![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 5, 2023, 7:40 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕನಸಿನ ವಂದೇ ಭಾರತ್ ರೈಲು ಯಶಸ್ವಿ ಓಡಾಟದ ನಡುವೆಯೇ, ಪ್ರಾದೇಶಿಕ ನಗರಗಳ ನಡುವೆ ಸಂಚರಿಸಲು “ವಂದೇ ಮೆಟ್ರೋ’ಗಳನ್ನು ಅಭಿವೃದ್ಧಿಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಸೂಚನೆ ನೀಡಿದ್ದಾರೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ, ಪ್ರಾದೇಶಿಕ ಮಟ್ಟದಲ್ಲಿ ವಂದೇ ಭಾರತ್ ಕಾರ್ಯನಿರ್ವಹಿಸಬೇಕು ಎಂಬುದು ಪ್ರಧಾನಿ ಅವರ ಯೋಜನೆ. ಆದರೆ, ಇದು ವಂದೇ ಭಾರತ್ ರೈಲ್ವೆ ಪರಿಕಲ್ಪನೆಗಿಂತ ಭಿನ್ನವಾಗಿ, ಮೆಟ್ರೋ ರೂಪದಲ್ಲಿರಬೇಕು ಎಂಬುದು ಅವರ ಆಶಯ. ಅಂದರೆ, 100 ಕಿ.ಮೀ. ವ್ಯಾಪ್ತಿಯಲ್ಲಿರುವ 2 ನಗರಗಳನ್ನು ಬೆಸೆಯುವಂತೆ ವಂದೇ ಮೆಟ್ರೋಗಳನ್ನು ಅಭಿವೃದ್ಧಿ ಪಡಿಸಲು ರೈಲ್ವೆ ಸಚಿವಾಲಯಕ್ಕೆ ಪ್ರಧಾನಿ ತಿಳಿಸಿದ್ದಾರೆ ಎಂದು ವೈಷ್ಣವ್ ಹೇಳಿದ್ದಾರೆ.
ಅಲ್ಲದೇ, ಈ ಕಾರ್ಯವನ್ನು 2023ರಲ್ಲೇ ಆರಂಭಿಸಬೇಕು ಎನ್ನುವ ಗುರಿಯನ್ನೂ ಮೋದಿ ಅವರು ನೀಡಿದ್ದು, ಅದರ ಭಾಗವಾಗಿ ರೈಲ್ವೆ ಮುಂದಿನ 12 ರಿಂದ 16 ತಿಂಗಳಲ್ಲಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದು, ಆ ಬಳಿಕ 1 ವರ್ಷದ ಒಳಗೆ ವಂದೇ ಮೆಟ್ರೋಗಳನ್ನು ಹೊರತರಲಿದೆ ಎಂದು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.