ಲಿಖಿತ್ ಶೆಟ್ಟಿಯ ‘ಫುಲ್ ಮೀಲ್ಸ್’ ತೆರೆಗೆ ಬರಲು ರೆಡಿ


Team Udayavani, Feb 10, 2023, 4:17 PM IST

likith shetty kushi ravi is in full meals

ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಸಿಗುವ “ಫ‌ುಲ್‌ ಮೀಲ್ಸ್‌’ ಬಗ್ಗೆ ಕೇಳಿರುತ್ತೀರಿ. ಈಗ ಇದೇ “ಫುಲ್‌ ಮೀಲ್ಸ್‌’ ಎಂಬ ಹೆಸರಿನಲ್ಲಿ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಥಿಯೇಟರ್‌ನಲ್ಲಿ ಸಿಗುವ ಈ “ಫ‌ುಲ್‌ ಮೀಲ್ಸ್‌’ ಪ್ರೇಕ್ಷಕರಿಗೆ ಮನಸ್ಸಿಗೆ ಫ‌ುಲ್‌ ಖುಷಿ ತುಂಬಿಸುತ್ತದೆ ಎಂಬುದು ಚಿತ್ರತಂಡದ

ಮಾತು. ಇತ್ತೀಚೆಗಷ್ಟೇ ಸದ್ದಿಲ್ಲದೆ, ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಸದ್ಯ ಬೆಂಗಳೂರಿನ  ಅರಮನೆ ಮೈದಾನದಲ್ಲಿ ಹೀರೋ ಇಂಟ್ರಡಕ್ಷನ್‌ ಚಿತ್ರೀಕರಣ ನಡೆಯುತ್ತಿದೆ. ಇದೇ ವೇಳೆ ಪತ್ರಕರ್ತರು ಮತ್ತು ಮಾಧ್ಯಮಗಳನ್ನು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡ, “ಫುಲ್‌ ಮೀಲ್ಸ್‌’ ಬಗ್ಗೆ ಒಂದಷ್ಟು ಮಾತನಾಡಿತು.

“ಫ‌ುಲ್‌ ಮೀಲ್ಸ್’ ಸಿನಿಮಾದಲ್ಲಿ ಲಿಖೀತ್‌ ಶೆಟ್ಟಿ, ಖುಷಿ, ತೇಜಸ್ವಿನಿ ಶರ್ಮ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಚಂದ್ರಕಲಾ ಮೋಹನ್‌, ರಮೇಶ್‌ ಪಂಡಿತ್‌, ವಿಜಯ್‌ ಚೆಂಡೂರ್‌, ಗಣೇಶರಾವ್‌ ಕೇಸರ್ಕರ್‌, ರಾಜೇಶ ನಟರಂಗ, ಸಾಧುಕೋಕಿಲ ಮತ್ತಿತರರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಮೊದಲಿಗೆ “ಫ‌ುಲ್‌ ಮೀಲ್ಸ್‌’ ಬಗ್ಗೆ ಮಾತನಾಡಿದ ನಾಯಕ ಕಂ ನಿರ್ಮಾಪಕ ಲಿಖೀತ್‌ ಶೆಟ್ಟಿ, “ಇದೊಂದು ಔಟ್‌ ಆ್ಯಂಡ್‌ ಔಟ್‌ ರೊಮ್ಯಾಂಟಿಕ್‌ ಕಾಮಿಡಿ ಸಬೆjಕ್ಟ್ ಸಿನಿಮಾ. ಮೊದಲ ಹಂತದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೂಟಿಂಗ್‌ ನಡೆಸುತ್ತಿದ್ದೇವೆ. ಒಬ್ಬ ಫೋಟೋಗ್ರಾಫ‌ರ್‌ನ ಕಥೆ ಈ ಸಿನಿಮಾದಲ್ಲಿದೆ. ಮದುವೆ ಮನೆಗೆ ಹೋದ ಪೋಟೋಗ್ರಾಫ‌ರ್‌ ಒಬ್ಬನಿಗೆ ಮದುಮಗಳ ಮೇಲೆ ಲವ್‌ ಆದರೆ, ನಂತರ ಏನೆಲ್ಲ ಆಗುತ್ತದೆ ಎನ್ನುವುದು ಸಿನಿಮಾದ ಕಥೆಯ ಒಂದು ಎಳೆ’ ಎಂದು ಕಥಾಹಂದರ ಬಿಚ್ಚಿಟ್ಟರು.

ಇನ್ನು ಚಿತ್ರದ ನಾಯಕಿ ಖುಷಿ ರವಿ, ಸಿನಿಮಾದಲ್ಲಿ ಪೂಜಾ ಎಂಬ ಮದುಮಗಳ ಪಾತ್ರದಲ್ಲಿ ಕಾಣಿಸಿಕೊಂಡರೆ, ಮತ್ತೂಬ್ಬ ನಾಯಕಿ ತೇಜಸ್ವಿನಿ ಶರ್ಮಾ ಮೇಕಪ್‌ ಆರ್ಟಿಸ್ಟ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಮೊದಲ ಬಾರಿಗೆ ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ಖುಷಿಯಿದೆ’ ಎಂಬುದು ಇಬ್ಬರೂ ನಾಯಕಿಯರ ಒಕ್ಕೊರಲ ಮಾತು. “ಎಲ್ಲ ಫೋಟೋಗ್ರಾಫ‌ರ್‌ಗೂ ಕನೆಕ್ಟ್ ಆಗುವಂಥ ಸಬ್ಜೆಕ್ಟ್ ಸಿನಿಮಾದಲ್ಲಿದೆ’ ಎಂಬುದು ನಿರ್ದೇಶಕ ವಿನಾಯಕ್‌ ಮಾತು.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.