![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 12, 2023, 9:18 PM IST
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್ನಲ್ಲಿ ಫೆ.13ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿ ಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರವಾಗಿ ಆರೋಪಿಸಿದರು.
ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರ ಇಲಾಖೆ ವ್ಯಾಪ್ತಿಗೆ ಸೇರಿರುವ ಡಿಸಿಸಿ ಬ್ಯಾಂಕ್ ಸೂಪರ್ಸೀಡ್ ಆಗುವುದನ್ನು ಹಾಗೂ ಜೈಲುಪಾಲಾಗುವುದನ್ನು ತಪ್ಪಿಸಿದ ಸಿದ್ದರಾಮಯ್ಯ ಅವರ ಋಣ ತೀರಿಸಿಕೊಳ್ಳಲು ಸುಮಾರು 50 ಲಕ್ಷ ರೂ.ಗಳನ್ನು ವೇಮಗಲ್ ಸಮಾವೇಶಕ್ಕೆ ಖರ್ಚು ಮಾಡಿ 25 ಸಾವಿರ ಮಹಿಳೆಯರನ್ನು ಸಂಘಟಿಸುವ ಜವಾಬ್ದಾರಿಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷರೇ ಹೊತ್ತಿದ್ದಾರೆ ಎಂದು ದೂರಿದರು.
ಕಳೆದ ಎರಡು ಬಾರಿ ಕೋಲಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಅವರ ಸಮಾವೇಶಕ್ಕೆ ಕನಿಷ್ಠ 10 ಸಾವಿರ ಮಂದಿಯನ್ನೂ ಸೇರಿಸಲಾಗಿರಲಿಲ್ಲ ಎಂದು ಟೀಕಿಸಿದರು.
ಸ್ವಸಹಾಯ ಮಹಿಳಾ ಸಂಘಗಳಿಗೆ ಬಡ್ಡಿ ರಹಿತವಾಗಿ 10 ಲಕ್ಷ ರೂ.ಸಾಲ ನೀಡುವುದಾಗಿ ಹಾಗೂ ಸಾಲವನ್ನು ಮನ್ನಾ ಮಾಡುವುದಾಗಿ ಸುಳ್ಳು ಭರವಸೆ ನೀಡಲಾಗುತ್ತಿದೆ.
ಸಮಾವೇಶದಲ್ಲಿ ಭಾಗವಹಿಸುವ ಮಹಿಳೆಯರಿಗೆ ಹಂಚಲು ರೇಷ್ಮೆ ಸೀರೆಗಳನ್ನು ತರಲು ಡಿಸಿಸಿ ಬ್ಯಾಂಕ್ ನಿರ್ದೇಶಕ ಕಡಗಟ್ಟೂರು ದಯಾನಂದ್ ಅವರಿಗೆ 25 ಲಕ್ಷ ರೂ. ನೀಡಲಾಗಿದೆ. ಮೂಗುತಿಗಳನ್ನು ತರಲು ಟಿಎಪಿಸಿಎಂಸಿ ಅಧ್ಯಕ್ಷ ನಾಗನಾಳ ಸೋಮಣ್ಣ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.
You seem to have an Ad Blocker on.
To continue reading, please turn it off or whitelist Udayavani.