![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 31, 2023, 11:58 AM IST
ಕಾರ್ಕಳ: ಲಾರಿ ಚಾಲಕನನ್ನು ಕೊಲೆಗೈದ ಘಟನೆ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ.
ಮಣಿ ತಮಿಳುನಾಡು (36) ಕೊಲೆಯಾದ ವ್ಯಕ್ತಿ.
ಮುಡ್ರಾಲುನಲ್ಲಿರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿ ವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು, ಅನ್ಲೋಡ್ ಮಾಡಿ ಹೋಗುತ್ತಿದ್ದರು. ಅದರಂತೆ ಜ.30 ರಂದು ಸಂಜೆ 4 ಗಂಟೆಗೆ ಗೇರು ಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು, ಇನ್ನೆರಡು ಲಾರಿಗಳು ಸಂಜೆ 5.30 ಕ್ಕೆ ಬಂದಿದೆ.
ಸಂಜೆಯಾದ್ದರಿಂದ ಲಾರಿ ಅನ್ಲೋಡ್ ಆಗದೇ ಫ್ಯಾಕ್ಟರಿಯ ಬಳಿ ನಿಂತುಕೊಂಡಿತ್ತು. ಲಾರಿಗಳ ಚಾಲಕ ಹಾಗೂ ಬದಲಿ ಚಾಲಕರುಗಳು ಕೂಡಾ ಅಲ್ಲಿಯೇ ಇದ್ದು, ರಾತ್ರಿ 8.30 ಗಂಟೆಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರೋರ್ವರಿಗೆ ಲಾರಿ ನಿಲ್ಲಿಸಿದ ಸ್ಥಳದಿಂದ ಜೋರಾಗಿ ಬೊಬ್ಬೆ ಕೇಳಿಸಿದೆ.
ಅಲ್ಲಿಗೆ ಹೋಗಿ ನೋಡಿದಾಗ ಲಾರಿ ಚಾಲಕ ಮಣಿ ಎಂಬಾತನನ್ನು ಕುತ್ತಿಗೆಗೆ ಶಾಲ್ ಬಿಗಿದು ಆಯುಧವೊಂದರಿಂದ ಇರಿದು ಕೊಲೆ ಮಾಡಿರುವುದು ಕಂಡು ಬಂದಿದೆ.
ಲಾರಿಯ ಇನ್ನೋರ್ವ ಚಾಲಕ ವೀರಬಾಹು ಹಾಗೂ ಮೃತ ಮಣಿ ಗಲಾಟೆ ಮಾಡಿಕೊಳ್ಳುತ್ತಿದ್ದು, ವೀರಬಾಹುವೇ ಈ ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.