“ನೆಹರೂ’ ನಿಮಗೇಕೆ ಬೇಡ? – ಕಾಂಗ್ರೆಸ್‌ ನಾಯಕರಿಗೆ ಪ್ರಧಾನಿ ಮೋದಿ ಪ್ರಶ್ನೆ


Team Udayavani, Feb 10, 2023, 6:40 AM IST

“ನೆಹರೂ’ ನಿಮಗೇಕೆ ಬೇಡ? – ಕಾಂಗ್ರೆಸ್‌ ನಾಯಕರಿಗೆ ಪ್ರಧಾನಿ ಮೋದಿ ಪ್ರಶ್ನೆ

ಹೊಸದಿಲ್ಲಿ: ನಿಮಗೆ ನೆಹರೂ ಬಗ್ಗೆ ಅಷ್ಟೊಂದು ಗೌರವ ಇರುವುದೇ ಹೌದಾದರೆ ನೀವ್ಯಾರೂ ನಿಮ್ಮ ಹೆಸರಿಗೆ “ನೆಹರೂ’ ಎಂಬ ಉಪನಾಮ ಏಕೆ ಸೇರಿಸಿಕೊಂಡಿಲ್ಲ?

– ಇದು ನಿರ್ದಿಷ್ಟವಾಗಿ ಗಾಂಧಿ ಕುಟುಂಬ ಮತ್ತು ಒಟ್ಟಾರೆಯಾಗಿ ವಿಪಕ್ಷ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಕಿರುವ ನೇರ ಪ್ರಶ್ನೆ.

ಗುರುವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಅದಾನಿ ಸಮೂಹದ ಮೇಲಿನ ಆರೋಪಗಳಿಗೆ ಸಂಬಂಧಿಸಿ ತಮ್ಮನ್ನು ಪ್ರಶ್ನಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರಿಗೆ ಸದನದಲ್ಲೇ ತಿರುಗೇಟು ನೀಡಿದರು.

ನಾಚಿಕೆಯೇಕೆ?:

ಕೆಲವರಿಗೆ ಸರಕಾರದ ಯೋಜನೆಗಳ ಹೆಸರು, ಅದರಲ್ಲಿ ಇರುವ ಸಂಸ್ಕೃತ ಪದಗಳನ್ನು ಕಂಡೊಡನೆ ಸಿಟ್ಟು ಬರುತ್ತದೆ. ನಾನು ಕೇಳಿರುವ ಪ್ರಕಾರ 600ರಷ್ಟು ಸರಕಾರಿ ಯೋಜನೆಗಳು ಗಾಂಧಿ-ನೆಹರೂ ಕುಟುಂಬದ ಹೆಸರಿನಲ್ಲೇ ಇವೆ. ನಾವು ಎಲ್ಲಾದರೂ ನೆಹರೂ ಹೆಸರನ್ನು ಉಲ್ಲೇಖೀಸಲು ಮರೆತುಬಿಟ್ಟರೆ ಅವರು (ಕಾಂಗ್ರೆಸ್‌) ಕೂಡಲೇ ಬೇಸರಿಸಿಕೊಳ್ಳುತ್ತಾರೆ. ಆದರೆ ನನ್ನದೊಂದು ಪ್ರಶ್ನೆಯಿದೆ. ನೆಹರೂ ಅಷ್ಟೊಂದು ಶ್ರೇಷ್ಠ ವ್ಯಕ್ತಿಯಾಗಿದ್ದರೆ, ನಿಮಗೆ ಅವರ ಬಗ್ಗೆ ಅಷ್ಟೊಂದು ಗೌರವ ಇರುವುದೇ ಹೌದಾದರೆ ನೀವೇಕೆ ನಿಮ್ಮ ಹೆಸರಿನೊಂದಿಗೆ ನೆಹರೂ ಉಪನಾಮ ಸೇರಿಸಿಕೊಂಡಿಲ್ಲ? ಅದರಲ್ಲಿ ಭಯ ಅಥವಾ ನಾಚಿಕೆಪಡುವ ವಿಷಯವೇನಿದೆ ಎಂದು ಪ್ರಶ್ನಿಸಿದ್ದಾರೆ.

ಘೋಷಣೆಗಳ ಸಮರ:

ಸದನದಲ್ಲಿ ಪ್ರಧಾನಿ ಮೋದಿ ಅವರು ಮಾತನಾಡುತ್ತಿದ್ದಾಗ ಮೇಜು ಕುಟ್ಟುವ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದ ಆಡಳಿತ ಪಕ್ಷದ ಸದಸ್ಯರು, “ಮೋದಿ, ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿದ್ದರು. ಇನ್ನೊಂದೆಡೆ ಮೋದಿ ಭಾಷಣದ ನಡುವೆಯೇ ವಿಪಕ್ಷಗಳ ನಾಯಕರೆಲ್ಲರೂ “ಮೋದಿ-ಅದಾನಿ ಭಾಯಿ ಭಾಯಿ, ಅದಾನಿ ಬಗ್ಗೆ ಏನಾದರೂ ಮಾತಾಡಿ, ಅದಾನಿಯ ಗುಲಾಮಿತನಕ್ಕೆ ಅಂತ್ಯ ಹಾಡಿ’ ಎಂದು ಘೋಷಣೆ ಕೂಗುತ್ತಿದ್ದರು. ಇದರಿಂದ ಆಕ್ರೋಶಗೊಂಡ ಮೋದಿ, ಈ ಸದನದಲ್ಲಿ ಏನೇನು ಹೇಳಲಾಗುತ್ತದೆಯೋ ಅದನ್ನು ಇಡೀ ದೇಶವೇ ಆಲಿಸುತ್ತದೆ. ಕೆಲವು ಸಂಸದರು ಸದನದ ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ ಎಂದು ಕಿಡಿಕಾರಿದರು. ಜತೆಗೆ ನೀವು ನಮ್ಮತ್ತ ಕೆಸರನ್ನು ಎಸೆದಷ್ಟೂ ಕಮಲ ಅರಳುತ್ತಲೇ ಹೋಗುತ್ತದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.