ನಮ್ಮ ಸಂತೆ ಉದ್ಘಾಟನೆ; ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಅಗತ್ಯ: ಡಾ| ಗಿರಿಧರ್‌

ಉದಯವಾಣಿ- ಎಂಐಸಿ ಸಹಯೋಗದ "ನಮ್ಮ ಸಂತೆ' ಉದ್ಘಾಟನೆ

Team Udayavani, Feb 11, 2023, 3:40 PM IST

mic-1

ಮಣಿಪಾಲ: ಆರ್ಥಿಕ ವ್ಯವಸ್ಥೆ ಉತ್ತೇಜನಕ್ಕೆ ಸ್ಥಳೀಯ ಮಾರಾಟಗಾರರಿಗೆ ಅಗತ್ಯ ಪ್ರೋತ್ಸಾಹ ಮತ್ತು ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪುಗೊಳ್ಳಬೇಕಿದೆ ಎಂದು ಮಾಹೆ ರಿಜಿಸ್ಟ್ರಾ ರ್‌ ಡಾ| ಗಿರಿಧರ್‌ ಕಿಣಿ ಹೇಳಿದರು.

ಉದಯವಾಣಿ- ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಸಹಯೋಗದಲ್ಲಿ ಎಂಐಸಿ ಕ್ಯಾಂಪಸ್‌ನಲ್ಲಿ ಎರಡು ದಿನ ಆಯೋಜಿಸಲಾದ “ನಮ್ಮ ಸಂತೆ’ಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಉದಯವಾಣಿ-ಎಂಐಸಿ ಸಹಯೋಗದಲ್ಲಿ ಇದೊಂದು ವಿಶಿಷ್ಟ ಸಮಾಜಮುಖಿ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಕಲಿಕೆ ಜತೆಗೆ ಇಂಥಹ ಸಾಮಾಜಿಕ ನೆಲೆಗಟ್ಟಿನ ಕಾರ್ಯಕ್ರಮಗಳ ನಿರ್ವಹಣೆ, ಆಯೋಜನೆ ಬಗ್ಗೆ ಉತ್ತಮ ಅನುಭವವನ್ನು ಪಡೆದುಕೊಳ್ಳುತ್ತಿರುವುದು ಶ್ಲಾಘನೀಯ. ಸಣ್ಣ ಉದ್ಯಮಿಗಳಿಗೆ, ಸ್ವ ಉದ್ಯೋಗದಾತರಿಗೆ ಈ ರೀತಿ ದೊಡ್ಡಮಟ್ಟದ ಮಾರುಕಟ್ಟೆ ಒದಗಸುವ ಮೂಲಕ ಸ್ಥಳೀಯ ಆರ್ಥಿಕತೆಗೆ ಶಕ್ತಿ ನೀಡುವುದು ಇಂದಿನ ಅಗತ್ಯವಾಗಿದೆ. ಮಣಿಪಾಲ ಪರಿಸರದಲ್ಲಿ ಇಂಥ ಕಾರ್ಯಕ್ರಮ ಉತ್ತಮ ಸ್ಪಂದನೆ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಮಣಿಪಾಲ ಮೀಡಿಯ ನೆಟ್‌ವಕ್‌ ಲಿ. ಸಿಇಒ ವಿನೋದ್‌ ಕುಮಾರ್‌ ಮಾತನಾಡಿ, ಸಣ್ಣ, ಮಧ್ಯಮ, ಗೃಹ ಕೈಗಾರಿಕೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ರೂಪಿಸಿ, ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಸಬೇಕು ಎಂಬ ಚಿಂತನೆಯಲ್ಲಿ “ನಮ್ಮ ಸಂತೆ’ ಆಯೋಜಿಸಲಾಗಿದೆ. ಕರಕುಶಲ, ಗೃಹಪಯೋಗಿ ಸಣ್ಣ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕೊಡುವ ಮೂಲಕ ಸ್ಥಳೀಯ ಆರ್ಥಿಕತೆಗೆ ಬೆಂಬಲ ನೀಡುವುದು ಇಲ್ಲಿನ ಜನರ ಕೌಶಲವನ್ನು ಗೌರವಿಸುವುದು ನಮ್ಮ ಆಶಯ. ದೇಸಿ ಕರಕುಶಲ ಉತ್ಪನ್ನಗಳು, ಆಹಾರ ಉತ್ಪನ್ನಗಳಂತ ಸಣ್ಣಸಣ್ಣ ಮಾರಾಟಗಾರರನ್ನು ಒಗ್ಗೂಡಿಸಿದ್ದು, ನಮ್ಮ ಸಂತೆ ಎಂಬುದು ಒಂದೆ ನೆಲೆಯಲ್ಲಿ ದೊಡ್ಡ ಸ್ಥಳೀಯ ಮಾರುಕಟ್ಟೆಯಾಗಿ ಅನಾವರಣಗೊಂಡಿದೆ. ಉಡುಪಿ-ಮಣಿಪಾಲ ಜನರು ಇದರ ಸದುಪಯೋಗಪಡಿಸಿಕೊಂಡ ಸ್ಥಳೀಯ ಆರ್ಥಿಕತೆಗೆ ಬೆಂಬಲಿಸಬೇಕು ಎಂದು ಆಶಿಸಿದರು.

ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಭಾರತವು ಮುಂಚೂಣಿ ನೆಲೆಯಲ್ಲಿರುವಾಗ ಕೋವಿಡ್‌ ಹೊಡೆತದಿಂದಾಗಿ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸುವಂತಾಯಿತು. ಅಂದು ಪ್ರಧಾನಿ ನರೇಂದ್ರ ಮೋದಿ ಅವರ ಸ್ಥಳೀಯ ಮಾರುಕಟ್ಟೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಲೋಕಲ್‌ ಫಾರ್‌ ವೋಕಲ್‌ ಎಂಬ ಸ್ಲೋಗನ್‌ ದೊಡ್ಡಮಟ್ಟದಲ್ಲಿ ಪರಿಣಾಮ ಬೀರಿತು. ಸ್ಥಳೀಯ ಉತ್ಪನ್ನಗಳ ಖರೀದಿಗೆ ಜನರು ಹೆಚ್ಚು ಆಸಕ್ತಿ ವಹಿಸಬೇಕು.

ಸ್ಥಳೀಯ ಮಾರುಕಟ್ಟೆ ಆರ್ಥಿಕ ಬಲ ಸಿಗಬೇಕು ಇದರಿಂದ ಸಣ್ಣ ಮತ್ತು ಮಧ್ಯಮವರ್ಗದ ಉದ್ದಿಮೆಗಳಿಗೆ ಪುನಶ್ಚೇತನ ಸಿಗಲಿದೆ. ಸ್ಥಳೀಯ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಇಲ್ಲದ ಕಾಲಘಟ್ಟದಲ್ಲಿ ಲೋಕಲ್‌ ಫಾರ್‌ ವೋಕಲ್‌ ದೊಡ್ಡ ಬಲವಾಯಿತು. ಕೇಂದ್ರ ಸರಕಾರದ ಹಲವಾರು ಸ್ಟಾರ್ಟ್‌ಅಪ್‌ ಯೋಜನೆಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇಲ್ಲ. ಎಂಎಸ್‌ಎಂಇ, ಮುದ್ರ ಯೋಜನೆಗಳು ಸಣ್ಣ ಮತ್ತು ಮಧ್ಯಮ ವರ್ಗದ ಭರವಸೆಯಾಗಿದೆ. ಡಿಜಿಟಲ್‌ ಇಂಡಿಯ ಯೋಜನೆ ಸ್ಥಳೀಯ ಉತ್ಪನ್ನಗಳ ಮಾರಾಟ ಮತ್ತು ಪ್ರಚಾರಕ್ಕೆ ದೊಡ್ಡ ವೇದಿಕೆಯಾಗಿದೆ ಎಂದು ಮಾಹೆಯ ಎಂಯುಟಿಬಿಐ ಎಜಿಎಂ ಡಾ| ಸಂತೋಷ್‌ ರಾವ್‌ ಹೇಳಿದರು.

ಎಂಐಸಿ ನಿರ್ದೇಶಕಿ ಡಾ| ಪದ್ಮಾರಾಣಿ, ಕಾರ್ಪೋರೇಟ್‌ ಕಮ್ಯೂನಿಕೇಶನ್‌ ಎಚ್‌ಒಡಿ ಡಾ| ಪದ್ಮಕುಮಾರ್‌ ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಡಾ| ಮಂಜುಳಾ ವೆಂಕಟರಾಘವನ್‌ ಸ್ವಾಗತಿಸಿ, ಪೂನಂ ಗೌರ್‌ ವಂದಿಸಿದರು. ಶ್ರುತಿ ಸುಬ್ರಹ್ಮಣ್ಯ ನಿರೂಪಿಸಿದರು.

ನಮ್ಮ ಸಂತೆಯ ವಿಶೇಷತೆ:

*ಎರಡು ದಿನಗಳ ಕಾಲ ಎಂಐಸಿ ಕ್ಯಾಂಪಸ್ ನಲ್ಲಿ ನಡೆಯಲಿರುವ ನಮ್ಮ ಸಂತೆಯಲ್ಲಿ ಕರಕುಶಲ, ಮಣ್ಣಿನ ಉತ್ಪನ್ನಗಳು, ನಾನಾ ಬಗೆಯ ಅಲಂಕಾರಿಕ ವಸ್ತುಗಳು, ಖಾದಿ ದಿರಿಸುಗಳು, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

*ಚನ್ನಪಟ್ಟಣ ಗೊಂಬೆ, ಇಳಕಲ್ ಸೀರೆ, ಕಾಂಚಿಪುರಂ, ಪೈತಾನಿ, ಮಹೇಶ್ವರಿ, ಪ್ಯೂರ್ ಸಿಲ್ಕ್, ಕ್ರಾಫ್ಟ್, ಗ್ರೀಟಿಂಗ್ಸ್, ಹ್ಯಾಂಡ್ ಮೇಡ್ ಬ್ಯಾಗ್ಸ್, ಹತ್ತಿಯ ಕೈಮಗ್ಗದ ಸೀರೆಗಳ ಪ್ರದರ್ಶನ ಮತ್ತು ಮಾರಾಟ.

*ವಿದ್ಯಾರ್ಥಿಗಳೇ ತಯಾರಿಸಿದ ಆಕರ್ಷಕ ಗೋಡೆ ಗಡಿಯಾರ, ಬನಿಯನ್, ಕನ್ನಡಕ, ಗೋವಿನ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

 

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.