ಕೆ.ಎಚ್‌.ಪಾಟೀಲ ರಾಜಕಾರಣಿಗಳಿಗೆ ಮಾದರಿ: ಬಸವಲಿಂಗ ಸ್ವಾಮೀಜಿ

ನಾವೆಲ್ಲಾ ಅವರ ರಾಜಕೀಯ ಜೀವನದಿಂದ ಪ್ರಭಾವಿತರಾದವರು

Team Udayavani, Feb 10, 2023, 6:46 PM IST

ಕೆ.ಎಚ್‌.ಪಾಟೀಲ ರಾಜಕಾರಣಿಗಳಿಗೆ ಮಾದರಿ: ಬಸವಲಿಂಗ ಸ್ವಾಮೀಜಿ

ಹುಬ್ಬಳ್ಳಿ: ಇಂದಿನ ಕಲುಷಿತ ರಾಜಕಾರಣ ಶುದ್ಧೀಕರಣವಾಗಲು ಸಹಕಾರ ರಂಗದ ಭೀಷ್ಮ ಕೆ.ಎಚ್‌. ಪಾಟೀಲರ ತತ್ವಾದರ್ಶಗಳು ಅವಶ್ಯವಾಗಿವೆ. ಜನಹಿತ ಬಯಸುವ ಸಂಸ್ಥೆಗಳನ್ನು ಕಟ್ಟಿ ಅವರು ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆಂದು ರುದ್ರಾಕ್ಷಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.

ಇಂದಿರಾ ಗಾಜಿನಮನೆ ಉದ್ಯಾನವನದಲ್ಲಿ ದಿ| ಕೆ.ಎಚ್‌. ಪಾಟೀಲರ ಪುತ್ಥಳಿ ಬಳಿ ನಡೆದ 31ನೇ ಪುಣ್ಯಸ್ಮರಣೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಹಕಾರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಮಾಧ್ಯಮ, ಧಾರ್ಮಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ಕೆ.ಎಚ್‌. ಪಾಟೀಲರ ಸಾಧನೆ ನಾಡಿಗೆ ಬೆಳಕು ತಂದುಕೊಟ್ಟಿದೆ. ಇಂದು ರಾಜಕಾರಣವೆಂದರೆ ಮೂಗು ಮುರಿದುಕೊಳ್ಳುವ ಕಾಲದಲ್ಲಿ ಸೇವೆ ಅನ್ನುವ ಪದ ಅರ್ಥ ಕಳೆದುಕೊಂಡಿದೆ. ಕೆ.ಎಚ್‌. ಪಾಟೀಲರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಆ ಸೇವೆಗೆ ಅರ್ಥ ಕೊಡಬೇಕಾಗಿದೆ ಎಂದರು.

ಮಾಜಿ ಶಾಸಕ ಎಂ.ಎಸ್‌. ಅಕ್ಕಿ ಮಾತನಾಡಿ, ನಾವೆಲ್ಲಾ ಅವರ ರಾಜಕೀಯ ಜೀವನದಿಂದ ಪ್ರಭಾವಿತರಾದವರು. ಕೆ.ಎಚ್‌. ಪಾಟೀಲರ ಸಾರ್ವಜನಿಕ ಜೀವನ ಸಮಾಜಕ್ಕೆ ಅಷ್ಟೇ ಅಲ್ಲ ದೇಶಕ್ಕೆ ಮಾದರಿ. ಇಂತಹ ಮಹಾನ್‌ ನಾಯಕರ ಪುತ್ಥಳಿಯನ್ನು ಮೂಲಸ್ಥಳದಲ್ಲಿ ಪ್ರತಿಷ್ಠಾಪಿಸಿ ಗೌರವ ಸಲ್ಲಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಮೇಯರ್‌ ಮೆಮೋರಿಯಲ್‌ ಚರ್ಚ್‌ನ ಫಾಸ್ಟರ್‌ ರೆವರೆಂಡ್‌ ರಾಜು ಮೇದಗೊಪ್ಪ , ಮುಸ್ಲಿಂ ಧರ್ಮಗುರು ಮೌಲಾನಾ ಮುಕ್ತಾರ ಅಹ್ಮದ
ಮಾತನಾಡಿದರು.

ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಜಗಜ್ಯೋತಿ ಬಸವೇಶ್ವರರ ಹಾಗೂ ದಿ| ಕೆ.ಎಚ್‌. ಪಾಟೀಲರ ಪುತ್ಥಳಿಗಳನ್ನು ಮೂಲ ಸ್ಥಳದಲ್ಲಿಯೇ ಸ್ಥಾಪಿಸಬೇಕು. ಜಿಲ್ಲಾಡಳಿತ ಮಾತುಕೊಟ್ಟಂತೆ ನಡೆದುಕೊಳ್ಳಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದರು. ಇದಕ್ಕೂ ಮೊದಲು ದಿ| ಕೆ.ಎಚ್‌. ಪಾಟೀಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಖಂಡರಾದ ದೊರೈರಾಜ ಮಣ್ಣಿಕುಂಟ್ಲ, ಎಂ.ಎಂ. ಗೌಡರ, ಪಾರಸಮಲ್‌ ಜೈನ್‌, ಸದಾನಂದ ಡಂಗನವರ, ಬಲವಂತ ಗುಂಡಮಿ, ಶೇಖಣ್ಣ ಬೆಂಡಿಗೇರಿ, ಗೋಪಣ್ಣ ನಲವಡಿ, ಡಿ.ಎನ್‌. ದೊಡ್ಡಮನಿ, ಭೀಮಣ್ಣ ಬಡಿಗೇರ, ವೇಮನ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಆರ್‌.ಕೆ. ಪಾಟೀಲ, ಮನೋಜ ಪಾಟೀಲ, ಸತೀಶ ಮಾಡಳ್ಳಿ, ರಘು ಕೆಂಪಲಿಂಗನಗೌಡರ, ಗಿರಿಮಲ್ಲ ಮತ್ತಿಕಟ್ಟಿ, ಮಹಾವೀರ ಜೈನ, ಜಿಪಂ ಮಾಜಿ ಅಧ್ಯಕ್ಷ ಎಸ್‌.ಆರ್‌. ಪಾಟೀಲ, ಶರಣಪ್ಪ ಕೊಟಗಿ, ವಿ.ಆರ್‌. ಹೊಸಮನಿ, ವಿ.ಎಚ್‌. ಶಿರೋಳ, ಎಚ್‌.ಎಚ್‌. ಕಿರೇಸೂರ, ಅಶೋಕ ಇಟಗಿ, ಕೆ.ವ್ಹಿ. ಹುಲಕೋಟಿ, ಉಮೇಶ ಬಳಿಗಾರ ಮೊದಲಾದವರಿದ್ದರು.

ವಿಶ್ವಭಾರತಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರಿಂದ, ಬುದ್ಧ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಜರುಗಿತು. ಎಫ್‌.ಎಚ್‌. ಜಕ್ಕಪ್ಪನವರ ಸ್ವಾಗತಿಸಿದರು. ಮಹೇಂದ್ರ ಸಿಂಘಿ ಗಣ್ಯರಿಗೆ ಗೌರವ ಸಲ್ಲಿಸಿದರು. ಪಾಲಿಕೆಯ ಮಾಜಿ ಸದಸ್ಯ ಮೋಹನ ಹಿರೇಮನಿ ವಂದಿಸಿದರು. ಪ್ರಾಚಾರ್ಯ ಎಸ್‌.ಬಿ. ಸಣಗೌಡರ ನಿರೂಪಿಸಿದರು.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.