ಫೆ.6 ರಿಂದ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ
Team Udayavani, Feb 4, 2023, 2:14 PM IST
ಉಡುಪಿ:ಕರಾವಳಿಯ 5 ಜಿಲ್ಲೆಯ 26 ಕ್ಷೇತ್ರಗಳಲ್ಲಿ ಪ್ರಜಾಧ್ವನಿಯಾತ್ರೆ ನಡೆಯಲಿದೆ. ದ. ಕ. ಜಿಲ್ಲೆಯ ಸುಳ್ಯದಲ್ಲಿ ಪ್ರಜಾಧ್ವನಿ ಯಾತ್ರೆಗೆ ಫೆ. 5ರ ರವಿವಾರ ಚಾಲನೆ ನೀಡಲಾಗುವುದು ಎಂದು ಶಾಸಕ ಆರ್.ವಿ.ದೇಶಪಾಂಡೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಫೆ. 6 ಮೂಡುಬಿದಿರೆ, ಫೆ. 7 ಕಾಪು, ಫೆ. 8ಕುಂದಾಪುರ, ಫೆ.9 ಶೃಂಗೇರಿಯಲ್ಲಿ ನಡೆಯಲಿದೆ. ಆಯಾ ಸ್ಥಳಗಳಲ್ಲಿ ಸಭೆ, ಸಮಾರಂಭ, ಅಭಿವೃದ್ಧಿ ಚರ್ಚೆಗಳು ನಡೆಯಲಿವೆ. ಕರಾವಳಿ ಪ್ರಜಾಧ್ವನಿಯಾತ್ರೆ ಉಡುಪಿ, ದ.ಕ., ಉತ್ತರ ಕನ್ನಡ,ಚಿಕ್ಕಮಗಳೂರು,ಕೊಡಗು ಜಿಲ್ಲೆಗಳಲ್ಲಿ ನಡೆಯಲಿದೆ ಎಂದರು.
ಬಿಜೆಪಿ ಪಕ್ಷ ಹಿಂದಿನ ಚುನಾವಣೆಯಲ್ಲಿ ನೀಡಿದಂತಹ ಯಾವುದೇ ಆಶ್ವಾಸನೆಗಳನ್ನುಈಡೇರಿಸಿಲ್ಲ. ರಚನಾತ್ಮಕ ಕೆಲಸಗಳೂ ನಡೆದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವಾರು ಭಾಗ್ಯಗಳನ್ನು ನೀಡಲಾಗಿತ್ತು. ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಸಹಿತ ಮಧ್ಯಮ ವರ್ಗದವರಿಗೆ ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ
Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ
ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ
Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!
Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.