ತೆರಿಗೆ ರಿಯಾಯ್ತಿ ಪಡೆಯಿರಿ; ವಾಹನ ಬೇರೆಯವರಿಗೆ ವರ್ಗಾಯಿಸಿರಿ!

15 ವರ್ಷ ಮೀರಿದ ವಾಹನಗಳನ್ನೆಲ್ಲಾ ಗುಜರಿಗೆ ಹಾಕಬೇಕೆಂದಿಲ್ಲ

Team Udayavani, Feb 3, 2023, 6:50 AM IST

Tax

ಬೆಂಗಳೂರು: ಗುಜರಿ ಹಾಕಿದ ವಾಹನಕ್ಕೆ ಪ್ರತಿಯಾಗಿ ದೊರೆಯುವ ತೆರಿಗೆ ರಿಯಾಯ್ತಿ ಪ್ರಮಾಣಪತ್ರವನ್ನು ಹೊಸ ವಾಹನ ಖರೀದಿಸುವ ಮತ್ತೂಬ್ಬ ವ್ಯಕ್ತಿಗೆ ವರ್ಗಾವಣೆಗೆ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗುಜರಿ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಗುಜರಿ ನೀತಿ ಜಾರಿಗೆ ಸಿದ್ಧತೆಗಳು ನಡೆದಿದ್ದು, ಅದರಂತೆ ಗುಜರಿಗೆ ಹಾಕಿದ ವಾಹನಕ್ಕೆ ಪಾವತಿಸುತ್ತಿದ್ದ ತೆರಿಗೆ ಪ್ರಮಾಣ ಆಧರಿಸಿ ರಿಯಾಯ್ತಿ ದೊರೆಯಲಿದೆ. ಉದಾಹರಣೆಗೆ ಗುಜರಿಗೆ ಹಾಕಿದ ವಾಹನಕ್ಕೆ ಮಾಲಿಕರು ಒಂದು ಲಕ್ಷ ರೂ. ತೆರಿಗೆ ಪಾವತಿಸಿದ್ದರು ಅಂದುಕೊಳ್ಳೋಣ. ಆ ಪೈಕಿ 25 ಸಾವಿರ ರೂ. ಹೊಸ ವಾಹನ ಖರೀದಿಸುವಾಗ ತೆರಿಗೆ ವಿನಾಯಿತಿ ಸಿಗಲಿದೆ. ಒಂದು ವೇಳೆ ಹಳೆಯ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸಲು ಇಚ್ಛಿಸದಿದ್ದರೆ, ಆ ಪ್ರಮಾಣಪತ್ರವನ್ನು ನೀವು (ಗುಜರಿಗೆ ಹಾಕಿದ ವ್ಯಕ್ತಿ) ಹೊಸ ವಾಹನ ಖರೀದಿಸುವ ಬೇರೆ ವ್ಯಕ್ತಿಗೆ ವರ್ಗಾಯಿಸಲು ಕೂಡ ಅವಕಾಶ ಇದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಅನುಮೋದಿತ ನೀತಿಯಂತೆ ಮುಖ್ಯವಾಗಿ 15 ವರ್ಷ ಮೀರಿದ ವಾಹನಗಳನ್ನೆಲ್ಲಾ ಗುಜರಿಗೆ ಹಾಕಬೇಕೆಂದಿಲ್ಲ. ಸ್ವಯಂಪ್ರೇರಿತವಾಗಿ ಬಂದವರು ನೇರವಾಗಿ ಗುಜರಿ ಕೇಂದ್ರಕ್ಕೆ ವಾಹನಗಳನ್ನು ಕೊಂಡೊಯ್ಯಬಹುದು. ಆದರೆ, ಅವಧಿ ಮೀರಿದ ವಾಹನಗಳನ್ನು ಫಿಟ್‌ನೆಸ್‌ ಸರ್ಟಿಫಿಕೇಟ್‌ಗಾಗಿ ನೀಡುವ ಸಂದರ್ಭದಲ್ಲಿ ಯಾವುದೇ ವಾಹನ ಸತತ ಎರಡು ಬಾರಿ ಫಿಟ್‌ನೆಸ್‌ ಸರ್ಟಿಫಿಕೇಟ್‌ ಪಡೆಯುವಲ್ಲಿ ವಿಫ‌ಲವಾದರೆ, ಆ ವಾಹನವನ್ನು ಗುಜರಿಗೆ ಹಾಕಲೇಬೇಕಾಗುತ್ತದೆ.

ವಾಹನದಲ್ಲಿನ ಕಬ್ಬಿಣದ ತೂಕ ಆಧರಿಸಿ ಬೆಲೆ ನಿಗದಿ ಮಾಡಲಾಗುತ್ತದೆ. ಅದರ ಮೊತ್ತ ನೇರವಾಗಿ ವಾಹನ ಮಾಲೀಕರ ಖಾತೆಗೆ ಜಮೆಯಾಗಲಿದೆ. ಅಲ್ಲಿಂದ ಪ್ರಮಾಣ ಪತ್ರ ಪಡೆದು ಹೊಸ ವಾಹನ ಖರೀದಿ ಮಾಡುವಾಗ ರಿಯಾಯಿತಿ ಪಡೆಯಬಹುದಾಗಿದೆ.

ಎರಡು ದಿನದಲ್ಲಿ ಅರ್ಜಿ ಆಹ್ವಾನ: ನೋಂದಾಯಿತ ವಾಹನ ಗುಜರಿ ಕೇಂದ್ರಗಳನ್ನು (ಆರ್‌ವಿಎಸ್‌ಎಫ್) ತೆರೆಯಲು ಸಾರಿಗೆ ಇಲಾಖೆ ತಯಾರಿ ನಡೆಸುತ್ತಿದ್ದು, 3 ತಿಂಗಳಲ್ಲಿ ಗುಜರಿ ಕೇಂದ್ರಗಳು ಅಸ್ತಿತ್ವಕ್ಕೆ ಬರಲಿವೆ. ಈ ಸಂಬಂಧ ಆಸಕ್ತರಿಂದ ಸಾರಿಗೆ ಇಲಾಖೆ ಎರಡು ದಿನಗಳಲ್ಲಿ ಅರ್ಜಿ ಸ್ವೀಕರಿಸಲಿದ್ದು, ಹತ್ತು ಕೋಟಿಗೂ ಹೆಚ್ಚು ವಹಿವಾಟು ನಡೆಸಿರುವ ಕಂಪನಿ ಅಥವಾ ವ್ಯಕ್ತಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಗುಜರಿಗೆ ಬರುವ ವಾಹನಗಳನ್ನು ನಿಲ್ಲಿಸಲು ಅಗತ್ಯ ಜಾಗ ಇರಬೇಕಾಗುತ್ತದೆ. ಜಾಗ ಸಿದ್ಧ ಇದ್ದವರು ಅರ್ಜಿ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಒಪ್ಪಿಗೆ ಪತ್ರ, ಕಾರ್ಮಿಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯಬೇಕು. ಗುಜರಿ ಕೇಂದ್ರಕ್ಕೆ ಬೇಕಿರುವ ಯಂತ್ರಗಳನ್ನು ಅಳವಡಿಕೆ ಮಾಡಿಕೊಂಡ ಬಳಿಕ ಸಾರಿಗೆ ಇಲಾಖೆಯಿಂದ ಪರವಾನಗಿ ನೀಡಲಾಗುತ್ತದೆ. ಆ ಕೇಂದ್ರದವರೇ ಆನ್‌ಲೈನ್‌ನಲ್ಲಿ ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಎನ್‌ಒಸಿ (ನಿರಾಕ್ಷೇಪಣ ಪತ್ರ) ಪಡೆದುಕೊಳ್ಳುತ್ತಾರೆ. ಪೊಲೀಸ್‌ ಅಥವಾ ಸಾರಿಗೆ ಇಲಾಖೆಗೆ ವಾಹನಗಳ ಮಾಲೀಕರು ಅರ್ಜಿ ಸಲ್ಲಿಸಬೇಕಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.