ಮಾಡುತ್ತಿರಲಿಲ್ಲ. ಈಗ ಜನರಿಗೆ ಬಹಳ ತಿಳಿವಳಿಕೆ ಬಂದಿದೆ. ಗ್ರಾಮಗಳಿಗೆ ಹೋದಾಗ ರಾಜಕಾರಣಿಗಳನ್ನು ಪ್ರಶ್ನೆ ಮಾಡುತ್ತಾರೆ. ಗ್ರಾಮಗಳಿಗೆ ಆಗಬೇಕಾದ ಕೆಲಸಗಳನ್ನು ಕೇಳುವಷ್ಟು ಪ್ರಬುದ್ಧರಾಗಿದ್ದಾರೆ. ಮತ ಕೇಳಲು ಊರುಗಳಿಗೆ ಹೋದಾಗ, ಕೆಲಸ ಮಾಡದಿದ್ದ ರಾಜಕಾರಣಿಗಳನ್ನು ಜನರು ಪ್ರಶ್ನೆ ಮಾಡಿ ಹಿಂದಕ್ಕೆ ಕಳುಹಿಸಿದ ನಿದರ್ಶನಗಳೂ ಇವೆ.

● ಆರ್‌. ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ

ಬನಶಂಕರ ಆರಾಧ್ಯ

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.