ಚುನಾವಣಾ ಪೂರ್ವ ತಯಾರಿ: ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ನೇತೃತ್ವದ ಮೂರು ತಂಡಗಳು ಭೇಟಿ


Team Udayavani, Feb 11, 2023, 11:27 AM IST

tdy-5

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023 ರ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಭಾರತ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ 5 ಕ್ಕೂ ಹೆಚ್ಚು ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್‌ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಇವಿಎಮ್‌ ಮತ್ತು ವಿವಿಪ್ಯಾಟ್‌ ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದರು. ಮತದಾರರ ಜಾಗೃತಿಗಾಗಿ ಸ್ವೀಪ್‌ ಮೂಲಕ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಕಲಬುರಗಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ತಯಾರಿ ಕುರಿತಂತೆ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಮತ್ತು ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್‌ ಅವರು ಭಾಗವಹಿಸಿದ್ದರು.

ಭಾರತ ಚುನಾವಣಾ ಆಯೋಗದ ನಿರ್ದೇಶಕರಾದ ಶ್ರೀಮತಿ ಶುಭ್ರ ಸಕ್ಸೇನಾ ಹಾಗೂ ಕಾರ್ಯದರ್ಶಿ ಬಿ.ಸಿ ಪಾತ್ರ ಅವರ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಗೆ ಬೇಟಿ ನೀಡಿ ಇವಿಎಮ್‌ ಮತ್ತು ವಿವಿಪ್ಯಾಟ್‌ ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದರು. ಮತದಾರರ ಜಾಗೃತಿಗಾಗಿ ಸ್ವೀಪ್‌ ಮೂಲಕ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಮೈಸೂರು ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ತಯಾರಿ ಕುರಿತಂತೆ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್‌ ಕುಮಾರ್ ಅವರು ಭಾಗವಹಿಸಿದ್ದರು.‌

 ಇದನ್ನೂ ಓದಿ:ಟರ್ಕಿ,ಸಿರಿಯಾದಂತೆ ಭಾರತದ ಈ ಪ್ರದೇಶಗಳಲ್ಲಿ ಭೀಕರ ಭೂಕಂಪ ಸಂಭವಿಸಬಹುದು: ಹಿರಿಯ ವಿಜ್ಞಾನಿ

ಭಾರತ ಚುನಾವಣಾ ಆಯೋಗದ ಸ್ವೀಪ್‌ ನಿರ್ದೇಶಕರಾದ ಸಂತೋಷ್‌ ಅಜ್ಮೇರ ಅವರ ನೇತೃತ್ವದ ತಂಡ ಮತದಾರರ ಜಾಗೃತಿಯ ರಾಜ್ಯ ಸ್ವೀಪ್‌ ಕಾರ್ಯಕ್ರಮಗಳ ಪೂರ್ವತಯಾರಿ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್‌ ನೂಡಲ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಸ್ವೀಪ್‌ ನೂಡಲ್‌ ಅಧಿಕಾರಿ ಪಿ.ಎಸ್‌ ವಸ್ತ್ರದ್‌ ಅವರು ಉಪಸ್ಥಿತರಿದ್ದರು.

ಫೆಬ್ರವರಿ 7 ರಂದು ರಾಜ್ಯಕ್ಕೆ ಆಗಮಿಸಿದ ಈ ಮೂವರು ಹಿರಿಯ ಅಧಿಕಾರಿಗಳ ತಂಡಗಳಲ್ಲಿ ಒಂದು ತಂಡ ರಾಜ್ಯದ ಯಾದಗಿರಿ ಮತ್ತು ಕಲಬುರಗಿ ವಿಭಾಗ, ಮತ್ತೊಂದು ಚಾಮರಾಜನಗರ ಮತ್ತು ಮೈಸೂರು, ಮೂರನೇ ತಂಡ ಸ್ವೀಪ್‌ ನಿರ್ದೇಶಕರ ನೇತೃತ್ವದಲ್ಲಿ ಬೆಂಗಳೂರು ವಲಯ ಮತ್ತು ಜಿಲ್ಲಾ ನೂಡಲ್‌ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‌ ನಡೆಸಿದರು. ಮೊದಲ ದಿನ ಮತಗಟ್ಟೆಗಳು ಸೇರಿದಂತೆ ವಿವಿಧ ರೀತಿಯ ಮೊದಲ ಹಂತದ ಪೂರ್ವತಯಾರಿ ಕಾರ್ಯಗಳನ್ನು ಖುದ್ದಾಗಿ ವೀಕ್ಷಿಸಿದ ತಂಡಗಳು ಎರಡನೆ ದಿನ ಆಯಾ ವಲಯ ಮಟ್ಟದ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಫೆಬ್ರವರಿ 9 ಕ್ಕೆ ಬೆಂಗಳೂರು ನಗರಕ್ಕೆ ಆಗಮಿಸಿದ ಈ ಮೂರು ತಂಡಗಳ ಹಿರಿಯ ಅಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿ ನೇತೃತ್ವದಲ್ಲಿ ಬೆಳಗಾವಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಮಧ್ಯಾಹ್ನದ ನಂತರ ವಿಧಾನಸೌಧದಲ್ಲಿ ಬೆಂಗಳೂರು ವಲಯದ ಜಿಲ್ಲಾದಿಕಾರಿಗೊಂದಿಗೆ ಸಭೆ ನಡೆಸಿ ನಂತರ ನವದೆಹಲಿಗೆ ಪ್ರಯಾಣ ಬೆಳಸಿದರು.

ಭಾರತ ಚುನಾವಣಾ ಆಯೋಗದ ಈ ಮೂರು ತಂಡಗಳ ಈ ಮೂರು ದಿನಗಳ ರಾಜ್ಯ ಬೇಟಿಯಲ್ಲಿ ಮುಖ್ಯವಾಗಿ ನಡೆಸಿದ ಸಭೆಗಳಲ್ಲಿ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನ ನಡೆದಿರುವ ಮತಗಟ್ಟೆಗಳನ್ನು ಗುರುತಿಸುವುದು, ಕಡಿಮೆ ಮತದಾನಕ್ಕೆ ಕಾರಣಗಳನ್ನು ಕಂಡು ಹಿಡಿದು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿಯುವುದು, ಮತದಾನದ ಜಾಗೃತಿ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು. ಮತಗಟ್ಟೆಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಅಗತ್ಯವಿರುವು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಅಗತ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸುವುದು, ಹೊಸ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಹೆಚ್ಚಿನ ಯುವಮತದಾರರನ್ನು ಸೆಳೆಯುವುದು ಸೇರಿದಂತೆ ಮತದಾರರ ಪಟ್ಟಿಯ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಲು ಚರ್ಚಿಸಲಾಯಿತು.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.